ಅಮೆರಿಕದ ಅಲಾಸ್ಕದಲ್ಲಿ ಭಾರಿ ಭೂಕಂಪ, ಸುನಾಮಿ ಎಚ್ಚರಿಕೆ
ವಾಷಿಂಗ್ಟನ್, ಅ.20: ಅಲಾಸ್ಕದ ನೈಋತ್ಯ ಕರಾವಳಿಯಲ್ಲಿ ಭಾರಿ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 7.5 ತೀವ್ರತೆ ದಾಖಲಾಗಿದ್ದು, ಭೂಕಂಪದ ಬೆನ್ನಲ್ಲೇ ಸುನಾಮಿ ಎಚ್ಚರಿಕೆಯನ್ನು ನೀಡಲಾಗಿದೆ. ಅಲಾಸ್ಕ ಕರಾವಳಿಯಲ್ಲಿ ಸುನಾಮಿ ಅಲೆಗಳು ಕಾಣಿಸಿಕೊಂಡಿವೆ, ಸದ್ಯಕ್ಕೆ ಯಾವುದೇ ಮಾಹಿತಿ ಇಲ್ಲ ಎಂದು ಅಮೆರಿಕ ಸರ್ಕಾರ ಪ್ರಕಟಣೆ ನೀಡಿದೆ.
ಭೂಕಂಪದ ಕೇಂದ್ರ ಬಿಂದು ಸುಮಾರು 100 ಕಿಲೋಮೀಟರ್ ದೂರದಲ್ಲಿದ್ದು, 25 ಅಡಿ ಆಳದಲ್ಲಿ ಭೂಕಂಪ ಸಂಭವಿಸಿದೆ. ಮುಖ್ಯ ಕಂಪನದ ಬಳಿಕ ರಿಕ್ಟರ್ ಮಾಪಕದಲ್ಲಿ 5.8, 5.7, 5.2 ಹಾಗೂ 5.5 ತೀವ್ರತೆಯ ಭೂಕಂಪ ನಂತರದ ಕಂಪನಗಳು ಕಂಡು ಬಂದಿವೆ ಎಂದು ಯುಎಸ್ ಜಿಯೋಲಾಜಿಕಲ್ ಸರ್ವೆ ಹೇಳಿದೆ.

ಆಂಕರೇಜ್(Anchorage) ಪಟ್ಟಣದಿಂದ ನೈಋತ್ಯಕ್ಕೆ 600 ಮೈಲಿ ದೂರದಲ್ಲಿ ಭೂಕಂಪ ಸಂಭವಿಸಿದೆ. ಸ್ಯಾಂಡ್ ಹಿಲ್ ನಿಂದ 56 ಮೈಲಿ ದೂರದಲ್ಲಿ ಕಂಪನ ತೀವ್ರತೆ ಕಂಡು ಬಂದಿದ್ದು, ಸಮೀಪದ ನಿವಾಸಿಗಳು ಶಾಲೆ, ಕಾಲೇಜು, ಕಚೇರಿ ತೊರೆದು ಎತ್ತರದ ಪ್ರದೇಶಗಳಿಗೆ ತೆರಳಿದ್ದಾರೆ.
Preliminary Event: M 7.4 - 94 km SE of Sand Point, Alaska https://t.co/YCW1KGuPLO
— USGS Earthquakes (@USGS_Quakes) October 19, 2020
Recommended Video
ಸುನಾಮಿ ಎಚ್ಚರಿಕೆಯ ಹಿನ್ನೆಲೆಯಲ್ಲಿ ಅಲಸ್ಕ ಪರ್ಯಾಯ ದ್ವೀಪ ಸೇರಿದಂತೆ ದಕ್ಷಿಣ ಕರಾವಳಿಯ ನಿವಾಸಿಗಳನ್ನು ಸುರಕ್ಷಿತ ತಾಣಕ್ಕೆ ಸ್ಥಳಾಂತರಗೊಳಿಸಲಾಗಿದೆ ಎಂದು ಸ್ಥಳೀಯ ಆಡಳಿತಗಾರರು ಹೇಳಿದ್ದಾರೆ. ಕಡಿಮೆ ತೀವ್ರತೆಯ ಸುನಾಮಿಯಾಗಿದ್ದರೂ ಈಜುಗಾರರು, ಸಣ್ಣ ಬೋಟುಗಳಲ್ಲಿ ಪ್ರಯಾಣಿಸುವವರಿಗೆ ಎಚ್ಚರಿಕೆ ನೀಡಲಾಗಿದೆ. ಪ್ರವಾಹದ ಭೀತಿ ಇಲ್ಲ ಎಂದು ನ್ಯಾಷನಲ್ ವೆದರ್ ಸರ್ವೀಸ್ ಪೆಸಿಫಿಕ್ ಸುನಾಮಿ ವಾರ್ನರ್ ಸೆಂಟರ್ ಹೇಳಿದೆ.
— Lucius Vorenus (@LuciusCenturion) October 19, 2020
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications