Shorapur Assembly By Elections 2024: ಸುರಪುರ ವಿಧಾನಸಭೆ ಉಪಚುನಾವಣೆ- ಮತಭೇಟೆಗೆ ಕಮಲ ಕೈ ಕಸರತ್ತು
ಸುರಪುರ ಮಾರ್ಚ್ 24: ಸುರಪುರ ವಿಧಾನಸಭೆ ಉಪಚುನಾವಣೆ ಗರಿಗೆದರಿದೆ. ಗೆಲುವಿನ ಲೆಕ್ಕಾಚಾರದಲ್ಲಿ ಪಕ್ಷದ ನಾಯಕರು, ಮುಖಂಡರು ಸರಣಿ ಸಭೆಗಳು ನಡೆಯುತ್ತಿವೆ. ಮತದಾರರನ್ನು ಸೆಳೆಯಲು ಬಿಜೆಪಿ, ಕಾಂಗ್ರೆಸ್ ನಾಯಕರ ಕಸರತ್ತು ಶುರುವಾಗಿದೆ.
ಶಾಸಕರಾಗಿದ್ದ, ಹಿರಿಯ ಕಾಂಗ್ರೆಸ್ಸಿಗ ರಾಜಾ ವೆಂಕಟಪ್ಪನಾಯಕ ಅವರ ಅಕಾಲಿಕ ನಿಧನದಿಂದಾಗಿ ತೆರವಾಗಿರುವ ಸುರಪುರಕ್ಕೆ ಚುನಾವಣೆ ನಡೆಯಲಿದೆ. ಎಸ್ಟಿ ಮೀಸಲು ಸುರಪುರ ವಿಧಾನಸಭಾ ಕ್ಷೇತ್ರದಲ್ಲಿ ಮೇ 7ರಂದು ಚುನಾವಣೆ ಘೋಷಿಸಿಲಾಗಿದೆ. ಶಾಸಕರಾಗಿದ್ದ ರಾಜಾ ವೆಂಕಟಪ್ಪ ನಾಯಕ್ ಅವರ ಪುತ್ರ ರಾಜಾ ವೇಣುಗೋಪಾಲ ನಾಯಕ ಅವರಿಗೆ ಕಾಂಗ್ರೆಸ್ ಪಕ್ಷ ಅಧಿಕೃತ ಅಭ್ಯರ್ಥಿಯೆಂದು ಘೋಷಿಸಿದೆ.

ಇನ್ನು ಭಾರತೀಯ ಜನತಾ ಪಕ್ಷದಿಂದ ಮಾಜಿ ಸಚಿವ ನರಸಿಂಹನಾಯಕ (ರಾಜೂಗೌಡ) ಅವರಿಗೇ ಟಿಕೆಟ್ ಸಹಜ ಎನ್ನಲಾಗಿದೆ. ಹೀಗಾಗಿ ಲೋಕಸಭಾ ಚುನಾವಣೆಯ ಕಾಲದಲ್ಲೇ ವಿಧಾನಸಭೆ ಉಪ ಚುನಾವಣೆಯೂ ಬಂದೆರಗಿರುವುದು ಚುನಾವಣಾ ವಾತಾವರಣವನ್ನು ಮತ್ತಷ್ಟೂ ಕಾವೇರಿಸಿದೆ.
ಮತದಾರರ ಮನೆ-ಮನೆ ಗೆಲ್ಲಲು ನಾಯಕರ ಕೆಸರತ್ತು: ಮತಕ್ಷೇತ್ರ ವ್ಯಾಪ್ತಿಯಲ್ಲಿ ಮತದಾರರನ್ನು ತಮ್ಮತ್ತ ಒಲಿಸಿಕೊಳ್ಳಲು ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಮತದಾರರ ಮನೆ ಬಾಗಿಲಿಗೆ ಎಡತಾಕುತ್ತಿದ್ದಾರೆ. ತಾವು ಮಾಡಿರುವ ಮತ್ತು ಮುಂದೆ ಮಾಡಲಿರುವ ಕನಸಿನ ಯೋಜನೆಗಳನ್ನು ಜನರ ಮುಂದೆಯಿಡುತ್ತ ಮನವೊಲಿಸುವ ಕಾರ್ಯ ಸದ್ದಿಲ್ಲದೆ ನಡೆಯುತ್ತಿದೆ.
ಕಾಂಗ್ರೆಸ್: ಕೆಲದಿನಗಳಿಂದ ಕಾಂಗ್ರೆಸ್ ಕಚೇರಿಯಲ್ಲಿ ಮತ್ತು ಪ್ರಮುಖ ಗ್ರಾಮಗಳಲ್ಲಿ ಸಭೆಗಳಲ್ಲಿ ನಡೆಯುತ್ತಿದೆ. ಅಲ್ಲದೆ ಇಫ್ತಾರಕೂಟಗಳಲ್ಲಿ ನಾಯಕರುಗಳು ಕಾಣಿಸಿಕೊಂಡಿದ್ದಾರೆ. ಮದುವೆ, ಗೃಹಪ್ರವೇಶ, ಜಾತ್ರೆ ಸೇರಿದಂತೆ ವಿವಿಧ ಸಮಾರಂಭಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ.
ಬಿಜೆಪಿ ಅಭ್ಯರ್ಥಿ ಯಾರು?
ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ರಾಜೂಗೌಡರಿಗೇ ಬಿಜೆಪಿ ಟಿಕೆಟ್ ಎಂಬುದಾಗಿ ಘೋಷಿಸಿದ್ದು, ಅಧಿಕೃತ ಮುದ್ರೆ ಒತ್ತುವುದು ಬಾಕಿಯಿದ್ದು, ಭಾನುವಾರ ಹೆಸರು ಘೋಷಣೆ ಸಾಧ್ಯತೆಯಿದೆ ಎನ್ನಲಾಗಿದೆ. ಬಿಜೆಪಿ ನಾಯಕರು ಹುಣಸಗಿ ಮತ್ತು ಸುರಪುರದಲ್ಲಿ ಮುಖಂಡರು, ನಾಯಕರ ಸಭೆಗಳು ಮೇಲಿಂದ ಮೇಲೆ ನಡೆಯುತ್ತಿವೆ. ಬೂತ್ ಮಟ್ಟದ ಏಜಂಟರ್ ಸಭೆ, ಕಾರ್ಯಕರ್ತರ ಸಭೆಗಳು ಜರಗುತ್ತಿವೆ.
ಬಿಜೆಪಿ ನಾಯಕರು 15 ದಿನಗಳಿಂದ ಸಕ್ರೀಯವಾಗಿ ತೊಡಗಿಕೊಂಡ ಸಮಾರಂಭಗಳಲ್ಲಿ ಪಾಲ್ಗೊಂಡು ಕಾರ್ಯಕರ್ತರನ್ನು ತಮ್ಮತ್ತ ಸೆಳೆಯುತ್ತಿದ್ದಾರೆ. ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬಿಜೆಪಿ ಮತ್ತು ತಾವು ಮಾಡಿರುವ ಸಾಧನೆಗಳನ್ನು ಮತದಾರರಿಗೆ ಮನವರಿಗೆ ಮಾಡಿಕೊಡುತ್ತಿದ್ದಾರೆ.
ಇನ್ನು ತಂದೆ, ಶಾಸಕರಾದ ವೆಂಕಟಪ್ಪ ನಾಯಕರು ಅಕಾಲಿಕ ಮರಣ ಹೊಂದುತ್ತಾರೆಂದು ಯಾರು ಭಾವಿಸಿರಲಿಲ್ಲ. ಇದು ಸಾಕಷ್ಟು ನೋವು ತಂದಿದೆ. ಕಾಂಗ್ರೆಸ್ ಕಾರ್ಯಕರ್ತರು ನಿರಾಶೆಗೆ ಒಳಗಾಗಬೇಕಿಲ್ಲ, ನಿಮ್ಮೊಂದಿಗೆ ವೆಂಕಟಪ್ಪನಾಯಕನ ಕುಟುಂಬವಿದೆ ಎಂಬುದು ಕಾಂಗ್ರೆಸ್ ಅಭ್ಯರ್ಥಿ ರಾಜಾ ವೇಣುಗೋಪಾಲ ನಾಯಕ ಮಾತಾಗಿದೆ.
ಉಪಚುನಾವಣೆಯನ್ನು ನಾವು ಬಯಸಿರಲಿಲ್ಲ. ಸುರಪುರ ಮತಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇನೆ. ಮತದಾರರು ಯಾರು ಮರೆತಿಲ್ಲ. ಬಿಜೆಪಿ ಕಾರ್ಯಕರ್ತರು, ಬೆಂಬಲಿಗರು ಒತ್ತಾಯದ ಮೇರೆಗೆ ಚುನಾವಣೆ ಎದುರಿಸಲಿದ್ದೇವೆ ಎಂಬುದು ಮಾಜಿ ಸಚಿವ ರಾಜೂಗೌಡರ ಅಭಿಪ್ರಾಯವಾಗಿದೆ.
-
“ಕಾಂಗ್ರೆಸ್ ಸಂವಿಧಾನವನ್ನು ಸ್ವಾರ್ಥಕ್ಕೆ ಬಳಸಿದೆ”: ಬಸವರಾಜ ಬೊಮ್ಮಾಯಿ ಹೇಳಿಕೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ












Click it and Unblock the Notifications