'1990ರ ದಶಕದ ಈಚೆಗೆ ಭಾರತದಲ್ಲಿನ ಬಡತನ ಪ್ರಮಾಣ ಅರ್ಧಕ್ಕೆ'
ವಾಷಿಂಗ್ಟನ್, ಅಕ್ಟೋಬರ್ 16: ವಿಶ್ವ ಬ್ಯಾಂಕ್ ನಿಂದ ಬಹಳ ಇಂಟರೆಸ್ಟಿಂಗ್ ಅನಿಸುವಂಥ ವರದಿಯೊಂದು ಬಂದಿದೆ. ಅದರ ಪ್ರಕಾರ 1990ರಿಂದ ಈಚೆಗೆ ಭಾರತದಲ್ಲಿನ ಬಡತನದ ಪ್ರಮಾಣ ಅರ್ಧದಷ್ಟು ಇಳಿದಿದೆ. ಅಷ್ಟೇ ಅಲ್ಲ, ಹದಿನೈದು ವರ್ಷಗಳಿಂದ ಪ್ರತಿ ವರ್ಷವೂ ಭಾರತ ಶೇಕಡಾ ಏಳಕ್ಕಿಂತ ಹೆಚ್ಚು ಪ್ರಗತಿ ದರವನ್ನು ದಾಖಲಿಸುತ್ತಿದೆ ಎಂದು ತಿಳಿಸಲಾಗಿದೆ.
ಬಡತನ ತೊಡೆದು ಹಾಕಲು ಭಾರತ ಪ್ರಯತ್ನಿಸುತ್ತಿರುವ ರೀತಿಯನ್ನು ಮೆಚ್ಚಿಕೊಂಡಿರುವ ವಿಶ್ವ ಬ್ಯಾಂಕ್, ಜಾಗತಿಕ ಅಭಿವೃದ್ಧಿಯಲ್ಲೂ ನಿರ್ಣಾಯಕ ಪಾತ್ರವನ್ನು ವಹಿಸುತ್ತಿದೆ ಎಂದು ಶ್ಲಾಘಿಸಿದೆ. ಇನ್ನು ಭಾರತದ ಪ್ರಗತಿ ದರವು ಹೀಗೆಯೇ ಮುಂದುವರಿಯುವ ನಿರೀಕ್ಷೆ ಇದೆ ಎಂದಿದ್ದು, ಇನ್ನು ಹತ್ತು ವರ್ಷಗಳಲ್ಲಿ ತೀವ್ರತರವಾದ ಬಡತನವನ್ನು ಹೋಗಲಾಡಿಸಲಿದೆ ಎಂದು ತಿಳಿಸಿದೆ.
ಆದರೆ, ಭಾರತವು ತನಗೆ ಲಭ್ಯ ಇರುವ ಸಂಪನ್ಮೂಲದ ಸರಿಯಾದ ಬಳಕೆ ಕಡೆಗೆ ಗಮನ ಹರಿಸಬೇಕು ಎಂದು ಸಲಹೆ ಕೂಡ ನೀಡಲಾಗಿದೆ. ನಗರ ಪ್ರದೇಶದ ಭೂಮಿಯ ಪರಿಣಾಮಕಾರಿ ಬಳಕೆ, ಕೃಷಿ ಚಟುವಟಿಕೆ ಬಗ್ಗೆ ಹೆಚ್ಚಿನ ಗಮನ, ಮೂಲಸೌಕರ್ಯದ ಮೇಲೆ ಹೆಚ್ಚಿನ ಹೂಡಿಕೆ ಮಾಡಿದರೆ ಮುಂದಿನ ಹತ್ತು ವರ್ಷಗಳಲ್ಲಿ ಜಿಡಿಪಿ ಎಂಟು ಪರ್ಸೆಂಟ್ ದಾಟಲಿದೆ ಎಂದು ಅಂದಾಜು ಅಂಕಿಯನ್ನು ಸಹ ಮುಂದಿಟ್ಟಿದೆ.

ಉದ್ಯೋಗ ಸೃಷ್ಟಿಯ ಅಗತ್ಯವನ್ನು ಒತ್ತಿ ಹೇಳಿರುವ ವಿಶ್ವ ಬ್ಯಾಂಕ್, ಸದ್ಯಕ್ಕೆ ಮೂವತ್ತು ಲಕ್ಷ ಉದ್ಯೋಗ ಸೃಷ್ಟಿ ಆಗುತ್ತಿದೆ. ಆದರೆ ಪ್ರತಿ ವರ್ಷ ಒಂದು ಕೋಟಿಗೂ ಹೆಚ್ಚು ಮಂದಿ ಉದ್ಯೋಗದ ಅರ್ಹತೆ ಪಡೆಯುತ್ತಿದ್ದಾರೆ ಎಂದು ತಿಳಿಸಿದೆ.
-
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ












Click it and Unblock the Notifications