ರಾಜಕೀಯ ಜೀವನಕ್ಕೆ ನೆರವಾಗಲು ವೃತ್ತಿ ತ್ಯಜಿಸಿದ ಕಮಲಾ ಹ್ಯಾರಿಸ್ ಪತಿ
ವಾಷಿಂಗ್ಟನ್, ನವೆಂಬರ್ 11: ಅಮೆರಿಕದ ನೂತನ ಉಪಾಧ್ಯಕ್ಷೆಯಾಗಿ ಚುನಾಯಿತರಾಗಿರುವ ಕಮಲಾ ಹ್ಯಾರಿಸ್ ಅವರ ಪತಿ ಡೌಗ್ಲಾಸ್ ಎಮ್ಹಾಫ್, ಪತ್ನಿಯ ರಾಜಕೀಯ ಜೀವನಕ್ಕೆ ಬೆಂಬಲ ನೀಡುವ ಸಲುವಾಗಿ ತಮ್ಮ ಉದ್ಯೋಗವನ್ನು ತ್ಯಜಿಸುತ್ತಿದ್ದಾರೆ.
ದೇಶದ ಅತಿದೊಡ್ಡ ಕಾನೂನು ಸಂಸ್ಥೆಗಳಲ್ಲಿ ಒಂದಾದ ದಕ್ಷಿಣ ಕ್ಯಾಲಿಫೋರ್ನಿಯಾದ ಡಿಎಲ್ಎ ಪೈಪರ್ನಲ್ಲಿ ವಕೀಲರಾಗಿರುವ ಅವರು, ಶ್ವೇತಭವನದಲ್ಲಿ ಕಮಲಾ ಹ್ಯಾರಿಸ್ ಅಧಿಕಾರ ಸ್ವೀಕರಿಸುವ ದಿನದಂದೇ ವೃತ್ತಿಗೆ ವಿದಾಯ ಹೇಳಲಿದ್ದಾರೆ.
ಅಧ್ಯಕ್ಷೀಯ ಚುನಾವಣೆಯ ಚಟುವಟಿಕೆಗಳು ಆರಂಭವಾದಾಗ ಆಗಸ್ಟ್ನಲ್ಲಿ ಕಮಲಾ ಪರ ಪ್ರಚಾರ ನಡೆಸಲು ರಜೆ ತೆಗೆದುಕೊಂಡಿದ್ದ ಎಮ್ಹಾಫ್, 2021ರ ಜನವರಿ 20ರಿಂದ ಸಂಸ್ಥೆಯೊಡೆಗಿನ ಎಲ್ಲ ಸಂಬಂಧಗಳನ್ನು ಕಡಿದುಕೊಳ್ಳಲಿದ್ದಾರೆ.

ವೆನೇಬಲ್ ಎಲ್ಎಲ್ಪಿ ಕಾನೂನು ಸಂಸ್ಥೆಯಿಂದ ಡಿಎಲ್ಎ ಪೈಪರ್ ಸಂಸ್ಥೆಗೆ 2017ರಲ್ಲಿ ಸೇರಿಕೊಂಡಿದ್ದ ಎಮ್ಹಾಫ್ ಅವರು, 'ಅಮೆರಿಕನ್ ಮೇಡ್' ಚಿತ್ರದ ನಿರ್ಮಾಪಕರು ಮತ್ತು ರಾಷ್ಟ್ರೀಯ ಫುಟ್ಬಾಲ್ ಲೀಗ್ನ ವಿಲ್ಲೀ ಗೌಲ್ಟ್, ಮೆರ್ಕ್ ಆಂಡ್ ವಾಲ್ಮಾರ್ಟ್ನಂತಹ ವಾಣಿಜ್ಯ ಸಂಸ್ಥೆಗಳ ಕಾನೂನು ಸಲಹೆಗಾರರಾಗಿದ್ದರು.
ನೂತನ ಅಧ್ಯಕ್ಷ ಜೋ ಬೈಡನ್ ಅವರೊಂದಿಗೂ ಆಪ್ತ ಸಂಬಂಧ ಹೊಂದಿದ್ದಾರೆ. ಚುನಾವಣೆಯಲ್ಲಿ ಬೈಡನ್ ಮತ್ತು ಕಮಲಾ ಪರ ಅವರು ನಿರಂತರ ಪ್ರಚಾರ ನಡೆಸಿದ್ದರು. ಕಮಲಾ ಮತ್ತು ಎಮ್ಹಾಫ್ 2013ರಲ್ಲಿ ಮೊದಲು ಭೇಟಿಯಾಗಿದ್ದರು. 2014ರಲ್ಲಿ ಮದುವೆಯಾಗಿದ್ದರು. ಆಗ ಕಮಲಾ ಕ್ಯಾಲಿಫೋರ್ನಿಯಾದ ಅಟಾರ್ನಿ ಜನರಲ್ ಆಗಿದ್ದರು. ಕಮಲಾ ಅವರಿಗೆ ಮೊದಲ ಮದುವೆಯಾದರೆ, ಎಮ್ಹಾಫ್ ಅವರಿಗೆ ಇದು ಎರಡನೆಯ ಮದುವೆ. 2017ರಲ್ಲಿ ಕಮಲಾ ಕ್ಯಾಲಿಫೋರ್ನಿಯಾ ಸೆನೆಟರ್ ಆಗಿ ಆಯ್ಕೆಯಾಗಿದ್ದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications