ಟೆಕ್ಸಾಸ್: ಭಾರಿ ಚಳಿಯಿಂದ 21 ಸಾವು, ವಿದ್ಯುತ್ ಪೂರೈಕೆ ಸ್ಥಗಿತ
ಟೆಕ್ಸಾಸ್, ಫೆಬ್ರವರಿ 17: ಅಮೆರಿಕದ ಟೆಕ್ಸಾಸ್ನಲ್ಲಿ ತೀವ್ರ ಶೀತಗಾಳಿ ಕನಿಷ್ಠ 21 ಜನರನ್ನು ಬಲಿತೆಗೆದುಕೊಂಡಿದ್ದು, ಜನಜೀವನ ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಅಮೆರಿಕದ ಆಗ್ನೇಯ ಭಾಗದಲ್ಲಿನ ಶೀತ ಚಂಡಮಾರುತದಿಂದ ಭಾರಿ ಅನಾಹುತ ಸಂಭವಿಸುತ್ತಿದ್ದು, ವಿದ್ಯುತ್ ಪೂರೈಕೆ ಸ್ಥಗಿತಗೊಂಡು ಲಕ್ಷಾಂತರ ಮಂದಿ ಮತ್ತಷ್ಟು ತೊಂದರೆಗೆ ಸಿಲುಕಿದ್ದಾರೆ.
ಕಳೆದ ವಾರದವರೆಗೂ ಈ ರೀತಿಯ ಶೀತ ಮಾರುತ ಸುಳಿವೇ ಇರದ ಟೆಕ್ಸಾಸ್ನಲ್ಲಿನ ವಾತಾವರಣ ಜನರನ್ನು ನಡುಗಿಸಿದೆ. ಅಮೆರಿಕದ ಹಲವು ಭಾಗಗಳಿಗೆ ವಿಪರಿತ ಚಳಿ ಗಾಳಿ ಆವರಿಸಿದ್ದು, ಅನೇಕ ಕೊವಿಡ್ ಲಸಿಕೆ ಕೇಂದ್ರಗಳನ್ನು ಮುಚ್ಚುವಂತೆ ಮಾಡಿದೆ. ಇದರಿಂದ ಲಸಿಕೆ ಪೂರೈಕೆಗೂ ಅಡ್ಡಿಯಾಗಿದೆ.
ಟೆಕ್ಸಾಸ್ನಲ್ಲಿನ ವಿದ್ಯುತ್ ಘಟಕ ಪದೇ ಪದೇ ಕೈಕೊಡುತ್ತಿದ್ದು, ಬಹುತೇಕ ಭಾಗಗಳು ಕತ್ತಲಲ್ಲಿ ಮುಳುಗಿವೆ. ಮರಗಟ್ಟಿಸುವ ಹವಾಮಾನದಿಂದಾಗಿ ಪವನಶಕ್ತಿಯ ಟರ್ಬನ್ಗಳು ಸರಿಯಾಗಿ ತಿರುಗುತ್ತಿಲ್ಲ. ಇದರಿಂದ ಬೇಡಿಕೆ ಇರುವಷ್ಟು ಪ್ರಮಾಣದಲ್ಲಿ ವಿದ್ಯುತ್ ಉತ್ಪಾದನೆ ಸಾಧ್ಯವಾಗುತ್ತಿಲ್ಲ. ವಿದ್ಯುತ್ ಇಲ್ಲದ ಕಾರಣ ಮನೆಗಳು, ಕಟ್ಟಡಗಳ ಒಳಗೆ ಸಹ ಶೀತ ತಡೆಯುವ ಸಾಧನಗಳ ಬಳಕೆ ಸಾಧ್ಯವಾಗುತ್ತಿಲ್ಲ.

ಟೆಕ್ಸಾಸ್, ಲಾವುಯಿಸಿಯಾನಾ, ಕೆಂಟುಕಿ ಮತ್ತು ಮಿಸ್ಸೋರಿಗಳಲ್ಲಿ ಕನಿಷ್ಠ 21 ಮಂದಿ ಕೊರೆಯುವ ಚಳಿಯಿಂದ ಮೃತಪಟ್ಟಿದ್ದಾರೆ. ಟೆಕ್ಸಾಸ್ನ ಸುಗರ್ ಲ್ಯಾಂಡ್ನಲ್ಲಿ ಮನೆಯೊಂದರಲ್ಲಿ ವಿದ್ಯುತ್ ಇಲ್ಲದ ವೇಳೆ ಚಳಿ ತಡೆಯಲು ಹಾಕಿದ್ದ ಬೆಂಕಿ ತೀವ್ರಗೊಂಡು ನಾಲ್ವರು ದಹನವಾಗಿದ್ದಾರೆ.
ಚಳಿಯ ತೀವ್ರತೆ ಅಧಿಕವಾಗಿರುವ ರಾಜ್ಯಗಳಲ್ಲಿ ಯಾವುದೇ ತುರ್ತು ಪರಿಸ್ಥಿತಿಗಳನ್ನು ಎದುರಿಸಲು ಸಿದ್ಧರಾಗಿರುವಂತೆ ಅಧಿಕಾರಿಗಳಿಗೆ ಅಧ್ಯಕ್ಷ ಜೋ ಬೈಡನ್ ಸೂಚಿಸಿದ್ದಾರೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications