ಟ್ರಂಪ್ ಸುದ್ದಿಗೋಷ್ಠಿ ವೇಳೆ ಶ್ವೇತ ಭವನದ ಎದುರಿನಲ್ಲೇ ಗುಂಡಿನ ದಾಳಿ
ವಾಶಿಂಗ್ಟನ್, ಆಗಸ್ಟ್.11: ಅಮೆರಿಕಾದ ಶ್ವೇತ ಭವನದ ಎದುರಿನಲ್ಲೇ ಗುಂಡಿನ ದಾಳಿ ನಡೆಸಿರುವ ಘಟನೆ ಸೋಮವಾರ ನಡೆದಿದೆ. ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾಧ್ಯಮವನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಸಂದರ್ಭದಲ್ಲೇ ಈ ಘಟನೆ ನಡೆದಿದೆ.
Recommended Video
ಪೆನ್ಸಿಲ್ವೆನಿಯಾ ಅವೆನ್ಯೂನ 17ನೇ ರಸ್ತೆಯ ಬಳಿ ಫೈರಿಂಗ್ ನಡೆದಿದೆ. ತಕ್ಷಣ ಎಚ್ಚೆತ್ತುಕೊಂಡ ಬೆಂಗಾವಲು ಪಡೆಯು ಡೊನಾಲ್ಡ್ ಟ್ರಂಪ್ ಅವರನ್ನು ಸ್ಥಳದಿಂದ ರಕ್ಷಿಸಿ ಬೇರೆಡೆಗೆ ಕರೆದೊಯ್ಡಿದ್ದಾರೆ. ಘಟನೆ ನಡೆದು ಕೆಲವು ಗಂಟೆಗಳಲ್ಲೇ ಮತ್ತೆ ಟ್ರಂಪ್ ಸುದ್ದಿಗೋಷ್ಠಿ ನಡೆಸಿದ್ದು, ಪರಿಸ್ಥಿತಿ ಹತೋಟಿಗೆ ಬಂದಿದೆ ಎಂದು ಮಾಹಿತಿ ನೀಡಿದ್ದಾರೆ.
ಭದ್ರತಾ ಸಿಬ್ಬಂದಿ ಮತ್ತು ಬೆಂಗಾವಲು ಪಡೆ ಸಿಬ್ಬಂದಿಯ ತುರ್ತು ಹಾಗೂ ಪರಿಣಾಮಕಾರಿ ಕಾರ್ಯದ ಬಗ್ಗೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಗುಂಡಿನ ದಾಳಿಯಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗಳಲ್ಲಿ ದಾಖಲಿಸಲಾಗಿದೆ ಎಂದರು.

ದುರಾದೃಷ್ಟಕರ ಘಟನೆ ಎಂದ ಟ್ರಂಪ್:
ಅಮೆರಿಕಾದ ಶ್ವೇತ ಭವನದ ಎದುರಿನಲ್ಲೇ ಗುಂಡಿನ ದಾಳಿ ಮತ್ತು ಗಲಾಟೆ ನಡೆದಿರುವ ಘಟನೆಯು ಬಹಳ ದರಾದೃಷ್ಟಕರವಾಗಿದೆ. ಈಗಾಗಲೇ ಗುಂಡಿನ ದಾಳಿ ನಡೆಸಿದ ವ್ಯಕ್ತಿಯು ಭದ್ರತಾ ಸಿಬ್ಬಂದಿ ನಡೆಸಿದ ಪ್ರತಿದಾಳಿಯಲ್ಲಿ ಮೃತಪಟ್ಟಿದ್ದಾನೆ ಎಂದು ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
ಇನ್ನು, ನೀವು ಸುರಕ್ಷಿತವಾಗಿದ್ದೀರಿಯೇ ಎಂಬ ಪ್ರಶ್ನೆಗೆ ಅವರು ಉತ್ತರಿಸಿದರು. ಶ್ವೇತ ಭವನದಲ್ಲಿ ನಾನು ಸದಾ ಸುರಕ್ಷಿತವಾಗಿದ್ದಂತೆ ಎನ್ನಿಸುತ್ತದೆ. ಭದ್ರತಾ ಸಿಬ್ಬಂದಿಯ ನಡುವೆ ನಾನು ಸುರಕ್ಷಿತವಾಗಿದ್ದೇನೆ. ನಮ್ಮ ಭದ್ರತಾ ಸಿಬ್ಬಂದಿಯು ಅದ್ಭುತವಾಗಿದ್ದು ಉತ್ತಮದಲ್ಲೇ ಉತ್ತಮವಾಗಿದೆ ಎಂದು ಟ್ರಂಪ್ ಹೇಳಿದರು.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications