ಅಕ್ಟೋಬರ್ ಕೊನೆ ಹೊತ್ತಿಗೆ ವಿಶ್ವಸಂಸ್ಥೆಯ ಬಳಿ ಖರ್ಚಿಗೂ ಹಣವಿಲ್ಲ
ವಾಷಿಂಗ್ಟನ್, ಅಕ್ಟೋಬರ್ 8: $ 230 ಮಿಲಿಯನ್ ಕೊರತೆಯಲ್ಲಿ ವಿಶ್ವಸಂಸ್ಥೆ ನಡೆಯುತ್ತಿದೆ ಎಂದು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಅಂಟೋನಿಯೋ ಗುಟೆರೆಸ್ ಸೋಮವಾರ ಹೇಳಿದ್ದಾರೆ. ಅಕ್ಟೋಬರ್ ಅಂತ್ಯದ ಹೊತ್ತಿಗೆ ಹಣವೇ ಇಲ್ಲದಂತೆ ಆಗುತ್ತದೆ ಎಂದು ಕೂಡ ಅವರು ಹೇಳಿದ್ದಾರೆ.
ವಿಶ್ವಸಂಸ್ಥೆಯ ಕಾರ್ಯಾಲಯದಲ್ಲಿ ಇರುವ 37,000 ಸಿಬ್ಬಂದಿಯನ್ನು ಉದ್ದೇಶಿಸಿ ಬರೆದ ಪತ್ರವು ಎಎಫ್ ಪಿಗೆ ದೊರೆತಿದ್ದು, ಅದರಲ್ಲಿ ಗುಟೆರೆಸ್, ಕೊರತೆ ನೀಗಿಸಲು ಹೆಚ್ಚುವರಿಯಾಗಿ ಕ್ರಮ ತೆಗೆದುಕೊಳ್ಳುವ ಬಗ್ಗೆ ಹೇಳಿದ್ದಾರೆ. ಸಂಬಳ- ಭತ್ಯೆ ಇತ್ಯಾದಿ ಪಾವತಿಗೆ ಅಗತ್ಯ ಕ್ರಮ ತೆಗೆದುಕೊಳ್ಳುವ ಪ್ರಸ್ತಾವ ಮಾಡಿದ್ದಾರೆ.
ಈ ವರ್ಷ ವಿಶ್ವಸಂಸ್ಥೆಯ ಸದಸ್ಯ ರಾಷ್ಟ್ರಗಳು ಪಾವತಿಸಿರುವುದು ಶೇಕಡಾ ಎಪ್ಪತ್ತರಷ್ಟು ಖರ್ಚಿನ ಭಾಗ ಮಾತ್ರ. ಅದನ್ನು ನಗದು ಕೊರತೆ ಮೊತ್ತಕ್ಕೆ ಹೊಂದಿಸಿ ಹೇಳಬೇಕು ಅಂದರೆ, ಸೆಪ್ಟೆಂಬರ್ ಕೊನೆ ಹೊತ್ತಿಗೆ $ 230 ಮಿಲಿಯನ್ ಆಗಿದೆ. ಈ ತಿಂಗಳ ಕೊನೆ ಹೊತ್ತಿಗೆ ನಗದು ಮೀಸಲು ನಿಧಿಯಲ್ಲಿ ಕೊರತೆ ಆಗುತ್ತದೆ.

ವೆಚ್ಚ ಕಡಿತಗೊಳಿಸುವ ಕಾರಣಕ್ಕೆ ಸಭೆ, ಸಮಾವೇಶಗಳನ್ನು ಮುಂದೂಡಲು ತೀರ್ಮಾನಿಸಲಾಗಿದೆ. ಸೇವೆಯಲ್ಲಿ ಕಡಿತ, ಅಧಿಕಾರಿಗಳ ಪ್ರಯಾಣದ ಮೇಲೆ ನಿರ್ಬಂಧ- ಅಗತ್ಯ ಚಟುವಟಿಕೆಗೆ ಮಾತ್ರ ಅನುಮತಿ, ಜತೆಗೆ ವಿದ್ಯುಚ್ಛಕ್ತಿ ಉಳಿತಾಯಕ್ಕೆ ಗುಟೆರೆಸ್ ಮನವಿ ಮಾಡಿದ್ದಾರೆ.
ನಗದು ಕೊರತೆ ಸಮಸ್ಯೆ ಆಗಬಹುದು. ಆದ್ದರಿಂದ ಸದಸ್ಯ ರಾಷ್ಟ್ರಗಳು ನೀಡುವ ಪಾಲನ್ನು ಹೆಚ್ಚಿಸಬೇಕು ಎಂದು ಗುಟೆರೆಸ್ ಮನವಿ ಮಾಡಿದ್ದರು. ಆದರೆ ಅದಕ್ಕೆ ಸದಸ್ಯ ರಾಷ್ಟ್ರಗಳು ಒಪ್ಪಿರಲಿಲ್ಲ. "ವಿಶ್ವಸಂಸ್ಥೆಯ ಆರ್ಥಿಕ ಸ್ಥಿತಿಯನ್ನು ಚೆನ್ನಾಗಿರುವಂತೆ ನೋಡಿಕೊಳ್ಳುವುದು ಸದಸ್ಯ ರಾಷ್ಟ್ರಗಳದೇ ಜವಾಬ್ದಾರಿ" ಎಂದು ಗುಟೆರೆಸ್ ಹೇಳಿದ್ದಾರೆ.
ಶಾಂತಿಸ್ಥಾಪನೆ ಕಾರ್ಯಾಚರಣೆಗೆ ಎಷ್ಟು ಹಣ ಖರ್ಚು ಮಾಡುತ್ತದೆ ಎಂಬ ಬಗ್ಗೆ ವಿಶ್ವಸಂಸ್ಥೆ ಮಾಹಿತಿ ನೀಡಿಲ್ಲ. 2018- 2019ನೇ ಸಾಲಿನಲ್ಲಿ ವಿಶ್ವಸಂಸ್ಥೆಯ ಕಾರ್ಯ ಚಟುವಟಿಕೆ ಬಜೆಟ್ $ 5.4 ಬಿಲಿಯನ್. ಅದರಲ್ಲಿ ಯುನೈಟೆಡ್ ಸ್ಟೇಟ್ಸ್ ನ ಪಾಲು 22 ಪರ್ಸೆಂಟ್.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications