ಯಾದಗಿರಿಯ ಸುರಪುರದ ಬಳಿ ಕಾರು-ಖಾಸಗಿ ಬಸ್ ನಡುವೆ ಭೀಕರ ಅಪಘಾತ, ಹೊತ್ತಿ ಉರಿದ ವಾಹನಗಳು
Terrible Accident: ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭಿವಿಸಿದೆ. ಕಾರು ಮತ್ತು ಖಾಸಗಿ ಬಸ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ 6 ಮಂದಿ ಸಜೀವ ದಹನವಾಗಿದ್ದಾರೆ. ಯಾದಗಿರಿ ಜಿಲ್ಲೆಯ ಸುರಪುರದ ಬಳಿ ದುರಂತ ಸಂಭವಿಸಿದೆ ಎಂದು ತಿಳಿದುಬಂದಿದೆ.
ಸುರಪುರದ ಬಳಿ ಕಾರು-ಖಾಸಗಿ ಬಸ್ ಡಿಕ್ಕಿಯಾಗಿದ್ದು, ಈ ರಭಸಕ್ಕೆ ಎರಡು ವಾಹನಗಳು ಹೊತ್ತಿ ಉರಿದಿವೆ. ಬಳಿಕ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಹರಸಾಹಸಪಟ್ಟಿದೆ.

ಬೆಂಗಳೂರಿನಿಂದ ಕಲಬುರಗಿಗೆ ಹೊರಟಿದ್ದ ಬಸ್ ಹಾಗೂ ಕಲಬುರಗಿಯಿಂದ ಲಿಂಗಸೂಗೂರಿನ ಕಡೆಗೆ ಪ್ರಯಾಣಿಸುತ್ತಿದ್ದ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದವರು ಸಜೀವದಹನವಾಗಿದ್ದಾರೆ. ಹಲವು ಪ್ರಯಾಣಿಕರು ಗಂಭೀರ ಗಾಯಗಂಡಿದ್ದು, ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಸುರಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತಪಟ್ಟವರ ಮಾಹಿತಿ ಕಲೆ ಹಾಕುತ್ತಿದ್ದಾರೆ ಎನ್ನಲಾಗಿದೆ.












Click it and Unblock the Notifications