ಉಗ್ರರ ಸಂಖ್ಯೆ ನಾಲ್ಕು ಪಟ್ಟು ಹೆಚ್ಚು: ಹೊಡೆದಷ್ಟೂ ಬಲವಾಗುತ್ತಿದ್ದಾರೆ ಜಿಹಾದಿಗಳು
ವಾಷಿಂಗ್ಟನ್, ನವೆಂಬರ್ 27: ಕಳೆದ ಹದಿನೇಳು ವರ್ಷಗಳಲ್ಲಿ ಸುನ್ನಿ ಇಸ್ಲಾಮಿಕ್ ಉಗ್ರರ ಸಂಖ್ಯೆ ನಾಲ್ಕು ಪಟ್ಟು ಹೆಚ್ಚಳವಾಗಿದೆ.
ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆಗಳ ವಿರುದ್ಧ ಅಮೆರಿಕ ಮತ್ತು ಅದರ ಮಿತ್ರ ರಾಷ್ಟ್ರಗಳು ಸುಮಾರು 20 ವರ್ಷಗಳಿಂದ ನಿರಂತರ ಯುದ್ಧಗಳನ್ನು ನಡೆಸುತ್ತಿದ್ದರೂ ಉಗ್ರರನ್ನು ನಿಯಂತ್ರಿಸಲು ಸಾಧ್ಯವಾಗಿಲ್ಲ ಎಂದು ವರದಿಯೊಂದು ಹೇಳಿದೆ.
2001ರ ಸೆಪ್ಟೆಂಬರ್ 11ರಂದು ಅಮೆರಿಕದ ಮೇಲೆ ದಾಳಿ ನಡೆದ ಬಳಿಕ ಉಗ್ರರ ಸಂಖ್ಯೆ ನಾಲ್ಕು ಪಟ್ಟು ಏರಿಕೆಯಾಗಿದೆ. ಇದು ಆಗಿನ ಸಂದರ್ಭಕ್ಕಿಂತ ಶೇ 270ರಷ್ಟು ಹೆಚ್ಚು.
ಅಫ್ಘಾನಿಸ್ತಾನ, ಇರಾಕ್, ಪಾಕಿಸ್ತಾನ, ಸಿರಿಯಾ, ಲಿಬಿಯಾ, ಯೆಮನ್, ಸೊಮಾಲಿಯಾ, ಸುಡಾನ್ ಮತ್ತು ಫಿಲಿಫ್ಫೀನ್ಸ್ಗಳಲ್ಲಿ ಅಮೆರಿಕ ಹಾಗೂ ಯುರೋಪಿಯನ್ ದೆಶಗಳ ಸೇನೆ ಕಾರ್ಯಾಚರಣೆ ನಡೆಸುತ್ತಿವೆ. ಹೀಗಿದ್ದೂ ಅವರನ್ನು ಹತ್ತಿಕ್ಕುವುದು ಸಾಧ್ಯವಾಗಿಲ್ಲ. ಪರಿಸ್ಥಿತಿ ಇನ್ನಷ್ಟು ಬಿಗಡಾಯಿಸಿದೆ ಎಂದು ಕಾರ್ಯತಂತ್ರ ಮತ್ತು ಅಂತಾರಾಷ್ಟ್ರೀಯ ಅಧ್ಯಯನಗಳ ಕೇಂದ್ರ (ಸಿಎಸ್ಐಎಸ್) ವರದಿ ತಿಳಿಸಿದೆ.

'ಸಲಾಫಿ-ಜಿಹಾದಿ ಬೆದರಿಕೆಯ ವಿಕಸನ' ಎಂಬ 71 ಪುಟಗಳ ವರದಿಯಲ್ಲಿ ಸುಮಾರು 40 ವರ್ಷಗಳಲ್ಲಿನ ಉಗ್ರರ ಚಟುವಟಿಕೆಗಳ ಮಾಹಿತಿ ಇದೆ.
ಇರಾಕ್ ಮತ್ತು ಸಿರಿಯಾದಲ್ಲಿ ದೊಡ್ಡ ಪ್ರಮಾಣದಲ್ಲಿ ನೆಲೆಯನ್ನು ಕಳೆದುಕೊಂಡರೂ ಇಸ್ಲಾಮಿಕ್ ಸ್ಟೇಟ್ ಅನ್ನು ಸೋಲಿಸುವುದು ದೂರದ ಮಾತು. 2016ಕ್ಕೆ ಹೋಲಿಸಿದರೆ ಜಿಹಾದಿ ಉಗ್ರರ ಸಂಖ್ಯೆ ಅಲ್ಪ ಪ್ರಮಾಣದಲ್ಲಿ ಇಳಿದಿರಬಹುದು. ಆದರೆ, ಕಳೆದ 38 ವರ್ಷಗಳಲ್ಲಿಯೇ ಅಧಿಕ ಮಟ್ಟದಲ್ಲಿದೆ.
ಪ್ರಸ್ತುತ ಸುಮಾರು 70 ದೇಶಗಳಲ್ಲಿ ಅಂದಾಜು 2.30 ಲಕ್ಷ ಸಲಾಫಿ-ಜಿಹಾದಿ ಗಳಿದ್ದಾರೆ ಎಂದು ಹೇಳಲಾಗಿದೆ.
ಇದರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಿರಿಯಾದಲ್ಲಿದ್ದಾರೆ (70500), ಅಫ್ಘಾನಿಸ್ತಾನ 64,000, ಪಾಕಿಸ್ತಾನ 40,000 ಮತ್ತು ಇರಾಕ್ನಲ್ಲಿ 15,000 ಉಗ್ರರಿದ್ದಾರೆ. ಸುಮಾರು 30 ಸಾವಿರ ಉಗ್ರರು ಆಫ್ರಿಕಾದ ಸೊಮಾಲಿಯಾ, ನೈಜೀರಿಯಾ ಮತ್ತು ಸಹೆಲ್ ಪ್ರದೇಶದಲ್ಲಿದ್ದಾರೆ ಎಂದು ವರದಿ ತಿಳಿಸಿದೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications