ಬಿಕೆ ಹರಿಪ್ರಸಾದ್ ಅವರನ್ನೇ ಮುಂದಿನ ಸಿಎಂ ಮಾಡಿ- ಪ್ರಣವಾನಂದಶ್ರೀ ಒತ್ತಾಯ
ಯಾದಗಿರಿ ಜೂನ್ 30: ರಾಜ್ಯದಲ್ಲಿ ಸಿಎಂ ಬದಲಾವಣೆಯಾಗಬೇಕು ಎನ್ನುವ ವಿಚಾರ ಮತ್ತೆ ಚಿಗುರೊಡೆದಿದೆ. ಸಿಎಂ ಅಥವಾ ಡಿಸಿಎಂ ಬದಲಾವಣೆಯಾದರೆ ತಮ್ಮ ಸಮುದಾಯದವರಿಗೇ ಸ್ಥಾನ ನೀಡಬೇಕು ಎಂದು ಪ್ರಣವಾನಂದಶ್ರೀ ಒತ್ತಾಯಿಸಿದ್ದಾರೆ.
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಬೇಕೆನ್ನುವ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಜಗದ್ಗುರು ಚಂದ್ರಶೇಖರನಾಥ ಸ್ವಾಮೀಜಿ ಅವರ ಒತ್ತಾಯವಾದರೆ, ಮತ್ತೊಂದೆಡೆ ಬಿಕೆ ಹರಿಪ್ರಸಾದ್ ಅವರನ್ನೇ ಸಿಎಂ ಅಥವಾ ಡಿಸಿಎಂ ಎಂದು ಘೋಷಿಸುವಂತೆ ಪ್ರಣವಾನಂದಶ್ರೀ ಒತ್ತಾಯಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಣವಾನಂದ ಸ್ವಾಮೀಜಿ ಅವರು, ಇಡೀ ಹಿಂದುಳಿದ ಸಮಾಜ ಬಿಕೆ ಹರಿಪ್ರಸಾದ ಅವರ ಹಿಂದೆ ಇದೆ. ನಾವು ಹರಿಪ್ರಸಾದ್ ಅವರ ಪರವಾಗಿ ಗಟ್ಟಿ ಧ್ವನಿಯಲ್ಲಿ ಹೇಳುತ್ತಿದ್ದೇನೆ. ಸಿಎಂ ಡಿಸಿಎಂ ಸ್ಥಾನ ಬದಲಾದರೆ ಬಿಕೆ ಹರಿಪ್ರಸಾದ್ ಅವರಿಗೆ ಸಿಎಂ ಅಥವಾ ಡಿಸಿಎಂ ಸ್ಥಾನ ನೀಡಬೇಕು. ಅಲ್ಲದೇ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಮಾಡುವುದಾದ್ರೂ ಹರಿಪ್ರಸಾದ್ ಅವರಿಗೆ ನೀಡಬೇಕು ಎಂದರು.
ಕಾಂಗ್ರೆಸ್ ಪಕ್ಷದಲ್ಲಿ ಹರಿಪ್ರಸಾದ್ ಅವರು ನಿಷ್ಠಾವಂತರು. ಮೂಲತ: ಕಾಂಗ್ರೆಸ್ನವರು ಯಾವುದೇ ಪಕ್ಷದಿಂದ ವಲಸೆ ಬಂದ ನಾಯಕರಲ್ಲ. ಇಂತಹ ನಿಷ್ಠಾವಂತರಿಗೆ ಸ್ಥಾನಮಾನ ನೀಡಬೇಕು ಎಂದು ಪ್ರಣವಾನಂದಶ್ರೀ ಹೇಳಿದರು.
ಪ್ರಣವಾನಂದ ಸ್ವಾಮೀಜಿ, 'ಚಂದ್ರಶೇಖರ ಶ್ರೀಗಳು ಹೇಳಿದಾಗ ಎಲ್ಲರೂ ಸ್ವಾಗತಿಸಿದರು. ಡಿ.ಕೆ.ಸುರೇಶ್, ಬಾಲಕೃಷ್ಣ, ಚಲುವರಾಯಸ್ವಾಮಿ ಸ್ವಾಗತಿಸಿದ್ರು. ಒಂದು ಕಡೆ ಶ್ರೀಗಳ ಹೇಳಿಕೆಯನ್ನ ಸ್ವಾಗತ ಮಾಡೋದು. ಮತ್ತೊಂದು ಕಡೆ ರಾಜಕೀಯಕ್ಕೆ ಬರಬೇಡ ಎಂದು ಹೇಳುವುದು. ಇದು ಡಿ.ಕೆ.ಶಿವಕುಮಾರ ಅವರ ರಾಜಕೀಯ ಗಿಮಿಕ್. ನಮಗೆ ನೋವಾಗಿದಕ್ಕೆ ನಾವು ಹೇಳ್ತಿದ್ದೇವೆ. ನಮಗೆ ಯಾರು ಡಿಸಿಎಂ ಸ್ಥಾನ ಕೊಟ್ಟಿಲ್ಲ.ಈಗಾಗಲೇ ಡಿ.ಕೆ.ಶಿವಕುಮಾರ್ ಉಪಮುಖ್ಯಮಂತ್ರಿ ಇದ್ದಾರೆ. ಜೊತೆಗೆ ಒಕ್ಕಲಿಗ ಸಮುದಾಯದ ಸಚಿವರು ಇದ್ದಾರೆ. ಚಂದ್ರಶೇಖರಶ್ರೀ ಅವರ ಸಮುದಾಯದ ಬಗ್ಗೆ ಮಾತಾಡಿದ್ದಾರೆ. ಆದ್ರೆ ಡಿ.ಕೆ.ಶಿವಕುಮಾರ್ರದ್ದು ರಾಜಕೀಯ ಗಿಮಿಕ್ನ ಭಾಗ' ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಮಗೆ ನೋವಾಗಿದ್ದಕ್ಕೆ ನಾವು ಹೇಳ್ತಿದ್ದೇವೆ. ನಮ್ಮ ಸಮುದಾಯಕ್ಕೆ ಯಾರೂ ಡಿಸಿಎಂ ಸ್ಥಾನ ಕೊಟ್ಟಿಲ್ಲ, ಅದೇ ಒಕ್ಕಲಿಗ ಸಮುದಾಯದಲ್ಲಿ ಈಗಾಗಲೇ ಡಿಸಿಎಂ ಆಗಿ ಡಿಕೆ ಶಿವಕುಮಾರ ಇದ್ದಾರೆ, ಸಚಿವರೂ ಇದ್ದಾರೆ. ಇಷ್ಟಾಗಿಯೂ ಚಂದ್ರಶೇಖರ್ ಸ್ವಾಮೀಜಿಯವರು ಅವರ ಸಮುದಾಯದ ಬಗ್ಗೆ ಮಾತನಾಡಿದ್ದಾರೆ. ಡಿಕೆ ಶಿವಕುಮಾರ್ಗೆ ಮುಖ್ಯಮಂತ್ರಿ ಆಗಲೆಂದು ಆಗ್ರಹಿಸಿದ್ದಾರೆ. ಆದರೆ ನಾವು ನಮ್ಮ ಸಮುದಾಯದವರು ಡಿಸಿಎಂ ಆಗಬೇಕೆಂದು ಆಗ್ರಹಿಸಿದರೆ ತಪ್ಪೇನು? ಎಂದು ಖಾರವಾಗಿ ಮಾತನಾಡಿದರು.
ಇತ್ತೀಚೆಗೆ ರಾಜ್ಯದಲ್ಲಿ ಸಿಎಂ ಬದಲಾವಣೆ ಗಾಳಿ ಜೋರಾಗಿ ಬೀಸುತ್ತಿದೆ. ಲೋಕಸಭಾ ಚುನಾವಣೆ ಬಳಿಕ ಸಿಎಂ ಸ್ಥಾನವನ್ನು ಸಿದ್ದರಾಮಯ್ಯ ಅವರಿಗೆ ಹಾಗೂ ಡಿಸಿಎಂ ಸ್ಥಾನವನ್ನು ಡಿಕೆ ಶಿವಕುಮಾರ್ ಅವರಿಗೆ ನೀಡಲಾಗಿದೆ. ಈಗ ಸಿಎಂ ಬದಲಾವಣೆ ಮಾಡಬೇಕೋ ಬೇಡವೋ ಹೈಕಮಾಂಡ್ ಚರ್ಚೆ ಮಾಡಲಿದೆ. ಒಂದು ವೇಳೆ ಸಿಎಂ ಬದಲಾವಣೆ ಮಾಡಿದ್ರೆ ಮುಂದಿನ ಸಿಎಂ ಯಾರು ಎಂಬ ಪ್ರಶ್ನೆ ಎದುರಾಗಿದೆ. ಆದರೆ ಈ ಬಗ್ಗೆ ಹೈಕಮಾಂಡ್ ಪ್ರಸ್ತಾಪ ಮಾಡಿಲ್ಲ.
ಅದಾಗ್ಯೂ ಒಂದೆಡೆ ಲಿಂಗಾಯತರೇ ಸಿಎಂ ಆಗಬೇಕು ಎಂಬ ಕೂಗು ಎದ್ದಿದೆ. ಇತ್ತ ದಲಿತರಿಗೆ ಪ್ರಾತಿನಿಧ್ಯ ನೀಡಬೇಕು. ಮತ್ತೊಂದೆಡೆ ದಲಿತರಿಗೆ ಸಿಎಂ ಅವಕಾಶ ನೀಡಬೇಕು ಎಂಬ ಒತ್ತಾಯವೂ ಕೇಳಿ ಬಂದಿದೆ. ಹೀಗಾಗಿ ಮುಂದಿನ ಸಿಎಂ ಬಗ್ಗೆ ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications