ಅಮೆರಿಕದಲ್ಲಿ ಹುಲಿ ಆಯ್ತು, ಈಗ ಸಾಕು ಬೆಕ್ಕಿಗೂ ಕೊರೊನಾ ಸೋಂಕು
ವಾಷಿಂಗ್ಟನ್, ಏಪ್ರಿಲ್ 23: ಅಮೆರಿಕದಲ್ಲಿ ಮಾರಣಹೋಮ ನಡೆಸುತ್ತಿರುವ ಕೊರೊನಾ ವೈರಸ್ ಸಾವಿರಾರು ಜನರ ಪ್ರಾಣ ಬಲಿ ಪಡೆದುಕೊಂಡಿದೆ. ಇದೀಗ, ಮನುಷ್ಯನಿಂದ ಪ್ರಾಣಿಗೂ ಕೊರೊನಾ ಸೋಂಕು ಹರಡಿದ್ದು, ಪ್ರಾಣಿಗಳಿಗೂ ಆತಂಕ ಹೆಚ್ಚಾಗಿದೆ.
ಅಮೆರಿಕದ ನ್ಯೂಯಾರ್ಕ್ ನಗರದಲ್ಲಿ ಎರಡು ಸಾಕು ಬೆಕ್ಕಿಗೆ ಕೊವಿಡ್ ಸೋಂಕು ತಗುಲಿದೆ ಎಂದು ಫೆಡರಲ್ ಅಧಿಕಾರಿಗಳು ಬುಧವಾರ ಘೋಷಿಸಿದ್ದಾರೆ. 'ಯುನೈಟೆಡ್ ಸ್ಟೇಟ್ಸ್ನಲ್ಲಿ ಸಾಕುಪ್ರಾಣಿಯಲ್ಲಿ ಕೊರೊನಾ ಕಾಣಿಸಿಕೊಂಡಿದ್ದು ಇದೇ ಮೊದಲು" ಎಂದು ಯುಎಸ್ ಕೃಷಿ ಇಲಾಖೆ ಹಾಗೂ ರೋಗ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಕೇಂದ್ರ ತಿಳಿಸಿದೆ.
ಅಂದ್ಹಾಗೆ, ಈ ಬೆಕ್ಕುಗಳು ನ್ಯೂಯಾರ್ಕ್ನ ಹುಲಿ ಮತ್ತು ಸಿಂಹದ ಪಂಗಡಕ್ಕೆ ಸೇರಿದ್ದಾಗಿದೆ. ಮೊದಲನೇಯ ಬೆಕ್ಕಿಗೆ ಪರೀಕ್ಷೆ ಮಾಡಿದ ನಂತರ ಕೊರೊನಾ ಎಂದು ತಿಳಿದಿದೆ. ಬಳಿಕ ಎರಡನೇ ಬೆಕ್ಕಿಗೂ ಪರೀಕ್ಷೆ ಮಾಡಲಾಯಿತು. ಎರಡು ಬೆಕ್ಕಿಗು ಸೋಂಕು ದೃಢವಾದ ಮೇಲೆ ಮನೆಯಲ್ಲಿದ್ದವರಿಗೆ ಪರೀಕ್ಷೆ ಮಾಡಲಾಯಿತು. ಆದರೆ, ಅವರಲ್ಲಿ ಸೋಂಕು ಪತ್ತೆಯಾಗಿಲ್ಲ. ಪ್ರಾಣಿಗಳಿಂದ ಕೊರೊನಾ ಸೋಂಕು ಹರಡುತ್ತೆ ಎನ್ನುವುದಕ್ಕೆ ಯಾವುದೇ ಪುರಾವೆ ಇಲ್ಲ.

ಪ್ರಸ್ತುತ ಎರಡೂ ಬೆಕ್ಕಿನ ಆರೋಗ್ಯದಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಆದಷ್ಟೂ ಬೇಗ ಚೇತರಿಸಿಕೊಳ್ಳಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.
ಇದಕ್ಕೂ ಮುಂಚೆ ನ್ಯೂಯಾರ್ಕ್ ನಗರದ ಬ್ಯಾಂಜ್ ಮೃಗಾಲಯದಲ್ಲಿ ನಾಲ್ಕು ವರ್ಷದ ಹುಲಿಗೆ ಕೊರೊನಾ ಸೋಂಕು ವರದಿಯಾಗಿತ್ತು. ನಂತರ ಮೃಗಾಲಯದಲ್ಲಿ ಹೈ ಅಲರ್ಟ್ ಘೋಷಣೆ ಆಗಿತ್ತು.
ಇನ್ನು ಯುಎಸ್ನಲ್ಲಿ ಕೊರೊನಾ ಅಂಕಿ ಅಂಶ ನೋಡುವುದಾದರೆ ಇದುವರೆಗೂ 8 ಲಕ್ಷ (848,717) ಕೇಸ್ ದಾಖಲಾಗಿದೆ. 47,659 ಸಾವಿ ಜನರು ಸಾವನ್ನಪ್ಪಿದ್ದಾರೆ. 84,050 ಜನರು ಚೇತರಿಸಿಕೊಂಡಿದ್ದರೆ, ಇನ್ನು 14,016 ಜನರ ಆರೋಗ್ಯ ಸ್ಥಿತಿ ಗಂಭೀರವಾಗಿದೆ.
-
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ












Click it and Unblock the Notifications