ಎಚ್-1ಬಿ ವೀಸಾ ಆಯ್ಕೆ ಇನ್ನು ಸಂಬಳ ಮಟ್ಟ ಆಧಾರಿತ
ವಾಷಿಂಗ್ಟನ್, ಜನವರಿ 8: ಅಮೆರಿಕದಲ್ಲಿ ನೂತನ ಅಧ್ಯಕ್ಷರಾಗಿ ಜೋ ಬೈಡನ್ ಅಧಿಕಾರ ಸ್ವೀಕರಿಸಲು ಕೆಲವೇ ದಿನಗಳು ಬಾಕಿ ಇರುವಾಗಲೇ ಎಚ್1 ಬಿ ವೀಸಾದಲ್ಲಿ ಮಹತ್ವದ ಬದಲಾವಣೆ ತರಲಾಗಿದೆ. ವಾರ್ಷಿಕ್ ಎಚ್1ಬಿ ಕ್ಯಾಪ್ ಲಾಟರಿ ವ್ಯವಸ್ಥೆ ಬದಲಿಗೆ ವೇತನ ಆಧಾರಿತ ಆಯ್ಕೆ ಪ್ರಕ್ರಿಯೆ ಜಾರಿಗೆ ಬಂದಿದೆ.
ಅಮೆರಿಕ ಚುನಾವಣೆಗಳು ಕೆಲವು ದಿನಗಳ ಮುನ್ನ ಟ್ರಂಪ್ ಆಡಳಿತ ಈ ಪ್ರಸ್ತಾಪ ಮುಂದಿರಿಸಿತ್ತು. ಅದಕ್ಕೆ ಸಾರ್ವಜನಿಕರ ಅಭಿಪ್ರಾಯಗಳನ್ನು ಆಹ್ವಾನಿಸಲಾಗಿತ್ತು. ಈಗ ಅಂತಿಮ ನಿಯಮವನ್ನು ಪ್ರಕಟಿಸಲಾಗಿದ್ದು, ಇನ್ನು 60 ದಿನಗಳಲ್ಲಿ ಜಾರಿಗೆ ಬರಲಿದೆ. ಆದರೆ ಇದನ್ನು ಹೊಸ ಆಡಳಿತ ರದ್ದುಗೊಳಿಸಲು ಅವಕಾಶವಿದೆ.
ಹೊಸ ನಿಯಮದಡಿ ಎಚ್-1ಬಿ ಕ್ಯಾಪ್ ವೀಸಾಗಳನ್ನು ವೇತನದ ಮಟ್ಟಕ್ಕೆ ಅನುಗುಣವಾಗಿ ಹಂಚಿಕೆ ಮಾಡಲಾಗುತ್ತದೆ. ತಮ್ಮ ವೃತ್ತಿಗಳಲ್ಲಿ ಅತಿ ಹೆಚ್ಚು ಸಂಬಳಗಳನ್ನು ಪಡೆಯುವವರಿಗೆ ಹಾಗೂ ಉದ್ಯೋಗದ ಭೌಗೋಳಿಕ ಪ್ರದೇಶಗಳಿಗೆ ಅನುಗುಣವಾಗಿ ವೀಸಾಕ್ಕೆ ಆದ್ಯತೆ ನೀಡಲಾಗುತ್ತದೆ.

ಹೀಗಾಗಿ ಎಚ್-1ಬಿ ವೀಸಾಗಳನ್ನು ಅಮೆರಿಕದ ಕಂಪೆನಿಗಳ ಪ್ರಾಯೋಜಕತ್ವ ಹೊಂದಿರುವ ಲೆವೆಲ್ 4ರಲ್ಲಿನ ಉದ್ಯೋಗಿಗಳಿಗೆ ಮೊದಲು ನೀಡಲಾಗುತ್ತದೆ. ಅಮೆರಿಕದಲ್ಲಿ ನಾಲ್ಕು ವೇತನ ವರ್ಗಗಳಿದ್ದು, ಅದರಲ್ಲಿ ಲೆವೆಲ್ 4 ಅತಿ ಹೆಚ್ಚು ಸಂಬಳ ಹಾಗೂ ಅನುಭವ ಉಳ್ಳವರನ್ನು ಒಳಗೊಂಡಿರುತ್ತದೆ. ಬಳಿಕ ಲೆವೆಲ್ 3 ಮತ್ತು ಉಳಿದ ಹಂತದಲ್ಲಿರುವ ಉದ್ಯೋಗಿಗಳಿಗೆ ನೀಡಲಾಗುತ್ತದೆ.
ಈ ಹೊಸ ನಿಯಮವು ಕೆಳಮಟ್ಟದ ವೇತನ ಮತ್ತು ಕಡಿಮೆ ಕೌಶಲದ ಹುದ್ದೆಗಳನ್ನು ತುಂಬಿಕೊಳ್ಳಲು ಎಚ್-1ಬಿ ವೀಸಾ ಯೋಜನೆಯನ್ನು ಬಳಸಿಕೊಳ್ಳುವ ಮೂಲಕ ಉದ್ಯೋಗಿಗಳಿಗೆ ಭತ್ಯೆ ಒದಗಿಸುವ ಹಾಗೂ ಕಾನೂನು ದುರ್ಬಳಕೆ ಮಾಡುವ ಚಟುವಟಿಕೆಗಳನ್ನು ಕಡಿಮೆ ಮಾಡಲಿದೆ ಎಂದು ಹೋಮ್ಲ್ಯಾಂಡ್ ಸೆಕ್ಯುರಿಟಿ ಇಲಾಖೆ ಹೇಳಿದೆ.
-
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು












Click it and Unblock the Notifications