H1-B ವೀಸಾ ಅರ್ಜಿದಾರರು ಖುದ್ದಾಗಿ ಸಂದರ್ಶನಕ್ಕೆ ಹಾಜರಾಗಬೇಕಿಲ್ಲ
ವಾಷಿಂಗ್ಟನ್, ಡಿಸೆಂಬರ್ 24:ಎಚ್-1 ಬಿ, ಎಲ್-1ಬಿ ವೀಸಾಗಳಿಗೆ ಖುದ್ದು ಹಾಜರಾಗಿ ಸಂದರ್ಶನ ನೀಡಬೇಕಿಲ್ಲ. ಎಚ್- 1 ಬಿ ವೀಸಾವು ವಲಸೆ ರಹಿತ ವೀಸಾ ಆಗಿದ್ದು, ಇದು ಅಮೆರಿಕ ಕಂಪನಿಗಳಿಗೆ ಸೈದ್ಧಾಂತಿಕ ಅಥವಾ ತಾಂತ್ರಿಕ ಪರಿಣತಿಯ ಅಗತ್ಯವಿರುವ ವಿಶೇಷ ಉದ್ಯೋಗಗಳಲ್ಲಿ ವಿದೇಶಿ ಉದ್ಯೋಗಿಗಳನ್ನು ನೇಮಿಸಿಕೊಳ್ಳಲು ಅನುವು ಮಾಡಿಕೊಡುತ್ತದೆ. ಭಾರತ ಮತ್ತು ಚೀನಾದಂತಹ ರಾಷ್ಟ್ರಗಳಿಂದ ಪ್ರತಿವರ್ಷ ಬರುವ ಸಹಸ್ರಾರು ನೌಕರರ ಮೇಲೆ ತಂತ್ರಜ್ಞಾನ ಕಂಪನಿಗಳು ಅವಲಂಬಿತವಾಗಿವೆ.
ರಾಯಭಾರಿ ಕಚೇರಿಗಳು ಮತ್ತು ದೂತಾವಾಸಗಳಿಗೆ ಇನ್ನೂ ವೈಯಕ್ತಿಕವಾಗಿ ಸಂದರ್ಶನದ ಅಗತ್ಯವಿರಬಹುದು ಮತ್ತು ಸ್ಥಳೀಯ ಪರಿಸ್ಥಿತಿಗಳ ಮೇಲೆ ಅವಲಂಬಿತವಾಗಿದೆ.
ಅರ್ಜಿದಾರರು ಈ ಅಭಿವೃದ್ಧಿ ಮತ್ತು ಪ್ರಸ್ತುತ ಕಾರ್ಯಾಚರಣೆಯ ಸ್ಥಿತಿ ಮತ್ತು ಸೇವೆಗಳ ಬಗ್ಗೆ ಹೆಚ್ಚು ವಿವರವಾದ ಮಾಹಿತಿಗಾಗಿ ರಾಯಭಾರ ಕಚೇರಿ ಮತ್ತು ಕಾನ್ಸುಲೇಟ್ ವೆಬ್ಸೈಟ್ಗಳನ್ನು ಪರಿಶೀಲಿಸಬೇಕು ಎಂದು ಅದು ಹೇಳಿದೆ.

ವಿಶೇಷ ವೃತ್ತಿಪರರು ( ಎಚ್-1ಬಿ ವೀಸಾ) ಟ್ರೈನಿ ಅಥವಾ ವಿಶೇಷ ಶಿಕ್ಷಣಕ್ಕೆ ಆಗಮಿಸುವವರು ( ಎಚ್-3 ವೀಸಾ) ಇಂಟರ್ ಕಂಪನಿ ವರ್ಗಾವಣೆದಾರರು (ಎಲ್ ವೀಸಾ) ಅಸಾಧಾರಣ ಸಾಮರ್ಥ್ಯ ಅಥವಾ ಸಾಧನೆ ಹೊಂದಿರುವವರು ( ಒ ವೀಸಾ) ಅಥ್ಲೆಟಿಕ್ಸ್ , ಕಲಾವಿದರು ಮತ್ತು ಎಂಟರ್ ಟ್ರೈನರ್ಸ್ ( ಪಿ ವೀಸಾ) ಮತ್ತು ಅಂತಾರಾಷ್ಟ್ರೀಯ ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮಗಳು ( ಕ್ಯೂ ವೀಸಾ) ಅರ್ಜಿದಾರರಿಗೆ ಡಿಸೆಂಬರ್ 31, 2022ರವರೆಗೂ ವೈಯಕ್ತಿಕ ಸಂದರ್ಶನಕ್ಕೆ ವಿನಾಯಿತಿ ನೀಡಲಾಗಿದೆ ಎಂದು ಡಿಪಾರ್ಟ್ ಮೆಂಟ್ ಆಫ್ ಸ್ಟೇಟ್ ಗುರುವಾರ ತಿಳಿಸಿದೆ.
2022ರ ಡಿಸೆಂಬರ್ 31ರವರೆಗೆ ವಲಸೆಯೇತರ ಉದ್ಯೋಗ ವೀಸಾಗಳು ಮತ್ತು ಅವರ ಅರ್ಹತಾ ಮಾನದಂಡಗಳ ಆಧಾರದಲ್ಲಿ ನಿರ್ದಿಷ್ಟ ವ್ಯಕ್ತಿಗಳಿಗೆ ಖುದ್ದು ಹಾಜರಾತಿ ಸಂದರ್ಶನದಿಂದ ವಿನಾಯಿತಿ ನೀಡುವಂತೆ ಕಾನ್ಸುಲರ್ ಕಚೇರಿಗಳಿಗೆ ತಾತ್ಕಾಲಿಕ ಅಧಿಕಾರ ನೀಡಲಾಗಿದೆ.
H-1B, L-1 ಮತ್ತು O-1 ವೀಸಾಗಳಿಗೆ ವಿದೇಶಗಳಿಂದ ಅರ್ಜಿ ಸಲ್ಲಿಸುವ ಅರ್ಜಿದಾರರು ಅಮೆರಿಕ ಕಾನ್ಸುಲೇಟ್ನಲ್ಲಿ ಖುದ್ದು ಸಂದರ್ಶನಕ್ಕೆ ಹಾಜರಾಗುವ ಅವಶ್ಯಕತೆ ಇಲ್ಲ. ವೀಸಾ ನೀಡುವ ಮೊದಲು ಕೊನೆಯ ಹಂತವಾಗಿ ಸಂದರ್ಶನ ಕಡ್ಡಾಯವಾಗಿ ನಡೆಯುತ್ತದೆ.
ಕಂಪೆನಿಗಳು ವಿದೇಶಗಳಿಂದ ಅತ್ಯಧಿಕ ಕೌಶಲವುಳ್ಳ ಪ್ರತಿಭೆಗಳನ್ನು ಆಕರ್ಷಿಸಲು ಆ ವರ್ಗಗಳು ಅತಿ ಹೆಚ್ಚು ಪ್ರತಿನಿಧಿಸುವ ಮಾದರಿಯ ವೀಸಾಗಳಾಗಿವೆ. ತಾತ್ಕಾಲಿಕ ಕೃಷಿ ಮತ್ತು ಕೃಷಿಯೇತರ ಉದ್ಯೋಗಿಗಳು (ಎಚ್-2 ವೀಸಾ), ವಿದ್ಯಾರ್ಥಿಗಳು (ಎಫ್ ಮತ್ತು ಎಂ ವೀಸಾಗಳು) ಮತ್ತು ವಿದ್ಯಾರ್ಥಿ ವಿನಿಮಯ ಸಂದರ್ಶಕರು (ಅಕಾಡೆಮಿಕ್ ಜೆ ವೀಸಾಗಳು) ಈ ವರ್ಗಕ್ಕೆ ಸೇರುತ್ತವೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications