ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಯಾದಗಿರಿಯಲ್ಲಿ ಗಿಡ-ಮರಗಳ ಮಾರಣ ಹೋಮ
ಯಾದಗಿರಿ ಮಾರ್ಚ್ 11: ಗಿಡ ಮರಗಳನ್ನು ಉಳಿಸಿ ಅದರ ಬಗ್ಗೆ ಜಾಗೃತಿ ಮೂಡಿಸುವುದು ಎಲ್ಲರ ಕರ್ತವ್ಯ. ಆದರೆ ಈ ಬಗ್ಗೆ ಅರಿವು ಮೂಡಿಸಬೇಕಾದ ಸರ್ಕಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗಿಡ-ಮರಗಳು ಬೆಂಕಿಗೆ ಆಹುತಿಯಾದ ಘಟನೆ ಯಾದಗಿರಿಯಲ್ಲಿ ನಡೆದಿದೆ. ಸಾವಿರಾರು ಗಿಡ-ಮರಗಳು ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಭಸ್ಮವಾಗಿವೆ.
ಹೌದು... ಯಾದಗಿರಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಈ ಘಟನೆ ನಡೆದಿದೆ. ಕ್ರೀಡಾಂಗಣದ ಬಳಿ ಸ್ವಚ್ಚತೆ ಭಾಗವಾಗಿ ಒಣ ಹುಲ್ಲಿಗೆ ಬೆಂಕಿ ಹಾಕಲಾಗಿತ್ತು. ಈ ಬೆಂಕಿ ಕ್ರೀಡಾಂಗಣದ ಸುತ್ತಲೂ ವ್ಯಾಪಿಸಿದೆ. ಬೆಂಕಿಯ ಕೆನ್ನಾಲಿಗೆಗೆ ಸುತ್ತಲು ಇದ್ದ ಗಿಡ ಮರಗಳು ಸುಟ್ಟು ಭಸ್ಮವಾಗಿವೆ. ಒಂದಲ್ಲಾ ಎರಡಲ್ಲಾ ಬೆಂಕಿಯ ಜ್ವಾಲೆಗೆ ಸಿಲುಕಿ ಸಾವಿರಾರು ಗಿಡ ಮರಗಳು ಸುಟ್ಟು ಹೋಗಿವೆ.

ಕ್ರೀಡಾ ಅಧಿಕಾರಿಗಳ ಎಡವಟ್ಟಿಗೆ ಕ್ರೀಡಾಂಗದ ಸುತ್ತಲು ಇದ್ದ ಬೃಹತ್ ಗಾತ್ರದ ಮರ ಗಿಡಗಳು ಸುಟ್ಟು ಕರಕಲಾಗಿ ಹೋಗಿವೆ. ಯಾದಗಿರಿಯಲ್ಲಿ ಬೇಸಿಗೆ ಬಂದರೆ ಕುಡಿಯುವ ನೀರಿನ ಸಮಸ್ಯೆ ಸೃಷ್ಟಿಯಾಗುತ್ತದೆ. ಮರಗಿಡಗಳು ನೀರಿಲ್ಲದೆ ಒಣಗಿ ಹೋಗುತ್ತವೆ. ನೆತ್ತಿ ಸುಡುವ ಬಿಸಿಲಿಗೆ ಜನ ಮನೆ ಬಿಟ್ಟು ಹೊರ ಬಾರದ ಸ್ಥಿತಿ ಇದೆ. ಹೀಗಿರುವಾಗ ಮರ ಗಿಡಗಳನ್ನು ಪೋಷಿಸಿ ಪಾಲನೆ ಮಾಡಬೇಕಾದ ಅಧಿಕಾರಿಗಳಿಂದ ದೊಡ್ಡ ಎಡವಟ್ಟು ನಡೆದು ಹೋಗಿದೆ.
ಒಣ ಹುಲ್ಲಿಗೆ ಹಚ್ಚಿದ ಬೆಂಕಿ ಕೆನ್ನಾಲಿಗೆಗೆ ಬೇವಿನ ಮರ, ಆಲದ ಮರ, ಹುಣಸೆ ಗಿಡ ಸೇರಿದಂತೆ ಹಲವಾರು ಗಿಡಗಳು ಸುಟ್ಟು ಹೋಗಿವೆ. ಇದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ. ಬೇಸಿಗೆಯಲ್ಲಿ ಒಣ ಹುಲ್ಲಿಗೆ ಬೆಂಕಿ ಹಾಕುವಾಗ ಜಾಗರೂಕರಾಗಿರಬೇಕು. ಆದರೆ ಅಧಿಕಾರಿಗಳು ಬೇಜವಬ್ದಾರಿತನದಿಂದ ವರ್ತಿಸಿದ್ದಾರೆಂದು ಸ್ಥಳೀಯರು ದೂರಿದ್ದಾರೆ.
ಯಾದಗಿರಿಯಲ್ಲಿ ಬಿಸಿಲು ಅಧಿಕ. ಬೇಸಿಗೆ ಬಿಸಿಲಿನಿಂದ ರಕ್ಷಿಸಿಕೊಳ್ಳಲು ಹಾಗೂ ಪರಿಸರವನ್ನು ಕಾಪಾಡುವ ಉದ್ದೇಶದಿಂದ ಬೇರೆ ಬೇರೆ ತಳಿಯ ಗಿಡಗಳನ್ನು ಬೇರೆ ಬೇರೆ ಜಿಲ್ಲೆಗಳಿಂದ ತಂದು ಕ್ರೀಡಾಂಗಣದ ಸುತ್ತ ನೆಡಲಾಗಿತ್ತು. ಆದರೆ ಇಲ್ಲಿನ ಸಾವಿರಾರು ಮರಗಳು ಸುಟ್ಟು ಹೋಗಿರುವುದರಿಂದ ಕ್ರೀಡಾಪಟುಗಳಿಗೆ ಮಾತ್ರವಲ್ಲದೆ ಈ ಭಾಗದ ಜನರಿಗೆ ಬಿಸಿಲ ಬಿಸಿ ಸಹಿಸಿಕೊಳ್ಳುವುದು ಕಷ್ಟವಾಗಿದೆ.
ಬಿಸಿಲಿನಿಂದ ರಕ್ಷಿಸಿಕೊಳ್ಳಲು ಆಲದ ಮರ ಹಾಗೂ ಬೇವಿನ ಮರಗಳ ಕೆಳಗೆ ಕುಳಿತು ಜನ ವಿಶ್ರಾಂತಿ ಪಡೆಯುತ್ತಿದ್ದರು. ಅಲ್ಲದೆ ಕ್ರೀಡಾಪಟುಗಳು ಆಹಾರವನ್ನು ಸೇವಿಸಲು ಕೂಡ ಈ ಮರಗಳು ಆಸರೆಯಾಗಿದ್ದವು. ಸಂಜೆಯಾದರೆ ತಣ್ಣನೆ ಗಾಳಿಯನ್ನು ಆನಂದಿಸುವ ಸ್ಥಳಿಯರು ವಾಕಿಂಗ್ ಜಾಗಿಂಗ್ ಗಾಗಿ ಇಲ್ಲಿಗೆ ಆಗಮಿಸುತ್ತಾರೆ. ಈ ಮರ ಗಿಡಗಳಿಂದ ಬೀಸುವುದು ಮಾತ್ರವಲ್ಲದೆ, ಗಾಳಿಯ ಗುಣಮಟ್ಟವೂ ಕೂಡ ಉತ್ತಮವಾಗಿತ್ತು. ಆದರೆ ಅಧಿಕಾರಿಗಳ ಎಡವಟ್ಟಿಗೆ ಎಲ್ಲವೂ ನಾಶವಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಯಾದಗಿರಿಯಲ್ಲಿ ಬಿಸಿಲು ಹೆಚ್ಚಾಗಿರುವುದರಿಂದ ಒಂದು ಗಿಡ ಬೆಳೆಸುವುದು ಕಷ್ಟವಿದೆ. ನೀರಿಲ್ಲದೆ ಅದರ ಪಾಲನೆ ಪೋಷಣೆ ಮಾಡುವುದು ಅಸಾಧ್ಯ. ಹೀಗಿರುವಾಗ ವರ್ಷಗಳಿಂದ ಇರುವ ಮರ ಗಿಡಗಳನ್ನು ಸುಟ್ಟು ಹಾಕಿರುವುದು ಭಾರೀ ವಿರೋಧಕ್ಕೆ ಕಾರಣವಾಗಿದೆ. ಇದಕ್ಕೆ ಜಿಲ್ಲಾಡಳಿತ ಹಾಗೂ ಕ್ರೀಡಾ ಅಧಿಕಾರಿಗಳೇ ನೇರ ಹೊಣೆ ಎಂದು ಸ್ಥಳೀಯರು ದೂರಿದ್ದಾರೆ.
-
Summer Walking: ಬೇಸಿಗೆಯಲ್ಲಿ ವಾಕಿಂಗ್ ಮಾಡುವವರು ಈ ನಿಯಮ ತಪ್ಪದೇ ಪಾಲಿಸಿ.. -
Summer Super Drink: ಪ್ರತಿದಿನ ಎರಡು ಗ್ಲಾಸ್ ಕಬ್ಬಿನ ರಸ: ಬೇಸಿಗೆಯ ಸೂಪರ್ ಡ್ರಿಂಕ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL












Click it and Unblock the Notifications