ಚೀನಾಕ್ಕೆ ಅಮೆರಿಕ ಕೌಂಟರ್: ಕಪ್ಪುಪಟ್ಟಿಯಲ್ಲಿ ಅಜರ್ ಸೇರಿಸಲು ಹೊಸ ತಂತ್ರ
ವಾಷಿಂಗ್ಟನ್, ಮಾರ್ಚ್ 28: ಜೈಶ್ ಎ ಮೊಹಮ್ಮದ್ ಸಂಘಟನೆಯ ಮುಖ್ಯಸ್ಥ ಉಗ್ರ ಮಸೂದ್ ಅಜರ್ನನ್ನು ಜಾಗತಿಕ ಭಯೋತ್ಪಾದಕ ಎಂದು ಘೋಷಣೆ ಮಾಡಲು ಅಡ್ಡಿಪಡಿಸುತ್ತಿರುವ ಚೀನಾಕ್ಕೆ ಎದುರೇಟು ನೀಡಲು ಅಮೆರಿಕ ತಂತ್ರ ರೂಪಿಸಿದೆ.
ಮಸೂದ್ ಅಜರ್ನನ್ನು ಕಪ್ಪುಪಟ್ಟಿಗೆ ಸೇರಿಸುವ ಸಂಬಂಧ ವಿಶ್ವಸಂಸ್ಥೆಯ ಭದ್ರತಾ ಮಂಡಳಿಗೆ ಅಮೆರಿಕ ಕರಡು ನಿರ್ಣಯವನ್ನು ಸಿದ್ಧಪಡಿಸಿದೆ. ಇದರಿಂದ ಚೀನಾದ ಕುತಂತ್ರಕ್ಕೆ ಹಿನ್ನಡೆಯುಂಟಾಗುವ ಸಾಧ್ಯತೆ ಇದೆ.
ಕಳೆದ ತಿಂಗಳು ಚೀನಾ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ನಿರ್ಬಂಧ ಸಮಿತಿಯಲ್ಲಿ ಅಜರ್ನನ್ನು ಜಾಗತಿಕ ಉಗ್ರ ಎಂದು ಘೋಷಿಸುವ ಭಾರತದ ಪ್ರಯತ್ನಕ್ಕೆ ಚೀನಾ ವೀಟೋ ಅಧಿಕಾರ ಬಳಸಿ ಅಡ್ಡಿಪಡಿಸಿತ್ತು. ಹೀಗಾಗಿ ಚೀನಾಕ್ಕೆ ತಿರುಗೇಟು ನೀಡಲು ಅಮೆರಿಕ ಅಜರ್ನನ್ನು ಕಪ್ಪುಪಟ್ಟಿಗೆ ಸೇರಿಸುವ ನಿರ್ಣಯದ ಪ್ರಸ್ತಾಪ ಸಲ್ಲಿಸಿದೆ.

ಅಮೆರಿಕ ಈ ಸಂಬಂಧ ನಿರ್ಣಯವನ್ನು ಹಂಚಿಕೆ ಮಾಡಿದ್ದು, ಇದಕ್ಕೆ ಬ್ರಿಟನ್ ಮತ್ತು ಫ್ರಾನ್ಸ್ನ ಬೆಂಬಲದೊಂದಿಗೆ ಕರಡು ಸಿದ್ಧಪಡಿಸಲಾಗಿದೆ.
ಅಮೆರಿಕ, ಬ್ರಿಟನ್ ಮತ್ತು ಫ್ರಾನ್ಸ್ ಆರಂಭದಲ್ಲಿ ಅಜರ್ನನ್ನು ಕಪ್ಪುಪಟ್ಟಿಗೆ ಸೇರಿಸುವಂತೆ ವಿಶ್ವಸಂಸ್ಥೆಯ ಭದ್ರತಾ ಸಮಿತಿಯ ಐಎಸ್ಐಎಸ್ ಮತ್ತು ಅಲ್ ಕೈದಾ ನಿರ್ಬಂಧ ಸಮಿತಿಗೆ ಮನವಿ ಮಾಡಿದ್ದವು. ಇದಕ್ಕೆ ಚೀನಾ ತಡೆಯೊಡ್ಡಿತ್ತು.
ಇದು ಜಾರಿಗೆ ಬಂದರೆ ಅಜರ್ ಮೇಲೆ ಶಸ್ತ್ರಾಸ್ತ್ರ ವ್ಯವಹಾರ ನಿಷೇಧ, ಪ್ರಯಾಣ ನಿಷೇಧ ಮತ್ತು ಆತನ ಆಸ್ತಿಪಾಸ್ತಿಗಳ ಮುಟ್ಟುಗೋಲು ಹಾಕಿಕೊಳ್ಳಲಾಗುತ್ತದೆ.
ಅಮೆರಿಕದ ಕರಡು ಪ್ರತಿಗೆ ತಕ್ಷಣ ಪ್ರತಿಕ್ರಿಯೆ ನೀಡಲು ಚೀನಾ ಮುಂದಾಗಿಲ್ಲ. ವಿಶ್ವಸಂಸ್ಥೆಯು ನಿಷೇಧಿತ ಉಗ್ರರ ಪಟ್ಟಿಯನ್ನು ತಯಾರಿಸುವ ವಿಚಾರದಲ್ಲಿ ಈಗಾಗಲೇ ವಿಶ್ವಸಂಸ್ಥೆಯ ಸದಸ್ಯ ರಾಷ್ಟ್ರಗಳಿಂದಲೇ ತೀವ್ರ ಆಕ್ಷೇಪವಿದೆ. ಹಾಗಾಗಿ, ಚೀನಾ ದೇಶವು ಈ ವಿಚಾರದಲ್ಲಿ ಯಾರನ್ನೂ ಬೆಂಬಲಿಸುವುದಿಲ್ಲ ಎಂದು ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಗೆಂಗ್ ಶುವಾಂಗ್ ಹೇಳಿದ್ದರು.
-
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ?












Click it and Unblock the Notifications