ಅಮೆರಿಕದಲ್ಲಿ ಸುಂಟರಗಾಳಿ ಅಬ್ಬರ; 80 ಜನರು ಸಾವು
ವಾಷಿಂಗ್ಟನ್, ಡಿಸೆಂಬರ್ 12; ಸುಂಟರಗಾಳಿಯ ಅಬ್ಬರಕ್ಕೆ ಅಮೆರಿಕದ 5 ರಾಜ್ಯಗಳ ಜನರು ತತ್ತರಿಸಿ ಹೋಗಿದ್ದಾರೆ. ಇದುವರೆಗೂ 80 ಜನರು ಮೃತಪಟ್ಟಿದ್ದಾರೆ. "ಅಮೆರಿಕದ ಇತಿಹಾಸದಲ್ಲಿಯೇ ಇದು ಬಹುದೊಡ್ಡ ಸುಂಟರಗಾಳಿ" ಎಂದು ಅಧ್ಯಕ್ಷ ಜೋ ಬೈಡನ್ ಹೇಳಿದ್ದಾರೆ.
ಅರ್ಕಾನ್ಸಾಸ್, ಮಿಸಿಸಿಪ್ಪಿ, ಇಲಿನಾಯ್ಸ್, ಕೆಂಟುಕಿ, ಟೆನ್ನೆಸ್ಸಿ ರಾಜ್ಯಗಳಲ್ಲಿ ಶನಿವಾರ ಸುಂಟರಗಾಳಿಯು ಭಾರೀ ಹಾನಿ ಮಾಡಿದೆ. ಕೆಂಟುಕಿಯಲ್ಲಿಯೇ ಸುಮಾರು 50 ಜನರು ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ. ಗಾಳಿಯ ಅಬ್ಬರಕ್ಕೆ ಮೇಣದ ಬತ್ತಿ ತಯಾರಿಕಾ ಕಾರ್ಖನೆ ಸಂಪೂರ್ಣ ನಾಶಗೊಂಡಿದೆ.
ಸುಂಟರಗಾಳಿ ಬೀಸುವಾಗ ಕಾರ್ಖನೆಯಲ್ಲಿ 110 ಜನರು ಕೆಲಸ ಮಾಡುತ್ತಿದ್ದರು. ಗಾಳಿಯ ತೀವ್ರತೆಗೆ ಕಾರ್ಖನೆ ಮೇಲ್ಛಾವಣಿ ಕುಸಿದಿದೆ. 40 ಜನರನ್ನು ಅವಶೇಷಗಳ ಅಡಿಯಿಂದ ರಕ್ಷಣೆ ಮಾಡಲಾಗಿದೆ. ಇನ್ನೂ ಅವಶೇಷಗಳಡಿ ಯಾರಾದರೂ ಬದುಕಿದ್ದರೆ ಅದು ಪವಾಡ ಎಂದು ಅಧಿಕಾರಿಗಳು ಹೇಳಿದ್ದಾರೆ.

"ನಾವು ಅವಶೇಷಗಳಡಿ ಸಿಲಕಿದ್ದೇವೆ. ಮೇಣದ ಬತ್ತಿ ಕಾರ್ಖನೆಯಲ್ಲಿ ನಾವು ಕೆಲಸ ಮಾಡುತ್ತಿದ್ದೆವು. ನಮ್ಮನ್ನು ರಕ್ಷಣೆ ಮಾಡಿ. ನಮ್ಮ ಸಹೋದ್ಯೋಗಿಗಳು ಸಹ ಇಲ್ಲಿ ಸಿಲುಕಿದ್ದಾರೆ" ಎಂದು ಕಾರ್ಖನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಪರಿಚಯಸ್ಥರಿಗೆ ಆಡಿಯೋ ಸಂದೇಶ ಕಳಿಸಿದ್ದಾರೆ.
ಸುಂಟರಗಾಳಿಯ ಅಬ್ಬರದಿಂದ ಹಾನಿಯಾದ ಹಿನ್ನಲೆಯಲ್ಲಿ ಕೆಂಟುಕಿ ಪ್ರದೇಶದಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಣೆ ಮಾಡಿ ಗವರ್ನರ್ ಆಂಡಿ ಬೆಶಿಯರ್ ಆದೇಶ ಹೊರಡಿಸಿದ್ದಾರೆ. ಅವಶೇಷಗಳಡಿ ಜನರು ಸಿಲುಕಿದ್ದಾರೆಯೇ? ಎಂದು ಹುಡುಕಾಟವನ್ನು ಸಹ ನಡೆಸಲಾಗುತ್ತಿದೆ.
"ಕೆಂಟುಕಿಯ ಇತಿಹಾಸದಲ್ಲಿಯೇ ಇಂತಹ ಸುಂಟರಗಾಳಿ ನೋಡಿಲ್ಲ. ಇಂತಹ ಗಾಳಿಯನ್ನು ನಾನು ಜೀವಮಾನದಲ್ಲೇ ನೋಡಿಲ್ಲ. ಗಾಳಿಯ ತೀವ್ರತೆ ತಿಳಿಸಲು ನನಗೆ ಪದಗಳೇ ಸಿಗುತ್ತಿಲ್ಲ" ಎಂದು ಗವರ್ನರ್ ಆಂಡಿ ಬೆಶಿಯರ್ ಹೇಳಿದ್ದಾರೆ.
ಇಲಿನಾಯನ್ಸ್ನಲ್ಲಿರುವ ಅಮೆಝಾನ್ ಗೋದಾಮಿನಲ್ಲಿ ಕೆಲಸ ಮಾಡುತ್ತಿದ್ದ 6 ಜನರು ಮೃತಪಟ್ಟಿದ್ದಾರೆ. ಕ್ರಿಸ್ಮಸ್ ಹಿನ್ನಲೆಯಲ್ಲಿ ಹೆಚ್ಚಿನ ಆರ್ಡರ್ಗಳಿದ್ದ ಕಾರಣ ರಾತ್ರಿ ಪಾಳಿಯಲ್ಲಿ ಹಲವಾರು ಜನರು ಕೆಲಸ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಬೀಸಿದ ಸುಂಟರಗಾಳಿ ಅನಾಹುತ ಸೃಷ್ಟಿಸಿದೆ.
ಪುರಾತನ ಕಟ್ಟಡಗಳಿಗೂ ಸುಂರಟಗಾಳಿಯಿಂದ ಹಾನಿಯಾಗಿದೆ. ಹಲವು ಜನರು ಮನೆಗಳನ್ನು ಕಳೆದುಕೊಂಡಿದ್ದಾರೆ. ಕಾರು ಸೇರಿದಂತೆ ಇತರ ವಾಹನಗಳು ಮೈದಾನಕ್ಕೆ ಹೋಗಿ ಬಿದ್ದಿವೆ. ಸಾಮಾಜಿಕ ಜಾಲತಾಣದಲ್ಲಿ ಚಂಡಮಾರುತದ ದೃಶ್ಯಗಳು ವೈರಲ್ ಆಗುತ್ತಿವೆ.
ಕೆಲವು ಪ್ರದೇಶಗಳಲ್ಲಿ ಚರ್ಚ್ಗೆ ಹಾನಿಯಾಗಿದೆ. ಹಲವಾರು ಕಡೆ ನೀರಿನ ಸಂಪರ್ಕ ಸ್ಥಗಿತಗೊಂಡಿದೆ. ವಿದ್ಯುತ್ ವಿತರಣಾ ವ್ಯವಸ್ಥೆಗೆ ಹಾನಿಯಾಗಿದೆ. ಸುಂಟರಾಳಿಯ ಅಬ್ಬರಕ್ಕೆ ಬಾಂಬ್ ಸ್ಫೋಟದಂತೆ ಅನುಭವವಾಯಿತು ಎಂದು ಕೆಲವು ಜನರು ಭಯಾನಕ ಅನುಭವ ಬಿಚ್ಚಿಟ್ಟಿದ್ದಾರೆ.
ಗಾಳಿಯ ಅಬ್ಬರಕ್ಕೆ ನಾಲ್ಕು ರಾಜ್ಯಗಳಲ್ಲಿ ಸುಮಾರು 3,31,549 ಗ್ರಾಹಕರು ವಿದ್ಯುತ್ ಸಂಪರ್ಕ ಕಳೆದುಕೊಂಡಿದ್ದಾರೆ ಎಂದು ಅಂದಾಜಿಸಲಾಗಿದೆ. ಒಟ್ಟು 5 ರಾಜ್ಯಗಳಲ್ಲಿ ಮೃತಪಟ್ಟವರ ಸಂಖ್ಯೆ ಇನ್ನೂ ಹೆಚ್ಚಾಗುವ ನಿರೀಕ್ಷೆ ಇದೆ.
ಅರ್ಕಾನ್ಸಾಸ್ ಪ್ರದೇಶದಲ್ಲಿ ಮೊನೆಟ್ ನರ್ಸಿಂಗ್ ಹೋಂಗೆ ಸುಂಟರಗಾಳಿ ಹಾನಿ ಮಾಡಿದೆ. ಇಬ್ಬರು ಮೃತಪಟ್ಟಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಸುಂಟರಗಾಳಿಯ ಅಬ್ಬರದ ಫೋಟೋ, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಅಮೆರಿಕದ ರೆಡ್ ಕ್ರಾಸ್ ಘಟಕ ಸುಂಟರಗಾಳಿ ಪ್ರಭಾವಕ್ಕೆ ಸಿಲುಕಿದ 5 ರಾಜ್ಯಗಳಲ್ಲಿಯೂ ರಕ್ಷಣಾ ಕಾರ್ಯದಲ್ಲಿ ತೊಡಗಿದೆ. ರಾಷ್ಟ್ರೀಯ ವಿಪತ್ತು ಪರಿಹಾರ ಕಾರ್ಯಾಚರಣೆ ಪಡೆ ಅವಶೇಷಗಳಡಿ ಸಿಲುಕಿದವರಿಗಾಗಿ ಹುಡುಕಾಟವನ್ನು ನಡೆಸುತ್ತಿದೆ. ಈ ಹಿಂದೆ ಮಿಸೌರಿಯಲ್ಲಿ ಸುಂಟರಗಾಳಿಯ ಅಬ್ಬರಕ್ಕೆ ಸಿಲುಕಿ 695 ಜನರು ಜೀವ ಕಳೆದುಕೊಂಡಿದ್ದರು.
ಹವಾಮಾನ ಬದಲಾವಣೆ ಕಾರಣ ಚಂಡಮಾರುತಗಳು ಸೃಷ್ಟಿಯಾಗುತ್ತಿವೆ. ಇದರ ಪರಿಣಾಮ ಸುಂಟರಗಾಳಿ ಬೀಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮನೆ, ಕಚೇರಿ, ಕಾರ್ಖನೆ ಸೇರಿದಂತೆ ಅವಶೇಷಗಳಡಿ ಸಿಲುಕಿರುವ ಜನರಿಗಾಗಿ ಹುಡುಕಾಟ ನಡೆಯುತ್ತಿದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications