ಕರುನಾಡ ಮುಖ್ಯಮಂತ್ರಿಗಳ ಕಣ್ಣೀರು ಕಹಾನಿ ಹೇಳಿದ ನಳಿನ್ ಕುಮಾರ್ ಕಟೀಲ್
ಯಾದಗಿರಿ, ಫೆಬ್ರವರಿ.20: ಮುಖ್ಯಮಂತ್ರಿ ಸ್ಥಾನದಲ್ಲಿ ಇದ್ದಾಗ ಕಣ್ಣೀರು ಬಲು ಸಲೀಸಾಗಿ ಬರುತ್ತದೆ ಎನ್ನುವ ಮೂಲಕ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವ್ಯಂಗ್ಯವಾಡಿದ್ದಾರೆ.
ಯಾದಗಿರಿಯಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿರುವ ನಳಿನ್ ಕುಮಾರ್ ಕಟೀಲ್, ರಾಜ್ಯದ ಮಾಜಿ ಮುಖ್ಯಮಂತ್ರಿಗಳ ವಿರುದ್ಧ ವಾಗ್ದಾಳಿ ನಡೆಸಿದರು. ಮೊದಲಿಗೆ ಹೆಚ್ ಡಿಕೆ ವಿರುದ್ಧ ಹರಿ ಹಾಯ್ದರು.
ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅಧಿಕಾರದಲ್ಲಿ ಇದ್ದಾಗ ಮನೆ ಮನೆಗೆ ತೆರಳಿ ಕಣ್ಣೀರು ಹಾಕುತ್ತಿದ್ದರು. ಕುಮಾರಸ್ವಾಮಿ ಒಬ್ಬ ಕಣ್ಣೀರು ಹಾಕುವ ಮುಖ್ಯಮಂತ್ರಿ ಎಂದು ನಳಿನ್ ಕುಮಾರ್ ಕಿಡಿ ಕಾರಿದ್ದಾರೆ.

ಸಿದ್ದರಾಮಯ್ಯ ಕಣ್ಣೀರು ಬರಿಸುವ ಮುಖ್ಯಮಂತ್ರಿ:
ಕುಮಾರಸ್ವಾಮಿ ಕಣ್ಣೀರು ಹಾಕುವ ಮುಖ್ಯಮಂತ್ರಿಯಾದರೆ, ಮತ್ತೊಬ್ಬ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಣ್ಣೀರು ಹಾಕಿಸುವ ಮುಖ್ಯಮಂತ್ರಿ ಆಗಿದ್ದರು. ಒಬ್ಬರು ಕಣ್ಣೀರು ಹಾಕಿಸುತ್ತಾರೆ, ಇನ್ನೊಬ್ಬರು ಕಣ್ಣೀರು ಹಾಕುತ್ತಾರೆ. ಆದರೆ, ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾದ ಬಳಿಕ ಜನರ ಕಣ್ಣೀರು ಒರೆಸುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

ಅನರ್ಹ ಶಾಸಕರನ್ನು ಆಪರೇಷನ್ ಕಮಲದ ಮೂಲಕ ಬಿಜೆಪಿಗೆ ಸೇರಿಸಿಕೊಳ್ಳಲಾಗಿದೆ ಎಂಬ ಆರೋಪವನ್ನು ನಳಿನ್ ಕುಮಾರ್ ತಳ್ಳಿ ಹಾಕಿದ್ದಾರೆ. ಬಿಜೆಪಿ ಇದೀಗ ಆಪರೇಷನ್ ಕಮಲವನ್ನು ನಿಲ್ಲಿಸಿದೆ. ಆದರೆ, ಪಕ್ಷಕ್ಕೆ ಬರಲು ಇಚ್ಛೆ ಉಳ್ಳವರು ಯಾವಾಗ ಬೇಕಾದರೂ ಬಿಜೆಪಿಗೆ ಬರಬಹುದು ಎಂದು ಹೇಳಿದರು.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications