ಕೂಡ್ಲಿಗಿಯಲ್ಲಿ ನಾಗೇಂದ್ರ ವಿರುದ್ಧ ಬಿಜೆಪಿ ಅಭ್ಯರ್ಥಿ ಯಾರು?
ಬಳ್ಳಾರಿ, ಮಾರ್ಚ್, 29: ಕೂಡ್ಲಿಗಿ ಎಸ್ಟಿ (ವಾಲ್ಮೀಕಿ) ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ಹ್ಯಾಟ್ರಿಕ್ ಗೆಲುವಿಗಾಗಿ ಕಾಂಗ್ರೆಸ್ನಿಂದ ಸ್ಪರ್ಧಿಸುತ್ತಿರುವ ಬಿ. ನಾಗೇಂದ್ರ ವಿರುದ್ಧ ಸ್ಪರ್ಧಿಸುವ ಬಿಜೆಪಿ ಅಭ್ಯರ್ಥಿ ಯಾರು? ಜೆಡಿಎಸ್ನಿಂದ ಮಾಜಿ ಶಾಸಕ ಎನ್.ಟಿ. ಬೊಮ್ಮಣ್ಣ ಅವರು ಸ್ಪರ್ಧಿಸುತ್ತಿರುವ ಹಿನ್ನಲೆಯಲ್ಲಿ ಈ ಪ್ರಶ್ನೆ ಇಡೀ ಕ್ಷೇತ್ರದ ಮತದಾರರನ್ನು ತೀವ್ರವಾಗಿ ಕಾಡುತ್ತಿದೆ.
ಕೂಡ್ಲಿಗಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಲು ಮೊಳಕಾಲ್ಮೂರು ಎಸ್ಟಿ ಮೀಸಲು ಕ್ಷೇತ್ರದ ಬಿಎಸ್ಆರ್ ಪಕ್ಷದ ಶಾಸಕ ತಿಪ್ಪೇಸ್ವಾಮಿ ಅವರ ಸಹೋದರ, ನಿವೃತ್ತ ಜಿಲ್ಲಾ ಅರಣ್ಯ ಸಂರಕ್ಷಣಾ ಅಧಿಕಾರಿ, ಜಿಲ್ಲಾ ಪಂಚಾಯಿತಿಯ ಮಾಜಿ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ, ಗಣಿ ಹಗರಣದಲ್ಲಿ ಪರಪ್ಪನ ಅಗ್ರಹಾರ ಸೇರಿದ್ದ, ಜಿ. ಜನಾರ್ದನರೆಡ್ಡಿಯ ಪರಮಾಪ್ತ ಎಸ್. ಮುತ್ತಯ್ಯ ಮತ್ತು ಕೋಡಿಹಳ್ಳಿ ಭೀಮಪ್ಪ ಅವರ ಮಧ್ಯೆ ತೀವ್ರ ಸ್ಪರ್ಧೆ ಏರ್ಪಟ್ಟಿದೆ.
ಬಿಜೆಪಿಯು ಬಿ. ಶ್ರೀರಾಮುಲು, ರೆಡ್ಡಿ ಸಹೋದರರ ಮಾತನ್ನು ಗೌರವಿಸಿದಲ್ಲಿ ಎಸ್. ಮುತ್ತಯ್ಯ ಅವರ ಸ್ಪರ್ಧೆ ಬಹುತೇಕ ಖಚಿತ. ಆದರೆ, ಸ್ಥಳೀಯರಿಗೇ ಟಿಕೇಟ್ ಎನ್ನುವ ಸೂತ್ರವನ್ನು ಪಾಲಿಸಿದಲ್ಲಿ ಕೋಡಿಹಳ್ಳಿ ಭೀಮಪ್ಪನಿಗೆ ಟಿಕೇಟ್ ಗ್ಯಾರೆಂಟಿ.
ಬಿಜೆಪಿಯಲ್ಲಿ ಅಭ್ಯರ್ಥಿ ಅಂತಿಮ ಆಗದ ಕಾರಣ, ಕೂಡ್ಲಿಗಿ ಕ್ಷೇತ್ರದ ಮತದಾರರು ಸೋಲು/ಗೆಲುವಿನ ಲೆಕ್ಕಾಚಾರ ಹಾಕಲು, ಚುನಾವಣೆಯ ಬಗ್ಗೆ ವಿಶ್ಲೇಷಣೆ ಮಾಡಲು ಆಸಕ್ತಿ ತೋರುತ್ತಿಲ್ಲ. ಮುತ್ಯಯ್ಯ ಅವರು ಸ್ಪರ್ಧಿಸಿದಲ್ಲಿ ಟಪಾಲ್ ಗಣೇಶ್ ಕೂಡ್ಲಿಗಿಯಲ್ಲೂ ಈ ನಿವೃತ್ತ ಅಧಿಕಾರಿಯ ಭ್ರಷ್ಟಾಚಾರ ಬ್ರಹ್ಮಾಂಡವನ್ನು ಪ್ರಚಾರಕ್ಕಾಗಿ ಬಳಸಿದಲ್ಲಿ ಹೇಗೆ? ಎಂದು ಪಕ್ಷ ಚಿಂತನೆ ನಡೆಸುತ್ತಿದೆ ಎನ್ನಲಾಗಿದೆ.
ಬಿಜೆಪಿಯಿಂದ ಮೇಲ್ಕಾಣಿಸಿದ ಇಬ್ಬರಲ್ಲಿ ಯಾರೋ ಸ್ಪರ್ಧಿಸಿದರೂ ನೇರಾನೇರಾ ಸ್ಪರ್ಧೆ ಏರ್ಪಡುವುದು ಬಿ. ನಾಗೇಂದ್ರ ಮತ್ತು ಎನ್.ಟಿ. ಬೊಮ್ಮಣ್ಣ ಅವರ ಮಧ್ಯೆ. ಎನ್.ಟಿ. ಬೊಮ್ಮಣ್ಣ ಅವರು ಕ್ಷೇತ್ರವನ್ನು ಒಂದರೆಡುಬಾರಿ ಸುತ್ತಿ, ಮುಖಂಡರನ್ನು ಭೇಟಿ ಮಾಡಿ, ಮಾತನಾಡಿಸಿ, ಸ್ಥಳೀಯರಿಗೆ ಆದ್ಯತೆ ನೀಡಲು ಮನವಿ ಮಾಡಿದ್ದಾರೆ.
ಬಿ. ನಾಗೇಂದ್ರ ಟಿಕೇಟ್ಗಾಗಿ ಇನ್ನೂ ಬೆಂಗಳೂರು ಮತ್ತು ದೆಹಲಿ ಮಧ್ಯೆ ತಿರುಗಾಟ ನಡೆಸಿದ್ದು ಅಲ್ಲದೇ, ಕ್ಷೇತ್ರದ ಆಯ್ದ ಮುಖಂಡರನ್ನು ಬೆಂಗಳೂರಿಗೆ ಕರೆಯಿಸಿ, ಮಾತನಾಡುತ್ತಿದ್ದಾರೆ. ಆದರೆ, ಎರೆಡು ಅವಧಿಯ ಶಾಸಕರಾಗಿ ಇವರು ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿಲ್ಲ ಎನ್ನುವ ಜನಸಾಮಾನ್ಯರ ಅಭಿಪ್ರಾಯ, ಹೊರಗಿನವರು ಎನ್ನುವ ಕಾರಣ ಅವರ ಹ್ಯಾಟ್ರಿಕ್ ಗೆಲುವು ಸಾಹಸವೇ ಸೈ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications