ಉಗ್ರ ಹಫೀಜ್ ಕುರಿತ ಟ್ರಂಪ್ ಟ್ವೀಟ್ಗೆ ಅಮೆರಿಕ ಸದನ ಸಮಿತಿ ತಿರುಗೇಟು
ವಾಷಿಂಗ್ಟನ್, ಜುಲೈ 18: ಜಾಗತಿಕ ಉಗ್ರ ಹಫೀಜ್ ಸಯೀದ್ ಬಂಧನಕ್ಕೆ ಸಂಬಂಧಿಸಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಡ್ರಂಪ್ ಟ್ವೀಟ್ಗೆ ಅಲ್ಲಿಯ ವಿದೇಶಾಂಗ ಸದನ ಸಮಿತಿ ತಿರುಗೇಟು ನೀಡಿದೆ.
ಡೊನಾಲ್ಡ್ ಟ್ರಂಪ್ ಹೇಳಿರುವಂತೆ ಹಫೀಜ್ ಸಯೀದ್ ಹತ್ತು ವರ್ಷಗಳ ಕಾಲ ನಾಪತ್ತೆಯಾಗಿರಲಿಲ್ಲ. ಪಾಕಿಸ್ತಾನದಲ್ಲಿ ಆತ ಆರಾಮಾಗಿ ಓಡಾಡಿಕೊಂಡಿದ್ದ. ಆತನನ್ನು ಬಂಧಿಸಲು ಪಾಕಿಸ್ತಾನ ಯಾವುದೇ ಕ್ರಮವನ್ನೇ ತೆಗೆದುಕೊಂಡಿರಲಿಲ್ಲ.
ಡಿಸೆಂಬರ್ 2001, ಮೇ 2002, ಅಕ್ಟೋಬರ್ 2002, ಆಗಸ್ಟ್ 2006, ಡಿಸೆಂಬರ್ 2008 ಸೆಪ್ಟೆಂಬರ್ 2009, ಜನವರಿ 2017ರಲ್ಲಿಯೂ ಆತನನ್ನು ಬಂಧಿಸಲಾಗಿತ್ತು ಎಂದು ಸದನ ಸಮಿತಿ ಟ್ವೀಟ್ ಮಾಡಿದೆ.

ಸಯೀದ್ ಬಂಧನದ ಬಳಿಕ ಟ್ವೀಟ್ ಮಾಡಿದ್ದ ಟ್ರಂಪ್ ಮುಂಬೈ ಭಯೋತ್ಪಾದಕ ದಾಳಿಯ ಮಾಸ್ಟ್ರ್ ಮೈಂಡ್ನನ್ನು ಹತ್ತು ವರ್ಷಗಳ ಶೋಧ ಕಾರ್ಯಾಚರಣೆ ಬಳಿಕ ಪಾಕಿಸ್ತಾನ ಬಂಧಿಸಿದೆ. ಕಳೆದ ಎರಡು ವರ್ಷದ ಒತ್ತಡವು ಕೆಲಸ ಮಾಡಿದೆ ಎಂದಿದ್ದರು.
ಈ ಟ್ವೀಟ್ ಬಗ್ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಹಫೀಜ್ ಸಯೀದ್ ಬಂಧನದ ಹಿಂದೆ ಫೈನಾನ್ಶಿಯಲ್ ಆಕ್ಷನ್ ಟಾಸ್ಕ್ ಫೋರ್ಸ್ ಕಠಿಣ ಕ್ರಮದ ಭೀತಿ ಇದೆ ಎನ್ನಲಾಗಿದೆ.
ಎಫ್ಎಟಿಎಫ್ನಿಂದ ಕಪ್ಪು ಪಟ್ಟಿಗೆ ಸೇರುವ ಭಯದಲ್ಲಿ ತೋರ್ಪಡಿಕೆಗೆ ಪಾಕಿಸ್ತಾನ ಬಂಧಿಸಿದೆ ಎಂದು ಹೇಳಲಾಗುತ್ತಿದೆ. ಭಾರತವೂ ಕೂಡ ಇದೇ ಧಾಟಿಯಲ್ಲಿ ಪ್ರತಿಕ್ರಿಯಿಸಿದ್ದು, ಹಫೀಜ್ ಸಯೀದ್ ಬಂಧನ ಕೇವಲ ತೋರ್ಗಾಣಿಕೆಯ ಆಗದಿರಲಿ ಎಂದು ಹೇಳಿತ್ತು. ಅಮೆರಿಕ ಸದನ ಸಮಿತಿಯು ಟ್ರಂಪ್ ಹೇಳಿಕೆಗೆ ಅಸಮಾಧಾನ ವ್ಯಕ್ತಪಡಿಸಿದ್ದಲ್ಲದೆ ಸಯೀದ್ ವಿರುದ್ಧ ಕಠಿಣ ಕ್ರಮಕ್ಕೆ ಆದೇಶಿಸಿತ್ತು.
ಮುಂಬೈ ಭಯೋತ್ಪಾದನಾ ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಸಯೀದ್ನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ ಎಂದು ಪಾಕಿಸ್ತಾನದ ಮಾಧ್ಯಮಗಳು ವರದಿ ಮಾಡಿವೆ.
ಲಷ್ಕರ್-ಎ-ತೊಯಿಬಾ ಭಯೋತ್ಪಾದಕ ಸಂಘಟನೆಯ ಪ್ರಮುಖನಾಗಿದ್ದ ಈತ ಪಾಕಿಸ್ತಾನದಲ್ಲಿ ಭಯೋತ್ಪಾದನೆಗೆ ಸಂಬಂಧಿಸಿದಂತೆ 23 ಪ್ರಕರಣಗಳನ್ನು ಎದುರಿಸುತ್ತಿದ್ದ. 26/11 ಯಾರಿಗೆ ತಾನೆ ನೆನಪಿಲ್ಲ ಹೇಳಿ, ಮುಂಬೈನ ತಾಜ್ ಹೋಟೆಲ್ ಮೇಲೆ ದಾಳಿ ನಡೆಸಿ ನೂರಾರು ಮಂದಿ ಸಾವಿಗೆ ಕಾರಣವಾಗಿತ್ತು.
26/11 ಮುಂಬೈ ದಾಳಿ: ಪಾಕ್ ನ ಇಬ್ಬರು ಸೇನಾಧಿಕಾರಿ ವಿರುದ್ಧ ಜಾಮೀನುರಹಿತ ವಾರಂಟ್ ಭಾರತದ ವಿರುದ್ಧವಾಗಿ ಪಾಕಿಸ್ತಾನದಲ್ಲಿ ಹಲವು ಪ್ರತಿಭಟನೆಗಳಲ್ಲಿ ಈತ ಮುಕ್ತವಾಗಿ ಪಾಲ್ಗೊಳ್ಳುತ್ತಿದ್ದ.
ಅಂತಾರಾಷ್ಟ್ರೀಯ ಒತ್ತಡದಿಂದಾಗಿ ಪಾಕಿಸ್ತಾನವು ಆತನ ಮೇಲೆ ಭಯೋತ್ಪಾದನೆ ಪ್ರಕರಣ ದಾಖಲಿಸಿತ್ತು. ಮುಂಬೈ ದಾಳಿ ನಡೆದು 10 ವರ್ಷ ಕಳೆದ ಸಂದರ್ಭದಲ್ಲಿ ಅಮೆರಿಕವು ಭಯೋತ್ಪಾದಕರನ್ನು ಬಂಧಿಸುವಂತೆ ಪಾಕಿಸ್ತಾನವನ್ನು ಒತ್ತಾಯಿಸಿತ್ತು.
2008ರ ನವೆಂಬರ್ 26ರಂದು ಪಾಕಿಸ್ತಾನ ಮೂಲದ ಇಸ್ಲಾಂ ಮೂಲಭೂತವಾದದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾದ ಸುಮಾರು 12 ಜನ ಉಗ್ರರು ತಂತ್ರಗಾರಿಕೆಯಿಂದ ಪಾಕಿಸ್ತಾನದಿಂದ ಭಾರತದ ಒಳ ನುಸುಳಿದ್ದು ಅಲ್ಲದೆ ಸತತ ಮೂರು ದಿನಗಳ ಕಾಲ ಮುಂಬಯಿ ನಗರವನ್ನು ಗುರಿಯಾಗಿಸಿಕೊಂಡು ಬಾಂಬ್ ಮತ್ತು ಗುಂಡಿನ ಮಳೆಗರೆದು ಸಾರ್ವಜನಿಕ ಜೀವನ ಹಾಗು ಅಪಾರ ಆಸ್ತಿ-ಪಾಸ್ತಿ ನಷ್ಟಗಳಿಗೆ ಕಾರಣರಾದರು.
-
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ












Click it and Unblock the Notifications