'ಮಹಾತ್ಮ ಗಾಂಧಿ ಪ್ರತಿಮೆಯನ್ನು ಅಪವಿತ್ರಗೊಳಿಸಿದ್ದಕ್ಕೆ ಕ್ಷಮೆ ಇರಲಿ'
ವಾಷಿಂಗ್ಟನ್, ಜೂನ್ 4: ಅಮೆರಿಕದ ವಾಷಿಂಗ್ಟನ್ ಡಿಸಿಯಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆಯನ್ನು ಅಪವಿತ್ರಗೊಳಿಸಿದ್ದಕ್ಕೆ ಕ್ಷಮೆ ಇರಲಿ ಎಂದು ಅಮೆರಿಕ ಭಾರತೀಯ ರಾಯಭಾರಿ ಕೆನ್ ಜಸ್ಟರ್ ಹೇಳಿದ್ದಾರೆ.
ವಾಷಿಂಗ್ಟನ್ ಡಿಸಿಯಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಹೊರಗಿನ ಮಹಾತ್ಮಾ ಗಾಂಧಿ ಪ್ರತಿಮೆಯನ್ನು ಜನಾಂಗೀಯ ಪ್ರತಿಭಟನೆ ಭಾಗವಾಗಿದ್ದ ವಿಧ್ವಂಸಕರಿಂದ ಅಪವಿತ್ರಗೊಳಿಸಲಾಗಿದೆ.
ಅವರು ಮಾಡಿದ್ದು ತಪ್ಪು ಅವರ ಪರವಾಗಿ ನಾನು ಕ್ಷಮೆ ಕೇಳುತ್ತೇನೆ ಎಂದು ಕೆನ್ ಜಸ್ಟರ್ ತಿಳಿಸಿದ್ದಾರೆ.ಪ್ರತಿಭಟನಾಕಾರರು ಮಹಾತ್ಮಾಗಾಂಧಿ ಪ್ರತಿಮೆಯನ್ನು ಹಾನಿಗೊಳಿಸಿದ್ದಾರೆ. ಈ ಸಂಬಂಧ ಅಮೆರಿಕ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಬಿಳಿಯ ಪೊಲೀಸ್ ದೌರ್ಜನ್ಯದಿಂದ ಕಪ್ಪು ವರ್ಣೀಯ ದುರಂತ ಸಾವಿಗೀಡಾದ ಬೆನ್ನಲ್ಲೇ ಅಮೆರಿಕದಲ್ಲಿ ವ್ಯಾಪಕ ಪ್ರತಿಭಟನೆ ಹಾಗೂ ಹಿಂಸಾಚಾರ ಭುಗಿಲೆದ್ದಿದೆ.

ಕಪ್ಪು ವರ್ಣೀಯ ವ್ಯಕ್ತಿ ಜಾರ್ಜ್ ಫ್ಲಾಯ್ಡ್ (45) ಅಮೆರಿಕದ ಮಿನ್ನೆಪೊಲಿಸ್ನಲ್ಲಿ ಮೇ 25ರಂದು ಒಂದು ಅಂಗಡಿಯಲ್ಲಿ 20 ಡಾಲರ್ ನೀಡಿ ಸಿಗರೇಟ್ ಖರೀದಿಸಿದ್ದ.
ಅಂಗಡಿಯವರು ಆ ನೋಟು ನಕಲಿ ಎಂದು ಗೊತ್ತಾಗಿ ಪೊಲೀಸರಿಗೆ ಕರೆ ಮಾಡಿದ್ದರು. ಪೊಲೀಸರು ಬಂದಾಗ ಫ್ಲಾಯ್ಡ್ ಇನ್ನೂ ಅಂಗಡಿಯ ಹೊರಗೆ ಆತನ ಕಾರಿನಲ್ಲಿ ಕುಳಿತಿದ್ದ.
ಪೊಲೀಸರು ಬಂದವರೇ ಅನಾಮತ್ತಾಗಿ ಆತನನ್ನು ಹಿಡಿದು ಹೊರಗೆಳೆದು, ತಮ್ಮ ಕಾರಿನ ಬಳಿ ಎಳೆದುಕೊಂಡು ಹೋದರು. ಇದನ್ನು ಜಾರ್ಜ್ ಫ್ಲಾಯ್ಡ್ ಪ್ರತಿಭಟಿಸಿದಾಗ ಓರ್ವ ಪೊಲೀಸ್ ಆತನನ್ನು ನೆಲಕ್ಕೆ ಒತ್ತಿಹಿಡಿದು, ಕುತ್ತಿಗೆಯ ಮೇಲೆ ತಮ್ಮ ಮೊಣಕಾಲೂರಿ ನಿಂತಿದ್ದ. ಸುಮಾರು ಎಂಟು ನಿಮಿಷ ಕುತ್ತಿಗೆಯನ್ನು ಒತ್ತಿ ಹಿಡಿದಿದ್ದ ಪರಿಣಾಮ ಜಾರ್ಜ್ ಫ್ಲಾಯ್ಡ್ ಸ್ಥಳದಲ್ಲೇ ಸಾವನ್ನಪ್ಪಿದ್ದ.
ಜಾರ್ಜ್ ಫ್ಲಾಯ್ಡ್ ಸಾವು ಖಂಡಿಸಿ ಅಮೆರಿಕ ಅಷ್ಟೇ ಅಲ್ಲದೆ ಪ್ರಪಂಚದಾದ್ಯಂತ ಬೃಹತ್ ಪ್ರತಿಭಟನೆಗಳು ಸ್ಫೋಟಗೊಂಡಿವೆ. ಪ್ರತಿಭಟನಾಕಾರರು ಪ್ಯಾರಿಸ್, ಸಿಡ್ನಿ, ಅರ್ಜೆಂಟೀನಾ, ಬ್ರೆಜಿಲ್, ಕೆನಡಾ ಮತ್ತು ನ್ಯೂಜಿಲೆಂಡ್ಗಳಲ್ಲಿ ಬೀದಿಗಿಳಿದಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications