Pulitzer Prize 2022 : ಭಾರತದ ನಾಲ್ವರು ಪತ್ರಕರ್ತರಿಗೆ ಪುಲಿಟ್ಜರ್ 2022 ಪ್ರಶಸ್ತಿ
ವಾಷಿಂಗ್ಟನ್, ಮೇ 10: ಅಮೆರಿಕದ ಮಾಧ್ಯಮ, ಸಾಹಿತ್ಯ ಮತ್ತು ಸಂಗೀತ ಕ್ಷೇತ್ರದಲ್ಲಿ ನೀಡಲಾಗುವ ಪುಲಿಟ್ಜರ್ ಪ್ರಶಸ್ತಿ ಪ್ರಕಟಗಂಡಿದೆ. 2022ನೇ ಸಾಲಿನ ಪುಲಿಟ್ಜರ್ ಪ್ರಶಸ್ತಿ ನಾಲ್ವರು ಭಾರತೀಯರಿಗೆ ಸಿಕ್ಕಿರುವುದು ವಿಶೇಷ.
ಕಳೆದ ವರ್ಷ ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಮತ್ತು ಸರಕಾರಿ ವಿಶೇಷ ಪಡೆಗಳ ಮಧ್ಯೆ ನಡೆದ ಸಂಘರ್ಷ ಘಟನೆ ವೇಳೆ ಬಲಿಯಾಗಿದ್ದ ದಾನಿಶ್ ಸಿದ್ದಿಕಿಗೆ ಮರಣೋತ್ತರ ಪ್ರಶಸ್ತಿ ಗೌರವ ಲಭಿಸಿದೆ.
ಭಾರತದಲ್ಲಿ ಕೋವಿಡ್-19ನ ಚಿತ್ರಣವನ್ನು ಮನಮುಟ್ಟುವಂತೆ ಕ್ಯಾಮೆರಾದಲ್ಲಿ ಸೆರೆಹಿಡಿದದ್ದಾಗಿ ರಾಯ್ಟರ್ಸ್ ಸುದ್ದಿ ಸಂಸ್ಥೆಯ ವಿಡಿಯೋಜರ್ನಲಿಸ್ಟ್ಗಳಿಗೆ ಈ ಸಾಲಿನ ಪ್ರಶಸ್ತಿ ಸಿಕ್ಕಿದೆ. ಈ ತಂಡದಲ್ಲಿ ದಾನಿಶ್ ಸಿದ್ದಿಕಿ ಜೊತೆಗೆ ಅದ್ನಾನ್ ಅಬಿದಿ, ಸಾನ್ನಾ ಇರ್ಷದ್ ಮಟ್ಟೂ ಮತ್ತು ಅಮಿತ್ ದಾವೆ ಕೂಡ ಇದ್ದಾರೆ.

ಕಳೆದ ವರ್ಷ, ಭಾರತ ಮೂಲದ ಪತ್ರಕರ್ತೆ ಮೇಘಾ ರಾಜಗೋಪಾಲನ್ಗೆ 2021ನೇ ಸಾಲಿನ ಪುಲಿಟ್ಜರ್ ಪ್ರಶಸ್ತಿ ಲಭಿಸಿತ್ತು. ಚೀನಾದ ಷಿನ್ಜಿಯಾಂಗ್ (Xin Jiang) ಪ್ರಾಂತ್ಯದಲ್ಲಿ ಮುಸ್ಲಿಮರನ್ನು ಕೂಡಿಹಾಕಲು ಬೃಹತ್ ಜೈಲುಗಳನ್ನು ನಿರ್ಮಿಸಿರುವುದರ ಬಗ್ಗೆ ಅವರ ತನಿಖಾ ವರದಿ ಗಮನ ಸೆಳೆದಿದೆ. ಇಂಥ ವಿಶೇಷ ತನಿಖಾ ವರದಿಗಳನ್ನು ಕೊಟ್ಟಿದ್ದಕ್ಕೆ ಮೇಘಾ ರಾಜಗೋಪಾಲನ್ಗೆ ಕಳೆದ ವರ್ಷ ಪುಲಿಟ್ಜರ್ ಗೌರವ ಪ್ರಾಪ್ತವಾಗಿತ್ತು. ಈ ವರ್ಷ ನಾಲ್ವರು ಭಾರತೀಯರಿಗೆ ಈ ಗೌರವ ಸಿಕ್ಕಿರುವುದು ವಿಶೇಷ. ಫೀಚರ್ ಫೋಟೋಗ್ರಫಿ ವಿಭಾಗದಲ್ಲಿ ಭಾರತದ ಈ ನಾಲ್ವರಿಗೆ ಪ್ರಶಸ್ತಿ ಸಂದಾಯವಾಗಿದೆ.
ಈ ವರ್ಷ ತನಿಖಾ ವರದಿ ವಿಭಾಗದಲ್ಲಿ ಟಂಪಾ ಬೇ ಟೈಮ್ಸ್ (Tampa Bay Times) ಪತ್ರಿಕೆಯ ಮೂವರು ಪತ್ರಕರ್ತರಿಗೆ ಪುಲಿಟ್ಜರ್ ಪ್ರಶಸ್ತಿ ಬಂದಿದೆ. ಫ್ಲೋರಿಡಾ ರಾಜ್ಯದ ಬ್ಯಾಟರಿ ಸಂಸ್ಕರಣೆ ಘಟಕದೊಳಗೆ ವಿಷಯುಕ್ತ ವಾತಾವರಣ ಇರುವುದರ ಕುರಿತು ಈ ಮೂವರು ಸರಣಿ ತನಿಖಾ ವರದಿಗಳನ್ನು ಬರೆದು ಪ್ರಕಟಿಸಿದ್ದರು. ಇದರ ಪರಿಣಾಮವಾಗಿ ಘಟಕದಲ್ಲಿ ಅಧಿಕಾರಿಗಳು ಸುರಕ್ಷಿತ ಕ್ರಮಗಳನ್ನ ಕೈಗೊಂಡರು.
ಬ್ರೇಕಿಂಗ್ ನ್ಯೂಸ್ ವರದಿಯಲ್ಲಿ ಮಿಯಾಮಿ ಹೆರಾಲ್ಡ್ ಪತ್ರಿಕೆಯ ಸಿಬ್ಬಂದಿಗೆ ಪುಲಿಟ್ಜರ್ ಪ್ರಶಸ್ತಿ ಸಿಕ್ಕಿದೆ. ಫ್ಲೋರಿಡಾದ ಸೀಸೈಡ್ ಅಪಾರ್ಟ್ಮೆಂಟ್ ಟವರ್ಗಳು ಕುಸಿದ ಘಟನೆಯನ್ನು ಇವರು ಬಹಳ ಚೆನ್ನಾಗಿ ಪ್ರಕಟಿಸಿದ್ದರೆನ್ನಲಾಗಿದೆ.

ವಿವರಣಾತ್ಮಕ ವರದಿಗಾರಿಕೆ, ಸ್ಥಳೀಯ ವರದಿಗಾರಿಕೆ, ರಾಷ್ಟ್ರೀಯ ವರದಿಗಾರಿಕೆ, ಅಂತರರಾಷ್ಟ್ರೀಯ ವರದಿಗಾರಿಕೆ, ವಿಶೇಷ ಬರಹ, ಕಾಮೆಂಟರಿ, ಸಂಪಾದಕೀಯ ಬರಹ, ಧ್ವನಿ ವರದಿಗಾರಿಕೆ ಮೊದಲಾದ ಪತ್ರಿಕೋದ್ಯಮ ವಿಭಾಗದಲ್ಲಿ ಪುಲಿಟ್ಜರ್ ಪ್ರಶಸ್ತಿಗಳನ್ನು ಕೊಡಲಾಗಿದೆ. ಇದರ ಜೊತೆಗೆ ಸಾಹಿತ್ಯ, ಸಂಗೀತ ವಿಭಾಗದಲ್ಲೂ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ.
ಈ ವರ್ಷ ರಷ್ಯಾ ಆಕ್ರಮಣ ವಿದ್ಯಮಾನದಲ್ಲೂ ಎದೆಗುಂದದೆ ಕೆಲಸ ಮಾಡಿದ ಉಕ್ರೇನ್ ಪತ್ರಕರ್ತರಿಗೆ ವಿಶೇಷ ಗೌರವ ನೀಡಲಾಗಿದೆ. ಇರಾಕ್, ಸಿರಿಯಾ ಮತ್ತು ಅಫ್ಘಾನಿಸ್ತಾನ್ ದೇಶಗಳಲ್ಲಿ ಅಮೆರಿಕ ಸೇನೆ ನಡೆಸಿದ ಕಾರ್ಯಾಚರಣೆಯಿಂದ ನಾಗರಿಕರಿಗೆ ಎಷ್ಟು ಸಾವುನೋವು ಆಗಿದೆ ಎಂಬುದನ್ನು ಬೆಳಕಿಗೆ ತಂದ ನ್ಯೂಯಾರ್ಕ್ ಟೈಮ್ಸ್ ಪತ್ರಿಕೆಯ ಸಿಬ್ಬಂದಿಗೆ ಪುಲಿಟ್ಜರ್ ಪ್ರಶಸ್ತಿ ಕೊಡಲಾಗಿದೆ.
ಹಾಗೆಯೇ, ಅಮೆರಿಕ ಅಧ್ಯಕ್ಷೀಯ ಚುನಾವಣೆ ಬಳಿಕ ಕಳೆದ ವರ್ಷ ಕ್ಯಾಪಿಟಲ್ ಹಿಲ್ (ಅಮೆರಿಕ ಸಂಸತ್ತು) ಮೇಲೆ ಟ್ರಂಪ್ ಬೆಂಬಲಿಗರು ದಾಳಿ ಮಾಡಿದ ಘಟನೆಯನ್ನು ವರದಿ ಮಾಡಿದ ಪತ್ರಕರ್ತರಿಗೆ ವಿಶೇಷ ಗೌರವ ನೀಡಲಾಗಿದೆ.
(ಒನ್ಇಂಡಿಯಾ ಸುದ್ದಿ)
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications