ಯಾದಗಿರಿಯಲ್ಲಿ ಪೊಲೀಸ್ ಭದ್ರತೆಯೊಂದಿಗೆ ದೇವಸ್ಥಾನ ಪ್ರವೇಶಿಸಿದ ಮಹಿಳೆಯರು
ಯಾದಗಿರಿ, ಮೇ 29: ರಾಜ್ಯದಲ್ಲಿಇನ್ನೂ ಜಾತಿ ವ್ಯವಸ್ಥೆ ಜೀವಂತವಾಗಿದೆ ಎಂಬುವುದು ಮತ್ತೆ ಸಾಬೀತಾಗಿದೆ. ಯಾದಗಿರಿ ಜಿಲ್ಲೆಯ ಅಮಲಿಹಾಳ ಗ್ರಾಮದಲ್ಲಿ ದಲಿತರಿಗೆ ದೇವಾಲಯ ಪ್ರವೇಶಿಸಲು ನಿರಾಕರಿಸಿದ ಹಿನ್ನೆಲೆ ಐದು ಜನ ದಲಿತ ಮಹಿಳೆಯರು ಪೊಲೀಸ್ ಭದ್ರತೆಯೊಂದಿಗೆ ದೇವಾಲಯ ಪ್ರವೇಶಿಸುವ ಮೂಲಕ ಗಮನ ಸೆಳೆದಿದ್ದಾರೆ.
ಅಮಲಿಹಾಳ ಗ್ರಾಮದಲ್ಲಿ ದಲಿತ ಮಹಿಳೆಯರು ಪೊಲೀಸ್ ಸರ್ಪಗಾವಲಿನಲ್ಲಿ ದೇವಾಲಯದ ಒಳಗೆ ಪ್ರವೇಶ ಮಾಡಿದ್ದಾರೆ. ವಿರೋಧದ ನಡುವೆಯೂ ಹನುಮಾನ್ ದೇವಸ್ಥಾನ ಪ್ರವೇಶಿಸಿ, ಪೂಜೆ ಸಲ್ಲಿಸಿದ್ದಾರೆ. ಅಮಲಿಹಾಳ ಗ್ರಾಮದಲ್ಲಿ ಕೆಲ ದಲಿತ ಕುಟುಂಬಗಳು ಪಕ್ಕದ ಹೂವಿನಹಳ್ಳಿಗೆ ತೆರಳಿ ವಾಸವಾಗಿದ್ದರು. ಹಿಂದಿನಿಂದ ದಲಿತರು ಅಮಲಿಹಾಳ ಆಂಜನೇಯ ದೇವಸ್ಥಾನಕ್ಕೆ ಪೂಜೆ ಸಲ್ಲಿಸಿಕೊಂಡು ಬರುವ ಸಂಪ್ರದಾಯ ರೂಢಿಯಲ್ಲಿತ್ತು.
ಯಾದಗಿರಿಯಲ್ಲಿ ದೇಗುಲ ಪ್ರವೇಶಕ್ಕೆ ನಿರ್ಬಂಧ
ದಲಿತರು ದೇವಸ್ಥಾನದ ಒಳಗಡೆ ಬಂದರೆ ಹುಷಾರ್ ನಿಮ್ಮ ಪರಿಣಾಮ ನೆಟ್ಟಗಿರಲ್ಲ ಎಂದು ಎಚ್ಚರಿಕೆ ಮಾತುಗಳನ್ನು ಮಹಿಳೆಯರು ಕೇಳಿಸಿಕೊಂಡಿದ್ದರು. ಪೊಲೀಸ್ ಭದ್ರತೆ ಜೊತೆ ಗುಡಿ ಪ್ರವೇಶಿಸುವುದಕ್ಕೆ ಮೇಲ್ಜಾತಿಯವರ ವಿರೋಧವಿತ್ತು ಎನ್ನಲಾಗಿದೆ. ಆದರೆ ಪೊಲೀಸ್ ಭದ್ರತೆ ಪಡೆದುಕೊಂಡು ಐದು ಜನ ದಲಿತ ಮಹಿಳೆಯರು, ಕೊನೆಗೂ ಹನುಮಾನ್ ದೇವಾಲಯ ಪ್ರವೇಶ ಮಾಡಿ ಅಚ್ಚರಿ ಮೂಡಿಸಿದ್ದಾರೆ.

ಸದ್ಯ ಗ್ರಾಮದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವೇದಮೂರ್ತಿ ಗ್ರಾಮಗಳಿಗೆ ಭೇಟಿ ನೀಡಿ, ಗ್ರಾಮಸ್ಥರ ಮನವೊಲಿಕೆಗೆ ಪ್ರಯತ್ನಿಸಿದ್ದರು. ಅದರು, ಎರಡು ಸಮುದಾಯದ ಜನ ಪಟ್ಟು ಬಿಡದ ಹಿನ್ನೆಲೆ ಪರಿಸ್ಥಿತಿ ವಿಕೋಪಕ್ಕೆ ಹೋಗುವ ಸಾಧ್ಯತೆಯಿದ್ದ ಕಾರಣ ಜಿಲ್ಲಾಡಳಿತ ಅಮಲಿಹಾಳ ಹಾಗೂ ಹೂವಿನಹಳ್ಳಿ ಎರಡೂ ಗ್ರಾಮಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದೆ ಎರಡೂ ಗ್ರಾಮಗಳಲ್ಲಿ ಪರಿಸ್ಥಿತಿ ಇನ್ನೂ ಬೂದಿಮುಚ್ಚಿದ ಕೆಂಡದಂತಿದ್ದು, ಪೊಲೀಸ್ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಹನುಮಾನ್ ದೇವಾಲಯ ಪ್ರವೇಶ ಮಾಡಿ ಮಹಿಳೆಯರ ದಿಟ್ಟತನ
ಈ ಹಿಂದೆ ಅಮಲಿಹಾಳ ಗ್ರಾಮದಲ್ಲಿದ್ದ ಕೆಲ ದಲಿತ ಕುಟುಂಬಗಳು ಪಕ್ಕದ ಹೂವಿನಹಳ್ಳಿಗೆ ತೆರಳಿ ವಾಸವಾಗಿದ್ದರು. ಹಿಂದಿನಿಂದ ದಲಿತರು ಅಮಲಿಹಾಳ ಆಂಜನೇಯ ದೇವಸ್ಥಾನಕ್ಕೆ ಪೂಜೆ ಸಲ್ಲಿಸಿಕೊಂಡು ಬರುವ ಸಂಪ್ರದಾಯ ರೂಢಿಯಲ್ಲಿತ್ತು. ಆದರೆ, ಕೇವಲ ದೇವಸ್ಥಾನದ ಹೊರಗಡೆಯೇ ಪೂಜೆ ಸಲ್ಲಿಸಿ ವಾಪಸ್ಸಾಗಬೇಕಿತ್ತು. ಆದರೆ, ಪರಿಶಿಷ್ಟ ಜಾತಿ ಮತ್ತು ಪಂಗಡದವರು ದೇವಾಲಯ ಪ್ರವೇಶಿಸುವುದಕ್ಕೆ ಹಿಂದಿನಿಂದಲೂ ಮೇಲ್ಜಾತಿಯವರ ವಿರೋಧವಿತ್ತು. ಹೀಗಾಗಿ ನಾವು ದೇವಾಲಯವನ್ನು ಪ್ರವೇಶಿಸಲು ಬಿಡುವುದಿಲ್ಲ ಎಂದು ಮೇಲ್ಜಾತಿಯವರು ಪಟ್ಟು ಹಿಡಿದರೆ, ನಾವು ದೇವಾಲಯವನ್ನು ಪ್ರವೇಶಿಸಿಯೇ ತೀರುತ್ತೆವೆ ಎಂದು ದಲಿತರು ಸವಾಲು ಹಾಕಿದರು. ಅದರಂತೆ ಪೊಲೀಸ್ ಭದ್ರತೆ ಪಡೆದುಕೊಂಡ ಐದು ಜನ ದಲಿತ ಮಹಿಳೆಯರು ಕೊನೆಗೂ ಹನುಮಾನ್ ದೇವಾಲಯ ಪ್ರವೇಶ ಮಾಡಿ ದಿಟ್ಟತನ ಮೆರೆದಿದ್ದಾರೆ.

ಎಲ್ಲರೂ ಒಂದೇ ಎಲ್ಲರೂ ಸಮಾನರು ಯಾವ ಜಾತಿ ವ್ಯವಸ್ಥೆಯು ಇಲ್ಲ ಅಂತಾ ಜನಪ್ರತಿನಿಧಿಗಳು ಡೈಲಾಗ್ ಹೊಡಿತಾರೆ. ಆದರೆ ಕೆಲವು ಕಡೆ ಮಾತ್ರ ವಿಷ ಬೀಜದಂತೆ ಜಾತಿವ್ಯವಸ್ಥೆ ಬೇರೂರಿದೆ ಯಾಕಂದ್ರೆ ಆ ಗ್ರಾಮದಲ್ಲಿ ದಲಿತರು ದೇಗುಲಕ್ಕೆ ತೆರಳಬೇಕಾದರೆ ದೊಡ್ಡ ಸಾಹಸವೇ ಮಾಡಬೇಕಾಯಿತು ಎಂದು ಸ್ಥಳೀಯರು ಪರಿಸ್ಥಿತಿ ಬಗ್ಗೆ ಹೇಳಿಕೊಂಡಿದ್ದಾರೆ.
Recommended Video
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್












Click it and Unblock the Notifications