'1990ರ ದಶಕದ ಈಚೆಗೆ ಭಾರತದಲ್ಲಿನ ಬಡತನ ಪ್ರಮಾಣ ಅರ್ಧಕ್ಕೆ'
ವಾಷಿಂಗ್ಟನ್, ಅಕ್ಟೋಬರ್ 16: ವಿಶ್ವ ಬ್ಯಾಂಕ್ ನಿಂದ ಬಹಳ ಇಂಟರೆಸ್ಟಿಂಗ್ ಅನಿಸುವಂಥ ವರದಿಯೊಂದು ಬಂದಿದೆ. ಅದರ ಪ್ರಕಾರ 1990ರಿಂದ ಈಚೆಗೆ ಭಾರತದಲ್ಲಿನ ಬಡತನದ ಪ್ರಮಾಣ ಅರ್ಧದಷ್ಟು ಇಳಿದಿದೆ. ಅಷ್ಟೇ ಅಲ್ಲ, ಹದಿನೈದು ವರ್ಷಗಳಿಂದ ಪ್ರತಿ ವರ್ಷವೂ ಭಾರತ ಶೇಕಡಾ ಏಳಕ್ಕಿಂತ ಹೆಚ್ಚು ಪ್ರಗತಿ ದರವನ್ನು ದಾಖಲಿಸುತ್ತಿದೆ ಎಂದು ತಿಳಿಸಲಾಗಿದೆ.
ಬಡತನ ತೊಡೆದು ಹಾಕಲು ಭಾರತ ಪ್ರಯತ್ನಿಸುತ್ತಿರುವ ರೀತಿಯನ್ನು ಮೆಚ್ಚಿಕೊಂಡಿರುವ ವಿಶ್ವ ಬ್ಯಾಂಕ್, ಜಾಗತಿಕ ಅಭಿವೃದ್ಧಿಯಲ್ಲೂ ನಿರ್ಣಾಯಕ ಪಾತ್ರವನ್ನು ವಹಿಸುತ್ತಿದೆ ಎಂದು ಶ್ಲಾಘಿಸಿದೆ. ಇನ್ನು ಭಾರತದ ಪ್ರಗತಿ ದರವು ಹೀಗೆಯೇ ಮುಂದುವರಿಯುವ ನಿರೀಕ್ಷೆ ಇದೆ ಎಂದಿದ್ದು, ಇನ್ನು ಹತ್ತು ವರ್ಷಗಳಲ್ಲಿ ತೀವ್ರತರವಾದ ಬಡತನವನ್ನು ಹೋಗಲಾಡಿಸಲಿದೆ ಎಂದು ತಿಳಿಸಿದೆ.
ಆದರೆ, ಭಾರತವು ತನಗೆ ಲಭ್ಯ ಇರುವ ಸಂಪನ್ಮೂಲದ ಸರಿಯಾದ ಬಳಕೆ ಕಡೆಗೆ ಗಮನ ಹರಿಸಬೇಕು ಎಂದು ಸಲಹೆ ಕೂಡ ನೀಡಲಾಗಿದೆ. ನಗರ ಪ್ರದೇಶದ ಭೂಮಿಯ ಪರಿಣಾಮಕಾರಿ ಬಳಕೆ, ಕೃಷಿ ಚಟುವಟಿಕೆ ಬಗ್ಗೆ ಹೆಚ್ಚಿನ ಗಮನ, ಮೂಲಸೌಕರ್ಯದ ಮೇಲೆ ಹೆಚ್ಚಿನ ಹೂಡಿಕೆ ಮಾಡಿದರೆ ಮುಂದಿನ ಹತ್ತು ವರ್ಷಗಳಲ್ಲಿ ಜಿಡಿಪಿ ಎಂಟು ಪರ್ಸೆಂಟ್ ದಾಟಲಿದೆ ಎಂದು ಅಂದಾಜು ಅಂಕಿಯನ್ನು ಸಹ ಮುಂದಿಟ್ಟಿದೆ.

ಉದ್ಯೋಗ ಸೃಷ್ಟಿಯ ಅಗತ್ಯವನ್ನು ಒತ್ತಿ ಹೇಳಿರುವ ವಿಶ್ವ ಬ್ಯಾಂಕ್, ಸದ್ಯಕ್ಕೆ ಮೂವತ್ತು ಲಕ್ಷ ಉದ್ಯೋಗ ಸೃಷ್ಟಿ ಆಗುತ್ತಿದೆ. ಆದರೆ ಪ್ರತಿ ವರ್ಷ ಒಂದು ಕೋಟಿಗೂ ಹೆಚ್ಚು ಮಂದಿ ಉದ್ಯೋಗದ ಅರ್ಹತೆ ಪಡೆಯುತ್ತಿದ್ದಾರೆ ಎಂದು ತಿಳಿಸಿದೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ












Click it and Unblock the Notifications