ಮುಂದಿನ ಆರು ತಿಂಗಳು ಇನ್ನೂ ಕೆಟ್ಟದಾಗಿರಲಿದೆ; ಬಿಲ್ ಗೇಟ್ಸ್ ವಾರ್ನಿಂಗ್
ವಾಷಿಂಗ್ಟನ್, ಡಿಸೆಂಬರ್ 14: ಕೋವಿಡ್ 19 ಲಸಿಕೆ ಅಭಿವೃದ್ಧಿಯಲ್ಲಿ ತೊಡಗಿಕೊಂಡಿರುವ ಸಂಸ್ಥೆಯ ಭಾಗವಾಗಿರುವ ಮೈಕ್ರೊಸಾಫ್ಟ್ ಸಂಸ್ಥಾಪಕ ಬಿಲ್ ಗೇಟ್ಸ್ ಅಮೆರಿಕದಲ್ಲಿ ಕೊರೊನಾ ವೈರಸ್ ಪ್ರಕರಣಗಳ ಕುರಿತು ಎಚ್ಚರಿಕೆಯನ್ನು ನೀಡಿದ್ದಾರೆ. ಇನ್ನು ಮುಂದಿನ ನಾಲ್ಕರಿಂದ ಆರು ತಿಂಗಳು ಕೊರೊನಾ ಸೋಂಕಿನ ಪ್ರಕರಣಗಳ ಸ್ಥಿತಿಗತಿ ಮತ್ತಷ್ಟು ಹದಗೆಡಲಿದೆ ಎಂದು ಎಚ್ಚರಿಸಿದ್ದಾರೆ.
ಇನ್ ಸ್ಟಿಟ್ಯೂಟ್ ಫಾರ್ ಹೆಲ್ತ್ ಮೆಟ್ರಿಕ್ಸ್ ಅಂಡ್ ಎವಾಲ್ಯುಯೇಷನ್ ಮುಂದಿನ ಆರು ತಿಂಗಳುಗಳಲ್ಲಿ ಕೊರೊನಾ ವೈರಸ್ ನಿಂದ 2,00,000 ಸಾವು ಸಂಭವಿಸುವ ಎಚ್ಚರಿಕೆ ನೀಡಿದೆ. ಪರಿಸ್ಥಿತಿ ಇನ್ನಷ್ಟು ಹದಗೆಡುವ ಸೂಚನೆಯಿದೆ. ಆದರೆ ಈಗಲೇ ಎಚ್ಚೆತ್ತುಕೊಳ್ಳುವುದು ಅತಿ ಅನಿವಾರ್ಯವಾಗಿದೆ. ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿದರಷ್ಟೇ ಸಾವಿನ ಪ್ರಕರಣಗಳನ್ನು ತಡೆಹಿಡಿಯಲು ಸಾಧ್ಯವಾಗಲಿದೆ ಎಂದು ಸಲಹೆ ನೀಡಿದ್ದಾರೆ.
ಕೆಲವು ವಾರಗಳಿಂದೀಚೆ ಅಮೆರಿಕದಲ್ಲಿ ಹೆಚ್ಚಿನ ಕೊರೊನಾ ಸೋಂಕಿನ ಪ್ರಕರಣಗಳು ಕಂಡುಬರುತ್ತಿವೆ. ಸಾವಿನ ಪ್ರಕರಣಗಳೂ ಹೆಚ್ಚಾಗಿವೆ. ಅಮೆರಿಕ ಈ ಪರಿಸ್ಥಿತಿಯನ್ನು ಚೆನ್ನಾಗಿ ನಿಭಾಯಿಸುತ್ತದೆ ಎಂದು ಅಂದಾಜಿಸಿದ್ದೆ. 2015ರಲ್ಲೇ ಈ ರೀತಿಯ ಪರಿಸ್ಥಿತಿಯ ಸೂಚನೆಯನ್ನು ನಾನು ನೀಡಿದ್ದೆ. ಆದರೆ ಅಂದುಕೊಂಡಿದ್ದಕ್ಕಿಂತ ಹೆಚ್ಚಿನ ಪರಿಣಾಮವನ್ನು ಕೊರೊನಾ ಬೀರಿದೆ ಎಂದಿದ್ದಾರೆ.

ಅಮೆರಿಕದಲ್ಲಿ ಕೋವಿಡ್ 19ರಿಂದ ಇದುವರೆಗೂ 2,90,000 ಮಂದಿ ಸಾವನ್ನಪ್ಪಿದ್ದಾರೆ. ಈ ಸೋಂಕಿಗೆ ಲಸಿಕೆ ಅಭಿವೃದ್ಧಿಪಡಿಸುವ ಕುರಿತು ಸಂಸ್ಥೆಯು ಸಾಕಷ್ಟು ಸಂಶೋಧನೆಯನ್ನು ನಡೆಸುತ್ತಿದೆ. ಶೀಘ್ರವಾಗಿ ಕೆಲಸಗಳು ನಡೆಯುತ್ತಿವೆ ಎಂದು ತಿಳಿಸಿದರು.
ಇತರೆ ದೇಶಗಳಿಗೆ ಲಸಿಕೆ ವಿತರಣೆಯಾಗುವ ಮುನ್ನ ಮೊದಲು ಅಮೆರಿಕಕ್ಕೆ ಆದ್ಯತೆ ನೀಡಬೇಕು ಎಂಬ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆಗೆ ಪ್ರತಿಕ್ರಿಯಿಸಿ, "ಅಮೆರಿಕ ಮಾನವೀಯ ನೆಲೆಯಲ್ಲಿ ಎಲ್ಲರಿಗೂ ನೆರವಾಗಬೇಕಿದೆ. ಇಡೀ ದೇಶದ ಆರ್ಥಿಕತೆಯನ್ನು ಸುಧಾರಿಸಬೇಕಿದೆ. ಸಾವಿನ ಪ್ರಕರಣಗಳನ್ನು ನಿಯಂತ್ರಿಸಬೇಕಿದೆ. ಹೀಗಾಗಿ ಎಲ್ಲಾ ಲಸಿಕೆಗಳ ಸಾಮರ್ಥ್ಯವನ್ನು ಹೆಚ್ಚಿಸಬೇಕಿದೆ. ವೈದ್ಯಕೀಯ ಅವಶ್ಯತೆಯ ಆಧಾರದ ಮೇಲೆ ಲಸಿಕೆ ವಿತರಣೆ ಆಗಬೇಕಿದೆ" ಎಂದು ಹೇಳಿದ್ದಾರೆ.
ಕೊರೊನಾ ವೈರಸ್ ಹರಡುವಿಕೆ ತಡೆಯುವ ನಿಟ್ಟಿನಲ್ಲಿ ಅಮೆರಿಕನ್ನರು ಇನ್ನಷ್ಟು ಉತ್ತಮವಾಗಿ ಕೆಲಸ ನಿರ್ವಹಿಸಬೇಕಿದೆ ಎಂದಿದ್ದಾರೆ.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications