Pulitzer Prize 2022 : ಭಾರತದ ನಾಲ್ವರು ಪತ್ರಕರ್ತರಿಗೆ ಪುಲಿಟ್ಜರ್ 2022 ಪ್ರಶಸ್ತಿ
ವಾಷಿಂಗ್ಟನ್, ಮೇ 10: ಅಮೆರಿಕದ ಮಾಧ್ಯಮ, ಸಾಹಿತ್ಯ ಮತ್ತು ಸಂಗೀತ ಕ್ಷೇತ್ರದಲ್ಲಿ ನೀಡಲಾಗುವ ಪುಲಿಟ್ಜರ್ ಪ್ರಶಸ್ತಿ ಪ್ರಕಟಗಂಡಿದೆ. 2022ನೇ ಸಾಲಿನ ಪುಲಿಟ್ಜರ್ ಪ್ರಶಸ್ತಿ ನಾಲ್ವರು ಭಾರತೀಯರಿಗೆ ಸಿಕ್ಕಿರುವುದು ವಿಶೇಷ.
ಕಳೆದ ವರ್ಷ ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಮತ್ತು ಸರಕಾರಿ ವಿಶೇಷ ಪಡೆಗಳ ಮಧ್ಯೆ ನಡೆದ ಸಂಘರ್ಷ ಘಟನೆ ವೇಳೆ ಬಲಿಯಾಗಿದ್ದ ದಾನಿಶ್ ಸಿದ್ದಿಕಿಗೆ ಮರಣೋತ್ತರ ಪ್ರಶಸ್ತಿ ಗೌರವ ಲಭಿಸಿದೆ.
ಭಾರತದಲ್ಲಿ ಕೋವಿಡ್-19ನ ಚಿತ್ರಣವನ್ನು ಮನಮುಟ್ಟುವಂತೆ ಕ್ಯಾಮೆರಾದಲ್ಲಿ ಸೆರೆಹಿಡಿದದ್ದಾಗಿ ರಾಯ್ಟರ್ಸ್ ಸುದ್ದಿ ಸಂಸ್ಥೆಯ ವಿಡಿಯೋಜರ್ನಲಿಸ್ಟ್ಗಳಿಗೆ ಈ ಸಾಲಿನ ಪ್ರಶಸ್ತಿ ಸಿಕ್ಕಿದೆ. ಈ ತಂಡದಲ್ಲಿ ದಾನಿಶ್ ಸಿದ್ದಿಕಿ ಜೊತೆಗೆ ಅದ್ನಾನ್ ಅಬಿದಿ, ಸಾನ್ನಾ ಇರ್ಷದ್ ಮಟ್ಟೂ ಮತ್ತು ಅಮಿತ್ ದಾವೆ ಕೂಡ ಇದ್ದಾರೆ.

ಕಳೆದ ವರ್ಷ, ಭಾರತ ಮೂಲದ ಪತ್ರಕರ್ತೆ ಮೇಘಾ ರಾಜಗೋಪಾಲನ್ಗೆ 2021ನೇ ಸಾಲಿನ ಪುಲಿಟ್ಜರ್ ಪ್ರಶಸ್ತಿ ಲಭಿಸಿತ್ತು. ಚೀನಾದ ಷಿನ್ಜಿಯಾಂಗ್ (Xin Jiang) ಪ್ರಾಂತ್ಯದಲ್ಲಿ ಮುಸ್ಲಿಮರನ್ನು ಕೂಡಿಹಾಕಲು ಬೃಹತ್ ಜೈಲುಗಳನ್ನು ನಿರ್ಮಿಸಿರುವುದರ ಬಗ್ಗೆ ಅವರ ತನಿಖಾ ವರದಿ ಗಮನ ಸೆಳೆದಿದೆ. ಇಂಥ ವಿಶೇಷ ತನಿಖಾ ವರದಿಗಳನ್ನು ಕೊಟ್ಟಿದ್ದಕ್ಕೆ ಮೇಘಾ ರಾಜಗೋಪಾಲನ್ಗೆ ಕಳೆದ ವರ್ಷ ಪುಲಿಟ್ಜರ್ ಗೌರವ ಪ್ರಾಪ್ತವಾಗಿತ್ತು. ಈ ವರ್ಷ ನಾಲ್ವರು ಭಾರತೀಯರಿಗೆ ಈ ಗೌರವ ಸಿಕ್ಕಿರುವುದು ವಿಶೇಷ. ಫೀಚರ್ ಫೋಟೋಗ್ರಫಿ ವಿಭಾಗದಲ್ಲಿ ಭಾರತದ ಈ ನಾಲ್ವರಿಗೆ ಪ್ರಶಸ್ತಿ ಸಂದಾಯವಾಗಿದೆ.
ಈ ವರ್ಷ ತನಿಖಾ ವರದಿ ವಿಭಾಗದಲ್ಲಿ ಟಂಪಾ ಬೇ ಟೈಮ್ಸ್ (Tampa Bay Times) ಪತ್ರಿಕೆಯ ಮೂವರು ಪತ್ರಕರ್ತರಿಗೆ ಪುಲಿಟ್ಜರ್ ಪ್ರಶಸ್ತಿ ಬಂದಿದೆ. ಫ್ಲೋರಿಡಾ ರಾಜ್ಯದ ಬ್ಯಾಟರಿ ಸಂಸ್ಕರಣೆ ಘಟಕದೊಳಗೆ ವಿಷಯುಕ್ತ ವಾತಾವರಣ ಇರುವುದರ ಕುರಿತು ಈ ಮೂವರು ಸರಣಿ ತನಿಖಾ ವರದಿಗಳನ್ನು ಬರೆದು ಪ್ರಕಟಿಸಿದ್ದರು. ಇದರ ಪರಿಣಾಮವಾಗಿ ಘಟಕದಲ್ಲಿ ಅಧಿಕಾರಿಗಳು ಸುರಕ್ಷಿತ ಕ್ರಮಗಳನ್ನ ಕೈಗೊಂಡರು.
ಬ್ರೇಕಿಂಗ್ ನ್ಯೂಸ್ ವರದಿಯಲ್ಲಿ ಮಿಯಾಮಿ ಹೆರಾಲ್ಡ್ ಪತ್ರಿಕೆಯ ಸಿಬ್ಬಂದಿಗೆ ಪುಲಿಟ್ಜರ್ ಪ್ರಶಸ್ತಿ ಸಿಕ್ಕಿದೆ. ಫ್ಲೋರಿಡಾದ ಸೀಸೈಡ್ ಅಪಾರ್ಟ್ಮೆಂಟ್ ಟವರ್ಗಳು ಕುಸಿದ ಘಟನೆಯನ್ನು ಇವರು ಬಹಳ ಚೆನ್ನಾಗಿ ಪ್ರಕಟಿಸಿದ್ದರೆನ್ನಲಾಗಿದೆ.

ವಿವರಣಾತ್ಮಕ ವರದಿಗಾರಿಕೆ, ಸ್ಥಳೀಯ ವರದಿಗಾರಿಕೆ, ರಾಷ್ಟ್ರೀಯ ವರದಿಗಾರಿಕೆ, ಅಂತರರಾಷ್ಟ್ರೀಯ ವರದಿಗಾರಿಕೆ, ವಿಶೇಷ ಬರಹ, ಕಾಮೆಂಟರಿ, ಸಂಪಾದಕೀಯ ಬರಹ, ಧ್ವನಿ ವರದಿಗಾರಿಕೆ ಮೊದಲಾದ ಪತ್ರಿಕೋದ್ಯಮ ವಿಭಾಗದಲ್ಲಿ ಪುಲಿಟ್ಜರ್ ಪ್ರಶಸ್ತಿಗಳನ್ನು ಕೊಡಲಾಗಿದೆ. ಇದರ ಜೊತೆಗೆ ಸಾಹಿತ್ಯ, ಸಂಗೀತ ವಿಭಾಗದಲ್ಲೂ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ.
ಈ ವರ್ಷ ರಷ್ಯಾ ಆಕ್ರಮಣ ವಿದ್ಯಮಾನದಲ್ಲೂ ಎದೆಗುಂದದೆ ಕೆಲಸ ಮಾಡಿದ ಉಕ್ರೇನ್ ಪತ್ರಕರ್ತರಿಗೆ ವಿಶೇಷ ಗೌರವ ನೀಡಲಾಗಿದೆ. ಇರಾಕ್, ಸಿರಿಯಾ ಮತ್ತು ಅಫ್ಘಾನಿಸ್ತಾನ್ ದೇಶಗಳಲ್ಲಿ ಅಮೆರಿಕ ಸೇನೆ ನಡೆಸಿದ ಕಾರ್ಯಾಚರಣೆಯಿಂದ ನಾಗರಿಕರಿಗೆ ಎಷ್ಟು ಸಾವುನೋವು ಆಗಿದೆ ಎಂಬುದನ್ನು ಬೆಳಕಿಗೆ ತಂದ ನ್ಯೂಯಾರ್ಕ್ ಟೈಮ್ಸ್ ಪತ್ರಿಕೆಯ ಸಿಬ್ಬಂದಿಗೆ ಪುಲಿಟ್ಜರ್ ಪ್ರಶಸ್ತಿ ಕೊಡಲಾಗಿದೆ.
ಹಾಗೆಯೇ, ಅಮೆರಿಕ ಅಧ್ಯಕ್ಷೀಯ ಚುನಾವಣೆ ಬಳಿಕ ಕಳೆದ ವರ್ಷ ಕ್ಯಾಪಿಟಲ್ ಹಿಲ್ (ಅಮೆರಿಕ ಸಂಸತ್ತು) ಮೇಲೆ ಟ್ರಂಪ್ ಬೆಂಬಲಿಗರು ದಾಳಿ ಮಾಡಿದ ಘಟನೆಯನ್ನು ವರದಿ ಮಾಡಿದ ಪತ್ರಕರ್ತರಿಗೆ ವಿಶೇಷ ಗೌರವ ನೀಡಲಾಗಿದೆ.
(ಒನ್ಇಂಡಿಯಾ ಸುದ್ದಿ)
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications