ಯಾದಗಿರಿಯಲ್ಲಿ ಹೊಸ ಬಾಂಬ್ ಸಿಡಿಸಿದ ಮಾಲೀಕಯ್ಯ ಗುತ್ತೇದಾರ್
ಯಾದಗಿರಿ, ಸೆಪ್ಟೆಂಬರ್ 19: 'ರಾಜ್ಯ ರಾಜಕಾರಣದಲ್ಲಿ ಇದೇ ಪರಿಸ್ಥಿತಿ ಮುಂದುವರಿದರೆ ಕಾಂಗ್ರೆಸ್ ಮತ್ತು ಜೆಡಿಎಸ್ ನಿಂದ ಬಿಜೆಪಿಗೆ ಸಾಕಷ್ಟು ಜನ ಬರುವವರಿದ್ದಾರೆ' ಎಂದು ಹೊಸ ಬಾಂಬ್ ಸಿಡಿಸಿದ್ದಾರೆ ಬಿಜೆಪಿ ಮುಖಂಡ ಮಾಲೀಕಯ್ಯ ಗುತ್ತೇದಾರ್.
ಯಾದಗಿರಿಯಲ್ಲಿ ರಾಜ್ಯ ರಾಜಕೀಯ ಬೆಳವಣಿಗೆಯ ಕುರಿತು ಪತ್ರಕರ್ತರೊಂದಿಗೆ ಮಾತನಾಡಿದ ಗುತ್ತೇದಾರ್, 'ಮಲ್ಲಿಕಾರ್ಜುನ ಖರ್ಗೆ ಅವರಿಂದ ಕಾಂಗ್ರೆಸ್ಸಿನ ಹಲವು ನಾಯಕರಿಗೆ ಮೋಸವಾಗಿದೆ. ಅವರ ಬಗ್ಗೆ ನಮಗೆಲ್ಲ ಸಾಕಷ್ಟು ಗೌರವವಿತ್ತು. ಅವರನ್ನು ನಾವೆಲ್ಲ ಎರಡನೇ ಅಂಬೇಡ್ಕರ್ ಎಂದೇ ಕರೆಯುತ್ತಿದ್ದೆವು. ಆದರೆ ಅವರು ಕುಟುಂಬದ ಹಿರಿ ಮನುಷ್ಯರಾಗಿ, ನಮ್ಮಂಥ ಕಿರಿಯರನ್ನೆಲ್ಲ ಸಮಾನವಾಗಿ ನೋಡುವ ಬದಲು ತಮಗೆ ಬೇಕಾದವರನ್ನು ಮಾತ್ರ ಬೆಳೆಸಿದರು' ಎಂದು ದೂರಿದರು.
"ಮಲ್ಲಿಕಾರ್ಜುನ ಖರ್ಗೆ ಅವರು ಧೃತರಾಷ್ಟ್ರ. ಪ್ರಿಯಾಂಕ್ ಖರ್ಗೆ ದುರ್ಯೋಧನ. ತಮ್ಮ ಮಗನಿಗೆ ಒಳ್ಳೆಯ ಹುದ್ದೆ ಸಿಗಬೇಕು ಎಂಬ ಕಾರಣಕ್ಕೆ ಹಲವು ಉತ್ತಮ ನಾಯಕರನ್ನು ಅವರು ಮೂಲೆಗುಂಪು ಮಾಡಿದರು" ಎಂದು ಗುತ್ತೇದಾರ್ ಖರ್ಗೆ ಬಗೆಗಿನ ತಮ್ಮ ಅಸಮಾಧಾನವನ್ನು ಹೊರಹಾಕಿದರು.

ಮೇ ತಿಂಗಳಿನಲ್ಲಿ ನಡೆದ ಕರ್ನಾಟಕ ವಿಧಾನಸಭೆ ಚುನಾವಣೆಯ ಸಮಯದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರಿದ್ದ ಮಾಲೀಕಯ್ಯ ಗುತ್ತೇದಾರ್ ಅವರಿಗೆ ಕಲಬುರಗಿಯ ಅಫ್ಜಲ್ಪುರ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ನೀಡಿತ್ತು. ಆದರೆ ಅವರು ಸುಮಾರು 10 ಸಾವಿರ ಮತಗಳ ಅಂತರದಿದ ಕಾಂಗ್ರೆಸ್ ನ ಎಂ ವೈ ಪಾಟೀಲ ಅವರ ವಿರುದ್ಧ ಸೋಲುಂಡಿದ್ದರು. ಸಾಕಷ್ಟು ನಾಯಕರು ಬಿಜೆಪಿಗೆ ಬರ್ತಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications