ಲಾಕ್ಡೌನ್; ಜನರ ಕಷ್ಟಕ್ಕೆ ಮಿಡಿದ ಅಜೀಂ ಪ್ರೇಮ್ ಜಿ ಫೌಂಡೇಷನ್
ಯಾದಗಿರಿ, ಮೇ 25; ಯಾದಗಿರಿ ಜಿಲ್ಲೆಯಲ್ಲಿ ಸುಮಾರು 6 ಸಾವಿರ ಬಡಕುಟುಂಬಗಳಿಗೆ ಆಹಾರ ಧಾನ್ಯದ ಕಿಟ್ಗಳನ್ನು ಅಜೀಂ ಪ್ರೇಮ್ ಜೀ ಫೌಂಡೇಶನ್ ವತಿಯಿಂದ ವಿತರಿಸಲಾಗುತ್ತಿದೆ. ಜಿಲ್ಲಾಧಿಕಾರಿ ಡಾ. ರಾಗಪ್ರಿಯ ಆರ್. ಈ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ.
ಸಾಂಕೇತಿಕವಾಗಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಫಲಾನುಭವಿಯೊಬ್ಬರಿಗೆ ಫುಡ್ಕಿಟ್ ವಿತರಿಸುವ ಮೂಲಕ ಜಿಲ್ಲಾಧಿಕಾರಿಗಳು ಫೌಂಡೇಶನ್ನ ಮಹತ್ವದ ಕಾರ್ಯಕ್ರಮಕ್ಕೆ ಚಾಲನೆ ಕೊಟ್ಟರು. ಕೋವಿಡ್ 2 ನೇ ಅಲೆ ಹರಡದಂತೆ ತಡೆಯಲು ಲಾಕ್ಡೌನ್ ಘೋಷಣೆ ಮಾಡಿರುವ ಸಂದರ್ಭದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಜಿಲ್ಲೆಯ ಜನರಿಗೆ ಫೌಂಡೇಷನ್ ಸಹಾಯ ನೀಡುತ್ತಿದೆ.
ಯಾದಗಿರಿ; 9ನೇ ತರಗತಿ ವಿದ್ಯಾರ್ಥಿನಿ ಜಿ.ಪಂಚಾಯಿತಿ ಸಿಇಒ
ಶಿಕ್ಷಕರ ಸಹಾಯದಿಂದ ಅಜೀಂ ಪ್ರೇಮ್ ಜೀ ಫೌಂಡೇಶನ್ ಯಾದಗಿರಿ ಜಿಲ್ಲೆಯ ವಿವಿಧ ಭಾಗಗಳಲ್ಲಿನ ಬಡಕುಟುಂಬಗಳನ್ನು ಗುರುತಿಸಿದೆ. ಅವರಿಗೆ ಆಹಾರದ ಕಿಟ್ಗಳನ್ನು ಹಂಚಿಕೆ ಮಾಡುತ್ತಿದೆ. ಈ ಮೂಲಕ ಲಾಕ್ಡೌನ್ ಸಮಯದಲ್ಲಿ ಮಾನವೀಯತೆ ಮೆರೆಯುತ್ತಿದೆ.
ಬಡವರಿಗೆ ಆಹಾರ ಭದ್ರತೆ ಒದಗಿಸಲು ಹೈಕೋರ್ಟ್ ಸೂಚನೆ
ಕೋವಿಡ್ ಲಾಕ್ಡೌನ್ ಕಾಲದಲ್ಲಿ ಸಂಚಾರಕ್ಕೆ ನಿರ್ಬಂಧ ವಿಧಿಸಿರುವ ಕಾರಣದಿಂದ ಇಂತಹ ಕುಟುಂಬಗಳು ಕೆಲಸಕ್ಕೆ ತೆರಳುವಂತಿಲ್ಲ. ಹೀಗಾಗಿ ಇಂತಹ ಕುಟುಂಬಗಳ ಪರಿಸ್ಥಿತಿಯನ್ನು ಅರಿತು ಈ ಸಂಸ್ಥೆಯ ಕಾರ್ಯಕರ್ತರು ಮನೆ-ಮನೆಗೆ ಭೇಟಿ ನೀಡಿ ಅವರ ಅಗತ್ಯತೆಯನ್ನು ತಿಳಿದುಕೊಂಡು ದವಸ-ಧಾನ್ಯಗಳ ಕಿಟ್ ವಿತರಣೆ ಮಾಡುತ್ತಿದ್ದಾರೆ.
ಕೊರೊನಾ ಪರಿಸ್ಥಿತಿ; ಬಡವರಿಗೆ 2 ತಿಂಗಳು ಉಚಿತ ಆಹಾರ ಧಾನ್ಯ ಘೋಷಿಸಿದ ಕೇಂದ್ರ
ಕೊರೊನಾ ಸೋಂಕಿತರ ಕುಟುಂಬಕ್ಕೂ ನೆರವು ನೀಡಿ ಎಂದು ಜಿಲ್ಲಾಧಿಕಾರಿಗಳು ಫೌಂಡೇಶನ್ಗೆ ಮನವಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಪ್ರಕಾಶ ಜಿ ರಜಪೂತ, ಅಜೀಂ ಪ್ರೇಮ್ಜೀ ಫೌಂಡೇಶನ್ನ ಯಾದಗಿರಿ ಘಟಕದ ಮುಖ್ಯಸ್ಥರಾದ ಅನಿಲ್ ಅಂಗಡಕಿ ಮುಂತಾದವರು ಉಪಸ್ಥಿತರಿದ್ದರು.
Recommended Video