ಅಮೆರಿಕದಲ್ಲಿ 26/11 ಮುಂಬೈ ದಾಳಿಯ ಸಂಚುಕೋರ ರಾಣಾ ಬಂಧನ
ಲಾಸ್ ಎಂಜಲೀಸ್, ಜೂನ್ 20: ಮುಂಬೈನಲ್ಲಿ 2008ರಲ್ಲಿ ನಡೆದ ಉಗ್ರದಾಳಿಯ ಸಂಚುಕೋರ ಪಾಕಿಸ್ತಾನ ಮೂಲದ ಕೆನಡಾದ ಉದ್ಯಮಿ ತಹವ್ವೂರ್ ರಾಣಾನನ್ನು ಅಮೆರಿಕದಲ್ಲಿ ಬಂಧಿಸಲಾಗಿದೆ.
Recommended Video
ಜೂನ್ 11 ರಂದು ರಾಣಾ ಆರಂಭಿಕ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಅಮೆರಿಕಾದ ಜಿಲ್ಲಾ ನ್ಯಾಯಾಧೀಶ ಜಾಕ್ವೆಲಿನ್ ಚೊಲ್ಜಿಯಾನ್ ಜೂನ್ 30ರಂದು ಕ್ಯಾಲಿಪೋರ್ನಿಯಾದ ಜಿಲ್ಲಾ ನ್ಯಾಯಾಲಯದಲ್ಲಿ ರಾಣಾನಾ ಜಾಮೀನು ಅರ್ಜಿ ವಿಚಾರಣೆಯನ್ನು ನಿಗದಿಪಡಿಸಿದ್ದಾರೆ.
59 ವರ್ಷದ ರಾಣಾ, ತನಗೆ ಕೊವಿಡ್-19 ಸೋಂಕು ತಗುಲಿದ್ದು, ಕರುಣೆ ತೋರಿ ಬಿಡುಗಡೆ ಮಾಡಬೇಕೆಂದು ಅಮೆರಿಕಾ ನ್ಯಾಯಾಲಯಕ್ಕೆ ಮನವಿ ಮಾಡಿದ ಬಳಿಕ ಆತನನ್ನು ಇತ್ತೀಚಿಗೆ ಜೈಲಿನಿಂದ ಬಿಡುಗಡೆ ಮಾಡಲಾಗಿತ್ತು. ಆದರೆ, ಭಾರತದ ಕೋರಿಕೆ ಮೇರೆಗೆ ಮರು ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಈ ಸಂಬಂಧ ಜೂನ್ 22 ರೊಳಗೆ ಅರ್ಜಿ ಸಲ್ಲಿಸುವಂತೆ ರಾಣಾ ಪರ ವಕೀಲರಿಗೆ ತಿಳಿಸಲಾಗಿದೆ. ಜೂನ್ 26ರೊಳಗೆ ಫೆಡರಲ್ ಸರ್ಕಾರದ ಪ್ರತಿಕ್ರಿಯೆ ಬರಲಿದೆ.
2008ರ ನವೆಂಬರ್ ನಲ್ಲಿ ಪಾಕಿಸ್ತಾನ ಮೂಲದ ಇಸ್ಲಾಂ ಮೂಲಭೂತವಾದದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾದ ಸುಮಾರು 12 ಜನ ಉಗ್ರರು ತಂತ್ರಗಾರಿಕೆಯಿಂದ ಪಾಕಿಸ್ತಾನದಿಂದ ಭಾರತದ ಒಳ ನುಸುಳಿದ್ದು ಅಲ್ಲದೆ ಸತತ ಮೂರು ದಿನಗಳ ಕಾಲ ಮುಂಬಯಿ ನಗರವನ್ನು ಗುರಿಯಾಗಿಸಿಕೊಂಡು ಬಾಂಬ್ ಮತ್ತು ಗುಂಡಿನ ಮಳೆಗರೆದು ಸಾರ್ವಜನಿಕ ಜೀವನ ಹಾಗು ಅಪಾರ ಆಸ್ತಿ-ಪಾಸ್ತಿ ನಷ್ಟಗಳಿಗೆ ಕಾರಣರಾದರು.
ಮುಂಬೈ ಮಹಾನಗರ ಮೂರು ದಿನಗಳ ಕಾಲ ಭಯೋತ್ಪಾದಕರ ಕಪಿ ಮುಷ್ಟಿಯಲ್ಲಿ ಸಿಲುಕಿ ಅಕ್ಷರಶಃ ನರಕ ದರ್ಶನ ಮಾಡಿತು. ದಾಳಿ ಮುಗಿದು ಎಲ್ಲ ಉಗ್ರರನ್ನು ಭಾರತದ ಸೇನೆ ಹಾಗು ದೇಶದ ಆಂತರಿಕ ಪೋಲಿಸ್ ಪಡೆ ಹತ್ಯೆ ಮಾಡಿತು. ಅದರಲ್ಲಿ ಒಬ್ಬ ಉಗ್ರನನ್ನು ಜೀವಂತವಾಗಿ ಸೆರೆ ಹಿಡಿಯುವಲ್ಲಿ ಸಫಲವಾಯಿತು.
-
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ












Click it and Unblock the Notifications