ಟಿಪ್ಪು ವೃತ್ತಕ್ಕೆ ಸಾವರ್ಕರ್ ಹೆಸರು ಮರುನಾಮಕರಣ ವಿರೋಧಿಸಿ ಪ್ರತಿಭಟನೆ
ಯಾದಗಿರಿ, ನ. 29: ಟಿಪ್ಪು ವೃತ್ತವನ್ನು ಸಾವರ್ಕರ್ ವೃತ್ತ ಎಂದು ಮರುನಾಮಕರಣ ಮಾಡುವ ನಗರಸಭೆಯ ನಿರ್ಧಾರವನ್ನು ವಿರೋಧಿಸಿ ಹಜರತ್ ಟಿಪ್ಪು ಸುಲ್ತಾನ್ ಸಂಯುಕ್ತ ರಂಗ ಮತ್ತು ಇತರ ಮುಸ್ಲಿಂ ಸಂಘಟನೆಗಳು ಯಾದಗಿರಿ ಜಿಲ್ಲೆಯಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದ್ದಾರೆ.
ಪ್ರತಿಭಟನಾಕಾರರು ತಮ್ಮ ಕೈಗಳಿಗೆ ಕಪ್ಪು ಪಟ್ಟಿಗಳನ್ನು ಕಟ್ಟಿಕೊಂಡು ನಗರಸಭೆ ಅಧ್ಯಕ್ಷರ ವಿರುದ್ಧ ಘೋಷಣೆಗಳನ್ನು ಕೂಗಿ ನಿರ್ಧಾರದ ಬಗ್ಗೆ ತಮ್ಮ ಆಕ್ರೋಶ ಹೊರಹಾಕಿದ್ದಾರೆ. ನಗರಸಭೆಯ ಕಚೇರಿ ಎದುರು ಪ್ರತಿಭಟನೆ ನಡೆಸಲಾಗಿದೆ.
ಆದರೆ, ಯಾದಗಿರಿ ನಗರಸಭೆ ಅಧ್ಯಕ್ಷ ಸುರೇಶ ಅಂಬಿಗರ ವೃತ್ತಕ್ಕೆ ಟಿಪ್ಪು ವೃತ್ತ ಎಂದು ನಾಮಕರಣ ಮಾಡಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ. ಬಲಪಂಥೀಯ ಸಂಘಟನೆಗಳು ಸಾವರ್ಕರ್ ವೃತ್ತ ಎಂದು ಮರುನಾಮಕರಣ ಮಾಡಲು ಒತ್ತಾಯಿಸಿದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

"ಕೆಲವು ತಿಂಗಳ ಹಿಂದೆ ಹಿಂದೂ ಸಂಘಟನೆಗಳು ವೃತ್ತಕ್ಕೆ ವೀರ್ ಸಾವರ್ಕರ್ ಸರ್ಕಲ್ ಎಂದು ಹೆಸರಿಸುವಂತೆ ಮನವಿ ಮಾಡಿತ್ತು. 2010ರಲ್ಲಿ ಟಿಪ್ಪು ವೃತ್ತ ಎಂದು ನಾಮಕರಣ ಮಾಡಲು ಸರ್ಕಾರದಿಂದ ಅಧಿಕೃತವಾಗಿ ಆದೇಶ ಬಂದಿರಲಿಲ್ಲ. ವೃತ್ತಕ್ಕೆ ಟಿಪ್ಪು ಹೆಸರು ಇಡಲು ಯಾವುದೇ ಸರ್ಕಾರಿ ಆದೇಶ ಬಂದಿರಲಿಲ್ಲ. ಈಗ ವೀರ್ ಸಾವರ್ಕರ್ ಎಂದು ಮರುನಾಮಕರಣ ಮಾಡಿ ರಾಜ್ಯ ಸರ್ಕಾರಕ್ಕೆ ಅಧಿಕೃತ ಮನವಿ ಕಳುಹಿಸಿದ್ದೇವೆ" ಎಂದು ಸುರೇಶ ಅಂಬಿಗರ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಇನ್ನು, ವೃತ್ತಕ್ಕೆ ಅಧಿಕೃತವಾಗಿ ಟಿಪ್ಪು ಸರ್ಕಲ್ ಎಂದು ಹೆಸರಿಸಲಾಗಿದೆ ಎಂದು ಸಾಬೀತುಪಡಿಸಲು ಸರಿಯಾದ ದಾಖಲೆಗಳಿವೆ ಎಂದು ಪ್ರತಿಭಟನಕಾರರಲ್ಲಿ ಒಬ್ಬರಾದ ವಾಹಿದ್ ಮಿಯಾ ಸುದ್ದಿಗಾರರಿಗೆ ತಿಳಿಸಿದ್ದಾರೆ. ಜೊತೆಗೆ ನಗರಸಭೆ ಪ್ರಾದೇಶಿಕವಾಗಿ ಕೋಮು ಸೌಹಾರ್ದತೆ ಹಾಳು ಮಾಡಲು ಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ.
ಈ ವೃತ್ತಕ್ಕೆ ಟಿಪ್ಪು ಸರ್ಕಲ್ ಎಂದು ಹೆಸರಿಡಲಾಗಿತ್ತು. ಆದರೆ ಈಗ ಬಿಜೆಪಿ ಸರ್ಕಾರದ ಅಡಿಯಲ್ಲಿ ಇದನ್ನು ವೀರ್ ಸಾವರ್ಕರ್ ಎಂದು ಮರುನಾಮಕರಣ ಮಾಡಲು ಹೊರಟಿದ್ದಾರೆ. ಇದು ಕಾನೂನಿಗೆ ವಿರುದ್ಧವಾಗಿದೆ. ನಗರಸಭೆ ಈ ನಿರ್ಧಾರವನ್ನು ಹಿಂಪಡೆಯದಿದ್ದರೆ ದೊಡ್ಡ ಮಟ್ಟದ ಹೋರಾಟಕ್ಕೆ ಮುಂದಾಗುತ್ತೇವೆ ಎಂದು ಎಂದು ವಾಹಿದ್ ಮಿಯಾ ಹೇಳಿದ್ದಾರೆ.
-
ಮಾರ್ಚ್ 19ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಔಷಧಿ ಪೂರೈಸುವ ಕೆಸ್ಎಂಸಿಎಲ್ಗೆ ಐಎಎಸ್ ಅಧಿಕಾರಿ ಮುಖ್ಯಸ್ಥ, ಇ-ಔಷಧಿ ಸಾಫ್ಟವೇರ್ ಜಾರಿ: ದಿನೇಶ್ ಗುಂಡೂರಾವ್ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು












Click it and Unblock the Notifications