ಲಾಕ್ಡೌನ್; ಜನರ ಕಷ್ಟಕ್ಕೆ ಮಿಡಿದ ಅಜೀಂ ಪ್ರೇಮ್ ಜಿ ಫೌಂಡೇಷನ್
ಯಾದಗಿರಿ, ಮೇ 25; ಯಾದಗಿರಿ ಜಿಲ್ಲೆಯಲ್ಲಿ ಸುಮಾರು 6 ಸಾವಿರ ಬಡಕುಟುಂಬಗಳಿಗೆ ಆಹಾರ ಧಾನ್ಯದ ಕಿಟ್ಗಳನ್ನು ಅಜೀಂ ಪ್ರೇಮ್ ಜೀ ಫೌಂಡೇಶನ್ ವತಿಯಿಂದ ವಿತರಿಸಲಾಗುತ್ತಿದೆ. ಜಿಲ್ಲಾಧಿಕಾರಿ ಡಾ. ರಾಗಪ್ರಿಯ ಆರ್. ಈ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ.
ಸಾಂಕೇತಿಕವಾಗಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಫಲಾನುಭವಿಯೊಬ್ಬರಿಗೆ ಫುಡ್ಕಿಟ್ ವಿತರಿಸುವ ಮೂಲಕ ಜಿಲ್ಲಾಧಿಕಾರಿಗಳು ಫೌಂಡೇಶನ್ನ ಮಹತ್ವದ ಕಾರ್ಯಕ್ರಮಕ್ಕೆ ಚಾಲನೆ ಕೊಟ್ಟರು. ಕೋವಿಡ್ 2 ನೇ ಅಲೆ ಹರಡದಂತೆ ತಡೆಯಲು ಲಾಕ್ಡೌನ್ ಘೋಷಣೆ ಮಾಡಿರುವ ಸಂದರ್ಭದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಜಿಲ್ಲೆಯ ಜನರಿಗೆ ಫೌಂಡೇಷನ್ ಸಹಾಯ ನೀಡುತ್ತಿದೆ.
ಶಿಕ್ಷಕರ ಸಹಾಯದಿಂದ ಅಜೀಂ ಪ್ರೇಮ್ ಜೀ ಫೌಂಡೇಶನ್ ಯಾದಗಿರಿ ಜಿಲ್ಲೆಯ ವಿವಿಧ ಭಾಗಗಳಲ್ಲಿನ ಬಡಕುಟುಂಬಗಳನ್ನು ಗುರುತಿಸಿದೆ. ಅವರಿಗೆ ಆಹಾರದ ಕಿಟ್ಗಳನ್ನು ಹಂಚಿಕೆ ಮಾಡುತ್ತಿದೆ. ಈ ಮೂಲಕ ಲಾಕ್ಡೌನ್ ಸಮಯದಲ್ಲಿ ಮಾನವೀಯತೆ ಮೆರೆಯುತ್ತಿದೆ.

ಕೋವಿಡ್ ಲಾಕ್ಡೌನ್ ಕಾಲದಲ್ಲಿ ಸಂಚಾರಕ್ಕೆ ನಿರ್ಬಂಧ ವಿಧಿಸಿರುವ ಕಾರಣದಿಂದ ಇಂತಹ ಕುಟುಂಬಗಳು ಕೆಲಸಕ್ಕೆ ತೆರಳುವಂತಿಲ್ಲ. ಹೀಗಾಗಿ ಇಂತಹ ಕುಟುಂಬಗಳ ಪರಿಸ್ಥಿತಿಯನ್ನು ಅರಿತು ಈ ಸಂಸ್ಥೆಯ ಕಾರ್ಯಕರ್ತರು ಮನೆ-ಮನೆಗೆ ಭೇಟಿ ನೀಡಿ ಅವರ ಅಗತ್ಯತೆಯನ್ನು ತಿಳಿದುಕೊಂಡು ದವಸ-ಧಾನ್ಯಗಳ ಕಿಟ್ ವಿತರಣೆ ಮಾಡುತ್ತಿದ್ದಾರೆ.
ಕೊರೊನಾ ಸೋಂಕಿತರ ಕುಟುಂಬಕ್ಕೂ ನೆರವು ನೀಡಿ ಎಂದು ಜಿಲ್ಲಾಧಿಕಾರಿಗಳು ಫೌಂಡೇಶನ್ಗೆ ಮನವಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಪ್ರಕಾಶ ಜಿ ರಜಪೂತ, ಅಜೀಂ ಪ್ರೇಮ್ಜೀ ಫೌಂಡೇಶನ್ನ ಯಾದಗಿರಿ ಘಟಕದ ಮುಖ್ಯಸ್ಥರಾದ ಅನಿಲ್ ಅಂಗಡಕಿ ಮುಂತಾದವರು ಉಪಸ್ಥಿತರಿದ್ದರು.
-
ಬೆಳಿಗ್ಗೆ ನಿಂಬೆ ಹಣ್ಣಿನ ರಸ ಕುಡಿಯುತ್ತಿದ್ದೀರಾ? ಲಾಭಗಳ ಜೊತೆ ಈ ಅಪಾಯಗಳೂ ಇವೆ -
Powerful Vastu Plants: ಮನೆಗೆ ಪಾಸಿಟಿವ್ ಎನರ್ಜಿ ಬೇಕಾ? ಈ ಸಸ್ಯಗಳನ್ನು ಇಡಿ, ಜೀವನವೇ ಬದಲಾಗುತ್ತದೆ -
ಬಿಸಿಲಿನ ತಾಪಕ್ಕೆ ಕಳೆಗುಂದಿದೆಯೇ ಮುಖದ ಕಾಂತಿ? ಬೇಸಿಗೆಯಲ್ಲಿ ತ್ವಚೆಯ ರಕ್ಷಣೆಗೆ ಇಲ್ಲಿವೆ 12 ಸರಳ ಸೂತ್ರ -
ವಾಸ್ತು ಪ್ರಕಾರ ಮನೆ ನಿರ್ಮಾಣದಲ್ಲಿ ದೇವರ ಕೋಣೆ ಪ್ರತ್ಯೇಕವಾಗಿರಬೇಕಾ? ಇಲ್ಲಿದೆ ಸ್ಪಷ್ಟನೆ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ?












Click it and Unblock the Notifications