ಕುವೆಂಪು, ನಾಡಗೀತೆಯನ್ನು ಟೀಕಿಸಿದ ಸಾಹಿತಿ ಪಾಟೀಲ ಪುಟ್ಟಪ್ಪ
ಯಾದಗಿರಿ, ನವೆಂಬರ್ 20 : ಸಾಹಿತಿ ಪಾಟೀಲ ಪುಟ್ಟಪ್ಪ ಅವರು ರಾಷ್ಟ್ರಕವಿ ಕುವೆಂಪು ಅವರ ಬಗ್ಗೆ ಹಾಗೂ ಅವರು ರಚಿಸಿದ ನಾಡಗೀತೆಯ ಬಗ್ಗೆ ಅಸಮಧಾನ ವ್ಯಕ್ತಪಡಿಸಿದ್ದಾರೆ.
ಜಿಲ್ಲೆಯಲ್ಲಿ ಆಯೋಜಿಸಲಾಗಿದ್ದ "ಕನ್ನಡ ನುಡಿ ಸಂಭ್ರಮ' ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು "ಕುವೆಂಪು ಅವರು ಕೇವಲ ಮೈಸೂರಿಗೆ ಮಾತ್ರ ಸೀಮಿತವಾಗಿದ್ದರೂ ಅವರೆಂದೂ ಕರ್ನಾಟಕವನ್ನು ಸುತ್ತಿ ನೋಡಲೇ ಇಲ್ಲ' ಎಂದು ಕುವೆಂಪು ಅವರ ವಿರುದ್ಧ ಅಸಮಾಧಾನ ಹೊರಹಾಕಿದರು.

ನಾಡಗೀತೆಯ ಬಗ್ಗೆಯೂ ಬೇಸರ ವ್ಯಕ್ತಡಿಸಿದ ಅವರು, ಮೈಸೂರು ಸಂಸ್ಥಾನ ಸ್ಥಾಪನೆಯಾಗಿ 23 ವರ್ಷಗಳ ಕಾಲ ಹುಯಿಲಗೋಳ ನಾರಾಯಣರಾಯರ "ಉದಯವಾಯಿತು ನಮ್ಮ ಚೆಲುವ ಕನ್ನಡ ನಾಡು' ಹಾಡೇ ನಾಡ ಗೀತೆಯಾಗಿತ್ತು ಅದನ್ನೇ ನಾಡಗೀತೆಯಾಗಿ ಮುಂದುವರೆಸಬಹುದಿತ್ತು' ಎಂದರು.
ಕಾರ್ಯಕ್ರಮದ ಪ್ರಾರಂಭದಲ್ಲಿಯೂ ಅವರು ವಂದೆ ಮಾತರಂ ಗೀತೆ ಹಾಡಿದರೆ ಮಾತ್ರ ಕಾರ್ಯಕ್ರಮ ಉದ್ಘಾಟನೆ ಮಾಡುವುದಾಗಿ ಪಟ್ಟು ಹಿಡಿದರು. ಆಗ ಅಲ್ಲಿಯೇ ಇದ್ದ ಕಲಾವಿದರೊಬ್ಬರು ವಂದೇ ಮಾತರಂ ಗೀತೆಯನ್ನು ಕೊಳಲಿನಲ್ಲಿ ನುಡಿಸಿದ ನಂತರವಷ್ಟೆ ಪಾಟೀಲ ಪುಟ್ಟಪ್ಪ ಅವರು ಕಾರ್ಯಕ್ರಮ ಉದ್ಘಾಟನೆ ಮಾಡಿದರು.
ಕಾರ್ಯಕ್ರಮದ ಆಯೋಜಕರು ಪಾಪು ಅವರಿಗೆ ಮೈಸೂರು ಪೇಟ ತೊಡಿಸಲು ಮುಂದಾದಾಗ ಆಯೋಜಕರ ಮೇಲೆ ಕೋಪಗೊಂಡ ಅವರು, 'ನಾನು ಸದಾ ಮೈಸೂರು ಅರಸರ ವಿರೋಧಿ ನನಗೆ ಮೈಸೂರು ಪೇಟ ತೊಡಿಸಬೇಡಿ' ಎಂದರು.
'ಮೈಸೂರು ಅರಸರ ಪ್ರಾಂತ್ಯವಾರು ಆಡಳಿತಾವಧಿಯಲ್ಲಿ ಉತ್ತರ ಹಾಗೂ ಹೈದರಾಬಾದ್ ಕರ್ನಾಟಕಕ್ಕೆ ಅನ್ಯಾಯವಾಗಿದೆ. ನಾನೆಂದೂ ಮೈಸೂರಿನ ಅರಸರ ಆಳ್ವಿಕೆ ಒಪ್ಪುವುದಿಲ್ಲ' ಎಂದು ಆವೇಷಭರಿತವಾಗಿ ಮಾತನಾಡಿದರು.
ಉತ್ತರ ಕರ್ನಾಟಕ ಭಾಗಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆ ಮಾತನಾಡಿದ ಪಾಪು ಅವರು 'ದೇಶ ಸ್ವತಂತ್ರಗೊಂಡಾಗ ಕನ್ನಡ ರಾಜ್ಯಕ್ಕೆ 'ಮೈಸೂರು ರಾಜ್ಯ' ಎಂದು ನಾಮಕರಣ ಮಾಡಲಾಯಿತು. ಬೆಂಗಳೂರು ರಾಜಧಾನಿ ಮಾಡುತ್ತೇವೆ ಎಂದಾಗ ಅದಕ್ಕೂ ಒಪ್ಪಿದೆವು. ಮೈಸೂರು ಸಂಸ್ಥಾನದ ಗವರ್ನರ್ ಅವರನ್ನು ಕರ್ನಾಟಕ ರಾಜ್ಯದ ರಾಜ್ಯಪಾಲರಾಗಿಸಿದಾಗಲೂ ಒಪ್ಪಿದೆವು. ಎಲ್ಲವನ್ನೂ ಒಪ್ಪಿಕೊಂಡು ಬಂದಿರುವ ನಮಗೆ, ಏನು ಆದ್ಯತೆ ಸಿಕ್ಕಿದೆ? ಎಂದು ಪ್ರಶ್ನಿಸಿದರು.
ಕರ್ನಾಟಕ ರಾಜ್ಯ ಉದಯವಾಗಿ 61ವರ್ಷ ಗತಿಸಿದರೂ ಈಗಲೂ ಈ ಪ್ರದೇಶಗಳು ಕನಿಷ್ಠ ಸೌಲಭ್ಯಕ್ಕಾಗಿ ಹಾತೊರೆಯುತ್ತಿವೆ. ಹೈದರಾಬಾದ್, ಉತ್ತರ ಕರ್ನಾಟಕ ಅಭಿವೃದ್ಧಿಗೆ ಮೈಸೂರು ಅರಸರ ಮಾದರಿಯಲ್ಲಿಯೇ ಸರ್ಕಾರ ಆಳುವವರು ಮಲತಾಯಿ ಧೋರಣೆ ಅನುಸರಿಸುತ್ತಿದ್ದಾರೆ' ಎಂದು ಆರೋಪಿಸಿದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications