Get Updates
Get notified of breaking news, exclusive insights, and must-see stories!

ಹಿಂದೂಗಳು ಖಡ್ಗ ಇಟ್ಟುಕೊಳ್ಳಿ, ಧರ್ಮ ಉಳಿಸಲು ಕೊಲ್ಲಿ: ರಾಜಾಸಿಂಗ್

ಯಾದಗಿರಿ, ಡಿಸೆಂಬರ್ 15: ನೆರೆ ರಾಜ್ಯದ ಶಾಸಕರೊಬ್ಬರು ಯಾದಗಿರಿ ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೋಮು ದ್ವೇಷ ಹೆಚ್ಚಿಸುವ ಭಾಷಣ ಮಾಡಿರುವುದು ವಿವಾದ ಹುಟ್ಟುಹಾಕಿದೆ.

ಜಿಲ್ಲೆಯ ಶ್ರೀರಾಮಸೇನೆ ಜಿಲ್ಲಾ ಘಟಕ ಮಂಗಳವಾರ (ಡಿಸೆಂಬರ್ 12)ರಂದು ಆಯೋಜಿಸಿದ್ದ 'ವಿರಾಟ್ ಹಿಂದೂ ಸಮಾವೇಶ' ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿದ್ದ ನರೆ ರಾಜ್ಯ ತೆಲಂಗಾಣದ ಘೋಷಾ ಮಹಲ್ ಶಾಸಕ ರಾಜಾಸಿಂಗ್ ಠಾಕೂರ್ ಅವರು ಕೋಮು ಹಿಂಸೆ ಉದ್ರೇಕಿಸುವ ಭಾಷಣ ಮಾಡಿರುವ ವಿಡಿಯೊ ವೈರಲ್ ಆಗಿದ್ದು ಸಾಮಾಜಿಕ ಜಾಲತಾಣ, ಮಾಧ್ಯಮಗಳಲ್ಲಿ ಚರ್ಚೆಯ ವಿಷಯವಾಗಿದೆ.

ವಿರಾಟ್ ಸಮಾವೇಶದಲ್ಲಿ ಮುಖ್ಯ ಭಾಷಣಕಾರರಾಗಿ ಮಾತನಾಡಿದ ಅವರು 'ಪ್ರತಿಯೊಬ್ಬ ಹಿಂದುವೂ ತಮ್ಮ ಮನೆಯಲ್ಲಿ ಖಡ್ಗವನ್ನು ಹೊಂದಿರಬೇಕು, ಧರ್ಮ ಉಳಿಸಲು ಅವಶ್ಯಕತೆ ಬಿದ್ದರೆ ಕೊಲ್ಲಲು ಹಿಂಜರಿಯಬಾರದು' ಎಂದು ಉಗ್ರ ಭಾಷಣ ಮಾಡಿದ್ದರು. ಈಗ ಆ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Telangana MLA Raja Singh delivers violence stumatery speech in Yadagiri.

ರಾಜಾಸಿಂಗ್ ಠಾಕೂರ್ ಮಾತನಾಡುತ್ತಿದ್ದಾಗ ಭಗವಾಧ್ವಜಗಳನ್ನು ಹಿಡಿದ ಯುವಕರು ಹುಚ್ಚೆದ್ದು ಕುಣಿದು, ಕೇಕೆ ಹಾಕಿ, ಅಲ್ಲಿಯೇ ಖಡ್ಗ‌ಗಳನ್ನು ಪ್ರದರ್ಶಿಸುತ್ತಿರುವ ದೃಶ್ಯಗಳೂ ವಿಡಿಯೋದಲ್ಲಿ ಸೆರೆಯಾಗಿದೆ.

ಮುಂದುವರೆದು ಮಾತನಾಡಿದ ರಾಜಾಸಿಂಗ್ ಅವರು ಹಿಂದೂ ರಾಷ್ಟ್ರ ನಿರ್ಮಾಣಕ್ಕೆ ಯುವಕರು ಸಂಕಲ್ಪ ಮಾಡಬೇಕು, ಜಗತ್ತಿನ ಏಕೈಕ ಹಿಂದೂ ರಾಷ್ಟ್ರವಾದ ಭಾರತ ಆದರೆ ನೂರು ಹಿಂದೂ ರಾಷ್ಟ್ರ ನಿರ್ಮಾಣ ಮಾಡುವ ಕನಸು ಕಾಣಬೇಕು ಎಂದು ಅವರು ಆವೇಶ ಪೂರಿತ ಧ್ವನಿಯಲ್ಲಿ ಮಾತನಾಡಿದ್ದರು.

ರಾಜಾಸಿಂಗ್ ಅವರ ಪ್ರತಿ ಮಾತಿಗೆ ಶಿಳ್ಳೆ, ಕೇಕೆ ಹಾಕಿ ಭಗವಾಧ್ವಜವನ್ನು ಹಾರಿಸುವ ಮೂಲಕ ಯುವಕರು ಪ್ರತಿಕ್ರಿಯೆ ನೀಡುತ್ತಿದ್ದರು. ಪೊಲೀಸರ ಎದರೇ ರಾಜಾಸಿಂಗ್ ಉದ್ರೇಕಕಾರಿ ಭಾಷಣ ಮಾಡಿದ್ದರು.

ರಾಜ್ಯದ ಕಾಂಗ್ರೆಸ್ ಸರ್ಕಾರವನ್ನು ಟೀಕಿಸಿದ ರಾಜಾಸಿಂಗ್ 'ಮುಸ್ಲಿಂರ ಓಟಿನ ಆಸೆಗಾಗಿ ಟಿಪ್ಪು ಜಯಂತಿ ಮಾಡುವುದನ್ನು ಸರ್ಕಾರ ಕೈಬಿಡಬೇಕು, ಮುಸ್ಲಿಂ ಒಬ್ಬ ಮತಾಂಧನಾಗಿದ್ದ, 50 ಸಾವಿರ ಹಿಂದೂಗಳನ್ನು ಆತ ಮತಾಂತರ ಮಾಡಿಸಿದ್ದ' ಎಂದಿದ್ದರು.

ಅದೇ ವೇದಿಕೆಯಲ್ಲಿ ಉಪಸ್ಥಿತರಿದ್ದ, ಉಗ್ರ ಭಾಷಣಕ್ಕೆ ಹೆಸರುವಾಸಿಯಾದ ಪ್ರಮೋದ್ ಮುತಾಲಿಕ್ ಅವರು ಹೆಚ್ಚೇನು ಉಗ್ರವಾಗಿ ಮಾತನಾಡದೆ, 'ರಾಜಕೀಯ ಪಕ್ಷ ಕಟ್ಟುವ ಮೂಲಕ ಹಿಂದೂಗಳ ರಕ್ಷಣೆ ಮಾಡುತ್ತೇನೆ' ಎಂದಷ್ಟೇ ಹೇಳಿದ್ದರು.

ಪ್ರಿಯಾಂಕ್ ಖರ್ಗೆ ಖಂಡನೆ
ರಾಜಾಸಿಂಗ್ ಭಾಷಣಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್ ಸಚಿವ ಪ್ರಿಯಾಂಕ್ ಖರ್ಗೆ, ನೆರೆ ರಾಜ್ಯದ ರಾಜಕಾರಣಿಯೊಬ್ಬರು ಬಂದು ರಾಜ್ಯದ ಶಾಂತಿ ಕದಡಲು ಯತ್ನಿಸುತ್ತಿರುವುದು ಹೇಯ ಕೃತ್ಯ, ಈ ಕುರಿತು ಸರ್ಕಾರ ಕ್ರಮ ತೆಗೆದುಕೊಳ್ಳುತ್ತದೆ ಎಂದಿದ್ದಾರೆ.

ಇತಿಹಾಸ ಗೊತ್ತಿಲ್ಲದೆ ರಾಜಾಸಿಂಗ್ ಅವರು ಟಿಪ್ಪು ಬಗ್ಗೆ ಇಲ್ಲಸಲ್ಲದ ಸುಳ್ಳುಗಳನ್ನು ಹೇಳಿ ಶಾಂತಿ ಪ್ರಿಯ ಉತ್ತರ ಕರ್ನಾಟಕದಲ್ಲಿ ಕೋಮು ಗಲಭೆ ಉಂಟು ಮಾಡಲು ಪ್ರಯತ್ನಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಕೇಸು ದಾಖಲಿಸುವಂತೆ ಸೂಚನೆ

ಯಾದಗಿರಿ ಶಾಸಕ ಎ.ಬಿ.ಮಾಲಕರೆಡ್ಡಿ ಅವರೂ ಕೂಡ ರಾಜಾಸಿಂಗ್ ಅವರ ಭಾಷಣದ ಬಗ್ಗೆ ಆತಂಕ ವ್ಯಕ್ತಪಡಿಸಿದ್ದು, ಕೋಮು ವೈಷಮ್ಯ ಕೆಡಿಸುವಂತಹಾ, ಹಿಂಸೆಗೆ ಪ್ರಚೋದಿಸುವ ಭಾಷಣ ಮಾಡಿದ ವ್ಯಕ್ತಿಯ ವಿರುದ್ಧ ಕೇಸು ದಾಖಲಿಸುವಂರೆ ಡಿವೈಎಸ್‌ಪಿ ಅವರಿಗೆ ಸೂಚಿಸಿರುವುದಾಗಿ ಅವರು ಹೇಳಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+