ಅಫ್ಘಾನಿಸ್ತಾನದಲ್ಲಿ ಅಲ್ಖೈದಾ, ISIS ಉಗ್ರ ಸಂಘಟನೆಗಳ ಒಗ್ಗಟ್ಟು ಪ್ರದರ್ಶನ
ವಾಷಿಂಗ್ಟನ್, ಫೆಬ್ರವರಿ 11: ಅಲ್ಖೈದಾ, ಐಎಸ್ಐಎಸ್ ಉಗ್ರ ಸಂಘಟನೆಗಳು ಅಫ್ಘಾನಿಸ್ತಾನದಲ್ಲಿ ಒಗ್ಗಟ್ಟಾಗುತ್ತಿರುವ ಬಗ್ಗೆ ಅಮೆರಿಕ ಎಚ್ಚರಿಕೆ ನೀಡಿದೆ.
ಅಮೆರಿಕದ ಸೇನಾದಂಡನಾಯಕ ಮೈಕೆಲ್ ಎರಿಕ್ ಈ ಬಗ್ಗೆ ಪ್ರಕಟಣೆ ನೀಡಿದ್ದು, ಜಗತ್ತಿನ ಎರಡು ಪ್ರಭಾವಿ ಉಗ್ರಸಂಘಟನೆಗಳು ಒಂದಾಗುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.
ತಾಲಿಬಾನ್ ಸರ್ಕಾರ ಇತ್ತೀಚಿಗಷ್ಟೆ ದೇಶದ ಜೈಲುಗಳಲ್ಲಿದ್ದ ಕೆಲ ಅಲ್ ಖೈದಾ ಮತ್ತು ಐಸಿಸ್ ಉಗ್ರರನ್ನು ಬಿಡುಗಡೆ ಮಾಡಿತ್ತು. ಈ ಬಗ್ಗೆ ಅಮೆರಿಕ ಆತಂಕಗೊಂಡಿದೆ.

ತಾಲಿಬಾನ್ ಆಡಳಿತದಲ್ಲಿ ಅಫ್ಗಾನ್ ಜೈಲಿನಿಂದ ಬಿಡುಗಡೆಗೊಂಡ ಕೈದಿಗಳು ಇಸ್ಲಾಮಿಕ್ ಸ್ಟೇಟ್(ಐಎಸ್, ಐಸಿಸ್) ಮತ್ತು ಅಲ್-ಖೈದಾ ಭಯೋತ್ಪಾದಕ ಗುಂಪುಗಳನ್ನು ಸೇರಿಕೊಂಡಿದ್ದಾರೆ ಎಂದು ಸಾಮೂಹಿಕ ಭದ್ರತಾ ಒಪ್ಪಂದ ಸಂಸ್ಥೆಯ ಜಂಟಿ ಸಿಬ್ಬಂದಿ ಮುಖ್ಯಸ್ಥ ಅನಾಟೊಲಿ ಸಿಡೊರೊವ್ ಹೇಳಿದ್ದರು.
ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಅವರು, ಅಫ್ಘಾನ್ ಕಾರಾಗೃಹಗಳಿಂದ ಬಿಡುಗಡೆಗೊಂಡವರು ಐಸಿಸ್ ಸೇರ್ಪಡೆಗೊಳ್ಳುತ್ತಿರುವುದರ ಜೊತೆಗೆ, ತಾಲಿಬಾನ್ ವಿರೋಧಿ ಉಗ್ರರನ್ನು ನೇಮಕ ಮಾಡಿಕೊಳ್ಳುತ್ತಿರುವುದರಿಂದ ಸಂಘಟನೆಗಳು ಬಲಗೊಳ್ಳುತ್ತಿವೆ ಎಂದಿದ್ದರು.
ತಾಲಿಬಾನ್ ದೇಶವನ್ನು ಸ್ವಾಧೀನಪಡಿಸಿಕೊಂಡ ನಂತರ 3 ದಶಲಕ್ಷಕ್ಕೂ ಹೆಚ್ಚು ಅಫ್ಘಾನ್ ಜನರು ತಮ್ಮ ದೇಶವನ್ನು ತೊರೆದಿದ್ದು, ಇರಾನ್ ಮತ್ತು ಪಾಕಿಸ್ತಾನಕ್ಕೆ ವಲಸೆ ಹೋಗಿದ್ದಾರೆ ಎಂದು ಸಿಡೊರೊವ್ ಮಾಹಿತಿ ನೀಡಿದ್ದಾರೆ.
ತಾಲಿಬಾನಿಗಳು ಅಫ್ಘಾನ್ ಜೈಲಿನಲ್ಲಿದ್ದ ಸಾವಿರಾರು ಖೈದಿಗಳನ್ನು ಜೈಲಿನಿಂದ ಬಿಡುಗಡೆ ಮಾಡಿದ್ದರು. ಇದೀಗ ಅವರೆಲ್ಲಾ ಉಗ್ರ ಸಂಘಟನೆಗಳಿಗೆ ಸೇರ್ಪಡೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ.
ಮೇ 2020 ಮತ್ತು ಎಪ್ರಿಲ್ 2021ರ ಅಫ್ಘಾನಿಸ್ತಾನದ ಬೆಳವಣಿಗೆಗಳ ಹಿಂದೆ ಅಲ್ ಖೈದಾ ಕೈವಾಡ ಇರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಇದರಿಂದಾಗಿ ತಾಲಿಬಾನ್ ಮತ್ತು ಅಲ್ ಖೈದಾ ನಡುವೆ ಬೇರ್ಪಡಿಸಲಾಗದ ನಂಟು ಇರುವುದಾಗಿ ವಿಶ್ವಸಂಸ್ಥೆ ಭದ್ರತಾ ಮಂಡಳಿಗೆ ಸಲ್ಲಿಕೆಯಾಗಿರುವ ತಜ್ಞರ ವರದಿಯಲ್ಲಿ ಹೇಳಲಾಗಿದೆ.
ತಾಲಿಬಾನ್ ಮತ್ತು ಅಲ್ ಖೈದಾ ವಿಚಾರಧಾರೆಗಳಲ್ಲಿ ಸಾಮ್ಯತೆ ಇದ್ದು, ಅವೆರಡೂ ಸಂಘಟನೆಗಳು ಒಂದೇ ರೀತಿ ಹೋರಾಟ ನಡೆಸಿವೆ ಹಾಗೂ ಜಗತ್ತಿನ ವಿರೋಧ ಕಟ್ಟಿಕೊಂಡಿವೆ. ಎಲ್ಲಕ್ಕಿಂತ ಹೆಚ್ಚಾಗಿ ಅವೆರಡೂ ಸಂಘಟನೆಗಳ ನಡುವೆ ವಿವಾಹ ಸಂಬಂಧಗಳೂ ಏರ್ಪಟ್ಟಿವೆ. ಇವೆಲ್ಲದರಿಂದಾಗಿ ಅವರೆಡು ಸಂಘಟನೆಗಳ ನಡುವೆ ಬಿಡಿಸಲಾಗದ ನಂಟಿರುವುದಾಗಿ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ತಾಲಿಬಾನ್ ಈ ಹಿಂದೆ ಅಮೆರಿಕ ಜೊತೆಗಿನ ಮಾತುಕತೆ ಸಂದರ್ಭದಲ್ಲಿ ಅಲ್ ಖೈದಾ ನಾಯಕರ ಸಲಹೆ ಪಡೆದುಕೊಂಡಿರುವ ಬಗ್ಗೆ ಸಾಕ್ಷ್ಯಾಧಾರಗಳು ಲಭ್ಯವಾಗಿದ್ದು ಇದು ಅಂತಾರಾಷ್ಟ್ರೀಯ ಸಮುದಾಯದ ನಾಯಕರ ನಿದ್ದೆಗೆಡಿಸಿದೆ. ಅಲ್ ಖೈದಾ ಸಲಹೆಯ ಮೇರೆಗೆ ತಾಲಿಬಾನ್ ಅಮೆರಿಕದ ಷರತ್ತುಗಳಿಗೆ ಒಪ್ಪಿಕೊಂಡಿತ್ತು. ಇದೀಗ ಈ ಷರತ್ತುಗಳಿಗೆ ತಾಲಿಬಾನ್ ಎಷ್ಟರಮಟ್ಟಿಗೆ ಬದ್ಧವಾಗಿರುವುದೆಂಬ ಕುತೂಹಲ ಮೊಳೆತಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications