ರಷ್ಯಾ ಅಧ್ಯಕ್ಷ ಪುಟಿನ್ ಹತ್ಯೆ ಮಾಡಿ ಎಂದ ಅಮೆರಿಕ ಸೆನೆಟರ್
ವಾಷಿಂಗ್ಟನ್, ಮಾರ್ಚ್ 04: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹತ್ಯೆ ಮಾಡುವಂತೆ ಅಮೆರಿಕದ ಹಿರಿಯ ಸೆನೆಟರ್ ಲಿಂಡ್ಸೆ ಗ್ರಹಾಂ ಕರೆ ನೀಡಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಕೂಡ ಮಾಡಿರುವ ಅವರು, ಸದ್ಯದ ಪರಿಸ್ಥಿತಿಯನ್ನು ಸರಿಪಡಿಸುವ ಏಕೈಕ ವ್ಯಕ್ತಿಗಳು ಇರುವುದು ರಷ್ಯಾದಲ್ಲಿಯೇ, "ರಷ್ಯಾದಲ್ಲಿ ಬ್ರೂಟಸ್ ಇದೆಯೇ?" ರೋಮನ್ ಆಡಳಿತಗಾರ ಜೂಲಿಯಸ್ ಸೀಸರ್ನ ಹಂತಕರಲ್ಲಿ ಒಬ್ಬನನ್ನು ಉಲ್ಲೇಖಿಸಿ ಸೆನೆಟರ್ ಲಿಂಡ್ಸೆ ಗ್ರಹಾಂ ಕೇಳಿದ್ದಾರೆ.
ರಷ್ಯಾ-ಉಕ್ರೇನ್ ಯುದ್ಧ ಕೊನೆಗೊಳ್ಳುವುದು ಹೇಗೆ, ರಷ್ಯಾದಲ್ಲಿ ಯಾರಾದರೊಬ್ಬರು ಈ ವಿಚಾರದಲ್ಲಿ ದಿಟ್ಟ ಕ್ರಮ ಕೈಗೊಂಡು ಅಧ್ಯಕ್ಷರನ್ನು ಮುಗಿಸಿಬಿಡಬೇಕು ಎಂದು ಫಾಕ್ಸ್ ನ್ಯೂಸ್ ಟಿವಿಯ ನಿರೂಪಕ ಸೀನ್ ಹ್ಯಾನಿಟಿಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.
ಕಳೆದ ವಾರ ರಷ್ಯಾ ಉಕ್ರೇನ್ ವಿರುದ್ಧ ಯುದ್ಧ ಸಾರಿದ ನಂತರ ಇದುವರೆಗೆ 350 ನಾಗರಿಕರು ಹತ್ಯೆಯಾಗಿದ್ದು 10 ಲಕ್ಷಕ್ಕೂ ಅಧಿಕ ಮಂದಿ ದೇಶ ಬಿಟ್ಟು ಪಲಾಯನಗೈದಿದ್ದಾರೆ ಎಂದು ಉಕ್ರೇನ್ ಹೇಳಿದೆ. ತಾವು ನಾಗರಿಕರನ್ನು ಗುರಿಯಾಗಿಟ್ಟುಕೊಂಡು ಯುದ್ಧ ಮಾಡುತ್ತಿಲ್ಲ ಎಂದು ರಷ್ಯಾ ಪ್ರತಿಪಾದಿಸಿಕೊಂಡು ಬರುತ್ತಿದ್ದರೂ ಸಾಕ್ಷಿಗಳು ಮಾತ್ರ ಅದಕ್ಕೆ ವ್ಯತಿರಿಕ್ತವಾಗಿವೆ.

ಅಮೆರಿಕ ಕಾಂಗ್ರೆಸ್ ನಲ್ಲಿ 20 ವರ್ಷಕ್ಕೂ ಹೆಚ್ಚು ಕಾಲ ಸೇವೆ ಸಲ್ಲಿಸಿರುವ ಸೆನೆಟರ್ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗೆ ಅತ್ಯಾಪ್ತರಾಗಿದ್ದಾರೆ. ರಷ್ಯಾ ಅಧ್ಯಕ್ಷರ ಯುದ್ಧ ಅಪರಾಧ ಮತ್ತು ಮಾನವೀಯತೆ ವಿರುದ್ಧ ಅಪರಾಧ ಎಂದು ಬಣ್ಣಿಸಿದ್ದಾರೆ.
ರಷ್ಯಾವು ಉಕ್ರೇನ್ ಮೇಲೆ ಸಮರ ಸಾರುತ್ತಿದೆ, ರಷ್ಯಾದ ಅಧ್ಯಕ್ಷನನ್ನು ಹಿಡಿದುಕೊಟ್ಟವರಿಗೆ ಬಹುಮಾನ ನೀಡುವುದಾಗಿ ಉದ್ಯಮಿ ಘೋಷಿಸಿದ್ದರು.
ವ್ಲಾಡಿಮಿರ್ ಪುಟಿನ್ ಅವರನ್ನು ಜೀವಂತ ಅಥವಾ ಮೃತ ಸ್ಥಿತಿಯಲ್ಲಿ ಹಿಡಿದುಕೊಟ್ಟವರಿಗೆ 1 ಮಿಲಿಯನ್ ಡಾಲರ್ ಬಹುಮಾನವನ್ನು ರಷ್ಯಾದ ಉದ್ಯಮಿಯೊಬ್ಬರು ಘೋಷಿಸಿದ್ದರು.
ಪುಟಿನ್ ಅವರನ್ನು ರಷ್ಯಾ ಹಾಗೂ ಅಂತಾರಾಷ್ಟ್ರೀಯ ಕಾನೂನಿನ ಅಡಿಯಲ್ಲಿ "ವಾರ್ ಕ್ರಿಮಿನಲ್" ಎಂಬ ಆರೋಪದಲ್ಲಿ ಬಂಧಿಸಿ ಸಂವಿಧಾನಿಕ ಕರ್ತವ್ಯವನ್ನು ನಿರ್ವಹಿಸುವವರ ಅಧಿಕಾರಿಗಳಿಗೆ $1,000,000 ಬಹುಮಾನ ನೀಡುವುದಾಗಿ ಅಲೆಕ್ಸ್ ಕೊನನಿಖಿನ್ ಸಾಮಾಜಿಕ ಜಾಲತಾಣದಲ್ಲಿ ಬರೆದಿದ್ದರು.
ಪುಟಿನ್ ರಷ್ಯಾ ಅಧ್ಯಕ್ಷರಲ್ಲ ಅವರು ಅಧಿಕಾರಕ್ಕೆ ಬಂದಿದ್ದೇ ರಷ್ಯಾದಲ್ಲಿನ ಅಪಾರ್ಟ್ ಮೆಂಟ್ ಕಟ್ಟಡಗಳನ್ನು ಉಡಾಯಿಸುವ ವಿಶೇಷ ಕಾರ್ಯಾಚಾರಣೆ ಹಾಗೂ ಮುಕ್ತ ಚುನಾವಣೆಗಳನ್ನು ತೆಗೆದು, ತಮ್ಮ ವಿರೋಧಿಗಳನ್ನು ಹತ್ಯೆ ಮಾಡುವ ಮೂಲಕ. ರಷ್ಯಾದ ಜನಾಂಗದವನಾಗಿ, ಪ್ರಜೆಯಾಗಿ ರಷ್ಯಾವನ್ನು ಡಿನಾಜಿಫಿಕೇಷನ್ (ನಾಜೀಕರಣದಿಂದ ಮುಕ್ತ ಮಾಡುವುದು) ನನ್ನ ನೈತಿಕ ಕರ್ತವ್ಯ ಎಂದು ಭಾವಿಸುತ್ತೇನೆ. ನಾನು ಉಕ್ರೇನ್ ಗೆ ನನ್ನ ಬೆಂಬಲವನ್ನು ಮುಂದುವರೆಸುತ್ತೇನೆ" ಎಂದು ಅಲೆಕ್ಸ್ ಕೊನನಿಖಿನ್ ಹೇಳಿದ್ದರು.
Recommended Video
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ












Click it and Unblock the Notifications