ವಿಶ್ವಸಂಸ್ಥೆಯಲ್ಲಿ ಅಫ್ಘಾನಿಸ್ತಾನ ವಿಚಾರ ಪ್ರಸ್ತಾಪಿಸಿ ಎಚ್ಚರಿಕೆ ನೀಡಿದ ಮೋದಿ
ವಾಷಿಂಗ್ಟನ್, ಸೆಪ್ಟೆಂಬರ್ 25: ನಿರೀಕ್ಷೆಯಂತೆ ಪ್ರಧಾನಿ ನರೇಂದ್ರ ಮೋದಿ, ವಿಶ್ವಸಂಸ್ಥೆ ವೇದಿಕೆಯಲ್ಲಿ ಅಫ್ಘಾನಿಸ್ತಾನದ ಪ್ರಸಕ್ತ ಪರಿಸ್ಥಿತಿಯನ್ನು ಪ್ರಸ್ತಾಪಿಸಿದ್ದಾರೆ.
ಅಫ್ಘಾನಿಸ್ತಾನದ ಭೂಮಿಯನ್ನು ಭಯೋತ್ಪಾದನೆಗೆ ಬಳಸುವುದನ್ನು ಖಂಡಿಸಿರುವ ಮೋದಿ ಬೇರೆ ದೇಶಗಳು ತಮ್ಮ ರಾಜಕೀಯ ಷಡ್ಯಂತ್ರಗಳಿಗೆ ಅಫ್ಘಾನಿಸ್ತಾನವನ್ನು ಬಳಸಿಕೊಳ್ಳಬಾರದು ಎಂದು ಹೇಳಿದ್ದಾರೆ. ಈ ಮೂಲಕ ಪಾಕಿಸ್ತಾನ ಹಾಗೂ ಚೀನಾದ ಹೆಸರು ಪ್ರಸ್ತಾಪಿಸದೆ ಪರೋಕ್ಷವಾಗಿ ಅಫ್ಘಾನ್ ನೆಲ ದುರುದ್ದೇಶಕ್ಕೆ ಬಳಕೆಯಾಗುತ್ತಿರುವುದನ್ನು ಉಲ್ಲೇಖಿಸಿದ್ದಾರೆ.
ಈ ಹಿಂದೆ ಬ್ರಿಕ್ಸ್ ಶೃಂಗಸಭೆಯಲ್ಲೂ ಅಫ್ಘಾನಿಸ್ತಾನ ವಿಚಾರವನ್ನು ಮೋದಿ ಪ್ರಸ್ತಾಪಿಸಿದ್ರು, ಆದರೆ ವಿಶ್ವಸಂಸ್ಥೆ ಸಾಮಾನ್ಯ ಸಭೆ ಭಾಷಣದಲ್ಲಿ ಇನ್ನಷ್ಟು ಪ್ರಖರವಾಗಿ ಪ್ರಸ್ತಾಪಿಸಿರುವ ಮೋದಿ ಅಫ್ಘಾನಿಸ್ತಾನ ನೆಲವು ಭಯೋತ್ಪಾದನೆಗೆ ಬಳಕೆಯಾಗದಂತೆ ಜಾಗತಿಕ ಸಮುದಾಯಗಳು ಎಚ್ಚರಿಕೆ ವಹಿಸಬೇಕಿದೆ.
ಹಾಗೆಯೇ ಅಫ್ಘಾನಿಸ್ತಾನದ ನೆಲವು ಪ್ರಾಕ್ಸಿ ಯುದ್ಧಗಳಿಗೆ ತಾಣವಾಗಕೂಡದು, ಇನ್ನೊಂದೆಡೆ ಬೇರೆ ದೇಶಗಳು ತನ್ನ ರಾಜಕೀಯ ಉದ್ದೇಶಗಳಿಗೆ ಬಳಸಿಕೊಳ್ಳಲು ಅಫ್ಘಾನಿಸ್ತಾನ ಟೂಲ್ಕಿಟ್ ರೀತಿಯಲ್ಲಿ ಬಳಕೆಯಾಗಬಾರದು.

ಈ ನಿಟ್ಟಿನಲ್ಲಿ ವಿಶ್ವಸಮುದಾಯ ಎಚ್ಚರಿಕೆವಹಿಸಬೇಕಿದೆ ಎಂದು ಮೋದಿ ಹೇಳಿದ್ದಾರೆ. ಯಾವ ದೇಶವೂ ಬಯೋತ್ಪಾದನೆಯನ್ನು ರಾಜಕೀಯ ದಾಳದ ರೀತಿ ಬಳಸುತ್ತಿದೆಯೋ ಆ ದೇಶಕ್ಕೆ ಅದೇ ಭಯೋತ್ಪಾದನೆ, ಅಪಾಯವಾಗಿ ಪರಿಣಮಿಸಲಿದೆ ಎನ್ನುವುದನ್ನು ಮರೆಯಬಾರದು. ಹೀಗಾಗಿ ಅಫ್ಘಾನಿಸ್ತಾನದ ನೆಲದಲ್ಲಿ ಯಾವುದೇ ಭಯೋತ್ಪಾದನೆ ಚಟುವಟಿಕೆಗಳು ನಡೆಯದಂತೆ ಹಾಗೂ ಭಯೋತ್ಪಾದನಾ ದಾಳಿಗಳು ನಡೆಯದಂತೆ ಎಚ್ಚರಿಕೆವಹಿಸಬೇಕಿದೆ ಎಂದು ಮೋದಿ ಹೇಳಿದರು.
ವಿಶ್ವಸಂಸ್ಥೆ ವಿರುದ್ಧ ಗರಂ: ವಿಶ್ವಸಂಸ್ಥೆಯ ಬಗ್ಗೆ ಸಾಕಷ್ಟು ಪ್ರಶ್ನೆಗಳು ಉದ್ಭವವಾಗುತ್ತಿದೆ. ಹವಾಮಾನ ವೈಪರಿತ್ಯ ಕೋವಿಡ್ನ ಮೂಲ ಪತ್ತೆ ಹಚ್ಚುವ ವಿಚಾರದಲ್ಲಿಯೂ ಇದು ಜಗತ್ತಿನ ಎದುರು ಬಟಾಬಯಲಾಗಿದೆ.
ಆದರೆ ಈಗ ಹೊಸದಾಗಿ ಅಫ್ಘಾನಿಸ್ತಾನ ಬಿಕ್ಕಟ್ಟಿನ ಸಂದರ್ಭದಲ್ಲಿಯೂ ವಿಶ್ವಸಂಸ್ಥೆ ನಿರೀಕ್ಷೆಯಂತೆ ವರ್ತಿಸಿಲ್ಲ. ವಿಶ್ವಸಂಸ್ಥೆಯು ಜಾಗತಿಕ ಮೌಲ್ಯ ನಿಯಮ, ಹಾಗೂ ಸಂದೇಶಗಳನ್ನು ಸಮೃಕ್ಷಿಸಲು ಮುಂದಡಿ ಇಡಲೇಬೇಕಿದೆ ಎಂದು ಪ್ರಧಾನಿ ಮೋದಿ ಕರೆ ನೀಡಿದ್ದಾರೆ.
ಹಾಗೆಯೇ ಅಫ್ಘಾನಿಸ್ತಾನದಲ್ಲಿನ ಅಲ್ಪಸಂಖ್ಯಾತರ ಬಗ್ಗೆಯೂ ಧ್ವನಿ ಎತ್ತಿರುವ ಪ್ರಧಾನಿ, ದೇಶದ ಅಲ್ಪಸಂಖ್ಯಾತರ ಹಿತರಕ್ಷಣೆಯನ್ನು ಕಾಪಾಡುವುದು ವಿಶ್ವಸಂಸ್ಥೆ ಹಾಗೂ ಜಾಗತಿಕ ಸಮುದಾಯದ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಯೋಜನೆ ರೂಪಿಸಬೇಕಾಗಿದೆ ಎಂದು ಹೇಳಿದ್ದಾರೆ.
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ -
ಡಿವಿಜಿ ಒಡನಾಡಿ,ರಾಷ್ಟ್ರೋತ್ಥಾನದ ಮಾಜಿ ಅಧ್ಯಕ್ಷ ಎಸ್ಆರ್ ರಾಮಸ್ವಾಮಿ ನಿಧನ












Click it and Unblock the Notifications