ಯಾದಗಿರಿ: ಬಂಕ್ ನಲ್ಲಿ ಪೆಟ್ರೋಲ್, ಡೀಸೆಲ್ ಬದಲು ನೀರು; ಗ್ರಾಹಕರ ಆಕ್ರೋಶ
ಯಾದಗಿರಿ, ಸೆಪ್ಟೆಂಬರ್ ೨೯: ಬಂಕ್ ನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬದಲು ನೀರು ಹಾಕುತ್ತಿದ್ದು, ಪೆಟ್ರೋಲ್ ಹಾಕಿಸಿಕೊಂಡ ವಾಹನಗಳ ಇಂಜಿನ್ ಬ್ಲಾಕ್ ಆಗಿ ಕೆಟ್ಟು ನಿಂತ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ.
ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರದಲ್ಲಿ ಈ ಅವಾಂತರ ನಡೆದಿದ್ದು, ಕಳೆದ ಎರಡು ದಿನಗಳಿಂದ ನಾರಾಯಣಪುರದಲ್ಲಿರುವ ಇಂಡಿಯನ್ ಪೆಟ್ರೋಲ್ ಬಂಕ್ ನಲ್ಲಿ ಇಂಧನ ಬದಲಿಗೆ ನೀರು ಹಾಕಲಾಗುತ್ತಿದೆ ಎಂಬ ಆರೋಪ ಕೇಳಿ ಬರುತ್ತಿದ್ದವು.
ಸೋಮವಾರ ರಾತ್ರಿ ನಾರಾಯಣಪುರ ಗ್ರಾಮದ ಹನುಮಂತ ಎಂಬುವವರು ತಮ್ಮ ಟಾಟಾ ಏಸ್ ಗಾಡಿಗೆ ರಾತ್ರಿ ಡೀಸೆಲ್ ಹಾಕಿಸಿದ್ದರು, ಆದರೆ ವಾಹನ ಸ್ವಲ್ಪ ದೂರ ತೆರಳಿ ಇಂಜಿನ್ ಬ್ಲಾಕ್ ಆಗಿ ವಾಹನ ರಿಪೇರಿಗೆ ಬಂದಿತ್ತು.

ಕೆಲ ಹೊತ್ತಿನ ಬಳಿಕ ಅದೇ ಬಂಕ್ ನಲ್ಲಿ ಡೀಸೆಲ್ ಹಾಕಿಸಿದ ಹನುಮಂತನ ಸ್ನೇಹಿತನ ಗಾಡಿಗೂ ಸಹ ಇದೆ ಸಮಸ್ಯೆ ಎದುರಾಗಿದೆ. ಹೀಗಾಗಿ ಹನುಮಂತ ಮತ್ತು ಆತನ ಸ್ನೇಹಿತ ಇಂದು ಬೆಳಗ್ಗೆ ಬಂಕ್ ಗೆ ತೆರಳಿ ಡೀಸೆಲ್ ಮತ್ತು ಪೆಟ್ರೋಲ್ ಪರೀಕ್ಷೆ ಮಾಡಿಸಿದಾಗ, ಅದರಲ್ಲಿ ನೀರು ಬೆರೆತ ಸತ್ಯ ಬಹಿರಂಗವಾಗಿದೆ.
Recommended Video
ಬಂಕ್ ನಲ್ಲಿ ಡೀಸೆಲ್ ಮತ್ತು ಪೆಟ್ರೋಲ್ ಹಾಕಿಸಿಕೊಂಡ ಗ್ರಾಹಕರು, ಮಾಲೀಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೆಟ್ರೋಲ್ ಮತ್ತು ಡೀಸೆಲ್ ಟ್ಯಾಂಕ್ ಗೆ ಮಳೆಯ ನೀರು ಬೆರೆತ ಹಿನ್ನೆಲೆಯಲ್ಲಿ ಇಂಧನದೊಳಗೆ ನೀರು ಸೇರಿಕೊಂಡಿದೆ ಎಂಬ ನೆಪ ಹೇಳಿ ಬಂಕ್ ಮಾಲೀಕರು ತಮ್ಮ ತಪ್ಪಿನಿಂದ ತಪ್ಪಿಸಿಕೊಳ್ಳಲು ಮುಂದಾಗುತ್ತಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್












Click it and Unblock the Notifications