Nrega: ನರೇಗಾ ಜಾಬ್ ಕಾರ್ಡ್ ಪಡೆಯಲು ಸೀರೆ ಉಟ್ಟ ಪುರುಷರು- ಭಾರೀ ಭ್ರಷ್ಟಾಚಾರದ ಆರೋಪ
ಯಾದಗಿರಿ ಏಪ್ರಿಲ್ 8: ಮಹಿಳೆಯರ ಹೆಸರಿನಲ್ಲಿ ನರೇಗಾ ಜಾಬ್ ಕಾರ್ಡ್ ಮಾಡಿಸಿ ಹಣ ದೋಚಿದ ಆರೋಪ ಯಾದಗಿರಿಯಲ್ಲಿ ಕೇಳಿ ಬಂದಿದೆ. ಯಾದಗಿರಿಯಲ್ಲಿ ವಂಚಕರು ಜಾಬ್ ಕಾರ್ಡ್ ಪಡೆದು ಕೂಲಿ ಹಣ ಎಗರಿಸಿದ್ದಾರೆ. ಇದರಿಂದ ಜಿಲ್ಲಾ ಪಂಚಾಯಿತಿ ಅಧಿಕಾರಿಗಳು ಕ್ರಮಕ್ಕೆ ಮುಂದಾಗಿದ್ದಾರೆ.
ಹೌದು ಯಾದಗಿರಿ ಜಿಲ್ಲೆಯ ಮಲ್ಹಾರ ಗ್ರಾಮದಲ್ಲಿ ಇಂತಹದೊಂದು ಗೋಲ್ಮಾಲ್ ನಡೆದಿದೆ. ಪಂಚಾಯಿತ್ ಇಲಾಖೆಯ ಬಿಎಫ್ಟಿ (BFT) ಅಧಿಕಾರಿ ವೀರೇಶ್ ವಿರುದ್ಧ ಗಂಭೀರ ಆರೋಪ ಮಾಡಲಾಗಿದೆ. ಇಲ್ಲಿನ ಪುರುಷರು ಹೆಂಗಸರ ಸೋಗಿನಲ್ಲಿ ಹಣ ಲೂಟಿ ಮಾಡಲು ಸೀರೆ ಉಟ್ಟುಕೊಂಡು ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಅಧಿಕಾರಿಗಳಿಂದಲೇ ಖದೀಮರಿಗೆ ನೆರವು ಸಿಗುತ್ತಿರುವ ಆರೋಪ ಕೇಳಿ ಬಂದಿದೆ.

ನರೇಗಾ ಗ್ರಾಮದ ಭಾಗದ ಜನರು ಗೂಳೆ ಹೋಗದಂತೆ ಕೂಲಿ ಕೆಲಸ ನೀಡಿ ಹಣ ನೀಡುವ ಸದುದ್ದೇಶದಿಂದ ಸರ್ಕಾರ ಮಾಡಿದ ಯೋಜನೆಯಾಗಿದೆ. ಆದರೆ ಅಧಿಕಾರಿಗಳು, ಜನಪ್ರತಿನಿಧಿಗಳು ಸರ್ಕಾರದ ಕಣ್ಣಿಗೆ ಮಣ್ಣೆರೆಚುವಂತಹ ಕೆಲಸ ಮಾಡಿದ್ದಾರೆ. ಪುರುಷರಿಗೆ ಸೀರೆ ಉಡಿಸಿ ಪೋಟೋ ತೆಗೆಸಿ ನರೇಗಾ ಜಾಬ್ ಕಾರ್ಡ್ (NMMS) ಪಡೆಯಲಾಗಿದೆ. ಫೋಟೋದಿಂದ ಸ್ಥಳೀಯ ಕೆಲ ಪುರುಷರು ನರೇಗಾ ಜಾಬ್ ಕಾರ್ಡ್ ಪಡೆದು ಹಣ ಲಪಟಾಯಿಸಿದ್ದಾರೆ.
ಈ ಫೋಟೋದಲ್ಲಿ ಸೀರೆ ಹಾಕಿಕೊಂಡು ನಿಂತಿರುವವರು ಪುರುಷರೇ. ಸೀರೆ ಹಾಕಿಕೊಂಡು ಹೋಗಿ ಪುರುಷರ ಜೊತೆಗೆ ನಿಂತು ಫೋಟೋ ತೆಗೆಸಿಕೊಂಡು ಅದರಿಂದ ನರೇಗಾ ಜಾಬ್ ಕಾರ್ಡ್ ಪಡೆದು ಅದರಿಂದ ಬರುವ ಹಣವನ್ನು ಮೋಸದಿಂದ ತೆಗೆದುಕೊಂಡಿದ್ದಾರೆ.
ಕೆಲವು ಭ್ರಷ್ಟ ಅಧಿಕಾರಿಗಳು ಕೂಡ ಇದರಲ್ಲಿ ಶಾಮೀಲಾಗಿದ್ದಾರೆಂದು ತಿಳಿದು ಬಂದಿದೆ. ಕಳೆದ ಕೆಲ ತಿಂಗಳಿನಿಂದ ಈ ಲೂಟಿ ಮಾಡುವ ಕೆಲಸವನ್ನು ವಂಚಕರು ಮಾಡುತ್ತಿದ್ದಾರೆ.
ಪ್ರತಿಯೊಂದು ಹಳ್ಳಿಯಲ್ಲಿ ಜನ ಬೇರೆ ಊರುಗಳಿಗೆ ಗೂಳೆ ಹೋಗಬಾರದು ಎನ್ನುವ ಕಾರಣಕ್ಕೆ ನರೇಗಾ ಯೋಜನೆಯಲ್ಲಿ ಮಹಿಳೆಯರಿಗೆ ಕೂಲಿ ಕೆಲಸವನ್ನು ಕೊಡಲಾಗುತ್ತದೆ. ಆದರೆ ಸ್ಥಳೀಯ ಪುರುಷರು ನೇರವಾಗಿ ಹಣವನ್ನು ಲಪಟಾಯಿಸುವ ಉದ್ದೇಶದಿಂದ ಗ್ರಾಮ ಪಂಚಾಯಿತಿ ಅಧಿಕಾರಿಗಳು ಮತ್ತು ನರೇಗಾ ಯೋಜನೆಯ ಸುಪ್ರವೈಸರ್ ಸೇರಿಕೊಂಡು ಹಣ ಲಪಟಾಯಿಸಲು ಈ ರೀತಿ ಪ್ಲ್ಯಾನ್ ಮಾಡಿದ್ದಾರೆ.
ಮಹಿಳೆಯರ ಹೆಸರಿನಲ್ಲಿ ಜಾಬ್ ಕಾರ್ಡ್ ಸೃಷ್ಟಿ ಮಾಡಿ ಮಹಿಳೆಯರ ರೀತಿ ಸೀರೆ ತೊಟ್ಟು ಕೆಲಸ ಮಾಡುವ ರೀತಿ ಫೋಟೋಗಳನ್ನು ಸೃಷ್ಟಿ ಮಾಡಿದ್ದಾರೆ. ಅಂದರೆ ಪುರುಷರೇ ಮಹಿಳೆಯರಂತೆ ಸೀರೆ ತೊಟ್ಟು ಪೋಟೋಗಳನ್ನು ತೆಗೆಸಿಕೊಂಡಿದ್ದಾರೆ. ಇವರು ಪೂಜಾರಿ ಎಂಬಾತನ ಹೊಲದ ಬಳಿಯ ನಾಲೆ ಕಾಮಗಾರಿ ಮಾಡುವಂತೆ ಫೋಟೋ ಫೋಸ್ ಕೊಟ್ಟಿದ್ದಾರೆ.
ನರೇಗಾ ಜಾಬ್ ಕಾರ್ಡ್ ಪಡೆಯಲು ಆನ್ಲೈನ್ನಲ್ಲಿ ಫೋಟೋ ಅಪ್ಲೋಡ್ ಮಾಡಬೇಕು. ಈ ಫೋಟೋ ಅಪ್ಲೋಡ್ ಮಾಡಿದರೆ ಮಾತ್ರ ಅವರ ಖಾತೆಗೆ ಹಣ ಜಮಾ ಆಗುತ್ತದೆ. ಕಾರ್ಮಿಕರ ಕೆಲಸದ ಹಾಜರಾತಿನಂತೆ ಫೋಟೋ ಅಪ್ಲೋಡ್ ಮಾಡಬೇಕು. ಬಡವರಿಗೆ ಕಾರ್ಮಿಕರಿಗೆ ಕೂಲಿ ಕೊಡುವ ಉದ್ದೇಶದಿಂದ ಸರ್ಕಾರ ನರೇಗಾ ಎನ್ನುವ ಯೋಜನೆಯನ್ನು ಜಾರಿಗೆ ತಂದಿದೆ.
ಆದರೆ ಈ ಯೋಜನೆ ಸಂಪೂರ್ಣವಾಗಿ ಯಾದಗಿರಿ ಜಿಲ್ಲೆಯಲ್ಲಿ ವಿಫಲ ಆಗುತ್ತಿದೆ. ಇದರಲ್ಲಿ ಜನಪ್ರತಿನಿಧಿಗಳು, ಸ್ಥಳೀಯ ಅಧಿಕಾರಿಗಳು, ಸ್ಥಳೀಯ ಶಾಸಕರು ಶಾಮೀಲಾಗಿ ಹಣ ದೋಚುವ ಕೆಲಸ ಮಾಡಿದ್ದಾರೆ. ಈ ಪ್ರಕರಣ ಜಿಲ್ಲಾ ಪಂಚಾಯಿತಿ ಅಧಿಕಾರಿಗಳ ಗಮನಕ್ಕೆ ಬಂದ ನಂತರ ಬೆಳಕಿಗೆ ಬಂದಿದೆ. ತಪ್ಪು ಸಾಬೀತಾದರೆ ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಅಧಿಕಾರಿಗಳು ಭರವಸೆ ನೀಡಿದ್ದಾರೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications