ಹವಾಮಾನ ವೈಪರೀತ್ಯದ ಬಗ್ಗೆ ವಿಜ್ಞಾನಕ್ಕೆ ಏನೂ ಗೊತ್ತಿಲ್ಲ: ಟ್ರಂಪ್
ವಾಷಿಂಗ್ಟನ್, ಸೆಪ್ಟೆಂಬರ್ 15: ಹವಾಮಾನ ವೈಪರೀತ್ಯದ ಕುರಿತು ವಿಜ್ಞಾನಿಗಳ ಗ್ರಹಿಕೆ ಮತ್ತು ಅಧ್ಯಯನದ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಜಾಗತಿಕ ಹವಾಮಾನ ಶೀಘ್ರದಲ್ಲಿಯೇ ತಣ್ಣಗಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ.
ಸಂವಾದವೊಂದರಲ್ಲಿ ಮಾತನಾಡಿರುವ ಡೊನಾಲ್ಡ್ ಟ್ರಂಪ್, ವಾತಾವರಣವು ತಣ್ಣಗಾಗುತ್ತಿದೆ. ಕಾದು ನೋಡಿ. ಬಹುಶಃ ವಿಜ್ಞಾನಕ್ಕೆ ಇದು ತಿಳಿದಿದೆ ಎನಿಸುತ್ತಿಲ್ಲ ಎಂದಿದ್ದಾರೆ.
'ವಾತಾವರಣದ ಬದಾಲವಣೆಯನ್ನು ನೀವು ಗಮನಿಸಬೇಕು ಎಂದು ಕೋರುತ್ತೇವೆ. ಮುಖ್ಯವಾಗಿ ನಮ್ಮ ಕಾಡುಗಳ ಮೇಲೆ ಅದರ ಪರಿಣಾಮ ಗುರುತಿಸಬೇಕು. ನಾವು ವಿಜ್ಞಾನದ ಜತೆಗೂಡಿ ಕೆಲಸ ಮಾಡುತ್ತಿದ್ದೇವೆ. ಇಲ್ಲಿ ವಿಜ್ಞಾನ ಬಹಳ ಮುಖ್ಯ. ಏಕೆಂದರೆ ನಾವು ವಿಜ್ಞಾನವನ್ನು ಅಲಕ್ಷಿಸಿದರೆ, ಇದೆಲ್ಲವೂ ನಿಸರ್ಗದ ಪ್ರಕ್ರಿಯೆ ಎಂದುಕೊಂಡರೆ ಕ್ಯಾಲಿಫೋರ್ನಿಯಾವನ್ನು ರಕ್ಷಿಸುವುದರಲ್ಲಿ ಸಫಲರಾಗುವುದಿಲ್ಲ' ಎಂದು ಕ್ಯಾಲಿಫೋರ್ನಿಯಾದ ನೈಸರ್ಗಿಕ ಸಂಪನ್ಮೂಲಗಳ ಕಾರ್ಯದರ್ಶಿ ವೇಡ್ ಕ್ರೌಫೂಟ್ ಹೇಳಿದ್ದರು.

ಈ ಹೇಳಿಕೆಗೆ ಅಸಮ್ಮತಿ ಸೂಚಿಸಿರುವ ಡೊನಾಲ್ಡ್ ಟ್ರಂಪ್, ಕ್ಯಾಲಿಫೋರ್ನಿಯಾದಲ್ಲಿ ಉರಿಯುತ್ತಿರುವ ಕಾಳ್ಗಿಚ್ಚು ತಾನಾಗಿಯೇ ತಣ್ಣಗಾಗಲಿದೆ ಎಂದಿದ್ದರು. ಅದಕ್ಕೆ ಕ್ರೌಫೂಟ್, 'ವಿಜ್ಞಾನ ನಿಮ್ಮ ಹೇಳಿಕೆಯನ್ನು ಒಪ್ಪಿಕೊಳ್ಳಲಿದೆ ಎಂದು ಭರವಸೆ ಹೊಂದಿದ್ದೇನೆ' ಎಂದು ಹೇಳಿದ್ದರು. ಅದಕ್ಕೆ ಟ್ರಂಪ್, 'ಇದು ವಿಜ್ಞಾನಕ್ಕೆ ತಿಳಿದಿದೆ ಎಂದು ನನಗನಿಸುತ್ತಿಲ್ಲ' ಎಂದಿದ್ದಾರೆ.
ಕ್ಯಾಲಿಫೋರ್ನಿಯಾ ಮತ್ತು ಒರೆಗಾನ್ನಲ್ಲಿನ ಕಾಳ್ಗಿಚ್ಚಿನ ಪ್ರಕೋಪಕ್ಕೆ ಅರಣ್ಯವನ್ನು ಸೂಕ್ತವಾಗಿ ನೋಡಿಕೊಳ್ಳದಿರುವುದೇ ಕಾರಣ ಎಂದು ಟ್ರಂಪ್ ಹೇಳಿದ್ದಾರೆ. 'ಉರುಳಿ ಬಿದ್ದ ಮರಗಳು ಕೆಲವು ಸಮಯದಲ್ಲಿಯೇ ಬಹಳ ಒಣಗಿ ಹೋಗುತ್ತವೆ. ಅವು ಬೆಂಕಿ ಕಡ್ಡಿಯಂತಾಗಿರುತ್ತವೆ. ಅವು ಸ್ಫೋಟಗೊಳ್ಳಬಹುದು. ಹಾಗೆಯೇ ಎಲೆಗಳು ಕೂಡ. ನೆಲದಲ್ಲಿ ಒಣಗಿದ ಎಲೆಗಳಿದ್ದರೆ ಬೆಂಕಿಗೆ ತೈಲ ಸುರಿದಂತೆ ಎಂದು ಟ್ರಂಪ್ ತಿಳಿಸಿದ್ದಾರೆ.
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ












Click it and Unblock the Notifications