ಜಾರ್ಜ್ ಫ್ಲಾಯ್ಡ್ ಹತ್ಯೆ ಪ್ರಕರಣ, ಪೊಲೀಸ್ ಅಧಿಕಾರಿ ಅಪರಾಧಿ ಎಂದ ಕೋರ್ಟ್
ವಾಷಿಂಗ್ಟನ್, ಏಪ್ರಿಲ್ 21: ಅಮೆರಿಕದಲ್ಲಿ ಕಪ್ಪು ವರ್ಣೀಯ ಜಾರ್ಜ್ ಫ್ಲಾಯ್ಡ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿ ಡೆರೆಕ್ ಚೌವಿನ್ನನ್ನು ಅಪರಾಧಿ ಎಂದು ಕೋರ್ಟ್ ತೀರ್ಪು ನೀಡಿದೆ.
ಜಾರ್ಜ್ ಫ್ಲಾಯ್ಡ್ ಹತ್ಯೆ ಪ್ರಕರಣದಲ್ಲಿ ಡೆರೆಕ್ ಚೌವಿನ್ ದೋಷಿ ಎಂದು ಹೆನ್ನೆಪಿನ್ ಕೌಂಟಿ ಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ.
ಅಮೆರಿಕದ ಮಿನಿಯಾಪೊಲಿಸ್ನಲ್ಲಿ ಈ ಘಟನೆ ನಡೆದಿದ್ದು, ಪೊಲೀಸ್ ವಶದಲ್ಲಿದ್ದಾಗಲೇ ಜಾರ್ಜ್ ಫ್ಲಾಯ್ಡ್ ಮೃತಪಟ್ಟಿದ್ದರು. ಈ ಪ್ರಕರಣ ಭಾರಿ ಕೋಲಾಹಲ ಸೃಷ್ಟಿ ಮಾಡಿತ್ತು.

ಜಾರ್ಜ್ ಕುತ್ತಿಗೆ ಮೇಲೆ ಕಾಲು ಒತ್ತಿ ಹಿಡಿದು ಡೆರೆಕ್ ಚೌವಿನ್ ಅಮಾನವೀಯವಾಗಿ ವರ್ತಿಸಿದ್ದರು. ಇದರಿಂದಾಗಿ ಫ್ಲಾಯ್ಡ್ ಮೃತಪಟ್ಟು ಅಮೆರಿಕದಲ್ಲಿ ಭಾರಿ ಪ್ರತಿಭಟನೆ, ಹಿಂಸಾಚಾರಕ್ಕೆ ಕಾರಣವಾಗಿತ್ತು. ಜನಾಂಗೀಯ ದೌರ್ಜನ್ಯವೆಂದು ಭಾರಿ ಆಕ್ರೋಶವೂ ವ್ಯಕ್ತವಾಗಿತ್ತು.
ತೀರ್ಪಿನ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅಮರಿಕ ಅಧ್ಯಕ್ಷ ಜೋ ಬೈಡನ್ , ಈ ತೀರ್ಪು ಅಮೆರಿಕ ನ್ಯಾಯ ಪಥದಲ್ಲಿ ಮುನ್ನಡೆಗೆ ಒಂದು ದೊಡ್ಡ ಹೆಜ್ಜೆ, ಜಾರ್ಜ್ ಫ್ಲಾಯ್ಡ್ನನ್ನು ಮರಳಿ ತರಲು ಸಾಧ್ಯವಾಗದಿದ್ದರೂ, ಇದು ಅಮೆರಿಕದ ನ್ಯಾಯ ವ್ಯವಸ್ಥೆಯ ಮೇಲೆ ಎಲ್ಲರಿಗೂ ನಂಬಿಕೆ ಹೆಚ್ಚಾಗುವಂತಾಗಿದೆ ಎಂದಿದ್ದಾರೆ.
ಅಮೆರಿಕದಲ್ಲಿ ಪೊಲೀಸ್ ವಶದಲ್ಲಿದ್ದಾಗಲೇ ಮೃತಪಟ್ಟಿದ್ದ ಆಫ್ರಿಕನ್-ಅಮೆರಿಕನ್ ಜಾರ್ಜ್ ಫ್ಲಾಯ್ಡ್ ಕುಟುಂಬಕ್ಕೆ 196 ಕೋಟಿ ರೂ ಅಂದರೆ 27 ಮಿಲಿಯನ್ ಡಾಲರ್ ಪರಿಹಾರಕ್ಕೆ ಮಿನಿಯಾಪೊಲಿಸ್ನ ನಗರ ಕೌನ್ಸಿಲ್ ಒಪ್ಪಿಗೆ ಸೂಚಿಸಿದೆ.
ಫ್ಲಾಯ್ಡ್ ಹತ್ಯೆ ನಂತರ ಅಮೆರಿಕದಲ್ಲಿ ಸಾವಿರಾರು ಕೋಟಿ ನಷ್ಟವಾಗಿತ್ತು, ಹೀಗಾಗಿ ಮುನ್ನಚ್ಚರಿಕೆ ಕ್ರಮವಾಗಿ ಬೃಹತ್ ಮೊತ್ತದ ಪರಿಹಾರ ಘೋಷಿಸಿದೆ. ಪ್ರತಿಭಟನೆಯನ್ನು ತಪ್ಪಿಸಲು ಪರಿಹಾರ ಘೋಷಿಸಲಾಗಿದೆ ಎನ್ನಲಾಗಿತ್ತು.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ












Click it and Unblock the Notifications