ವೃದ್ಧಾಶ್ರಮದಲ್ಲಿ ದೀಪಾವಳಿ ಆಚರಿಸಿದ ಆದರ್ಶ ಮೆರೆದ ಯಾದಗಿರಿ ಪೊಲೀಸರು
ಯಾದಗಿರಿ, ಅಕ್ಟೋಬರ್ 19: ಆಧುನಿಕ ಘಟ್ಟದ ಇಂದಿನ ದಿನಮಾನಗಳಲ್ಲಿ ಬದುಕು, ಜೀವನ ಶೈಲಿ ಬದಲಾಗುತ್ತಿದೆ. ಅದು ಮಾನವೀಯ ಸಂಬಂಧಗಳನ್ನು ಹಂತ ಹಂತವಾಗಿ ಕಳೆದುಕೊಳ್ಳಲಾರಂಭಿಸಿದೆ. ಇದರ ಪರಿಣಾಮವೇ ಹಿರಿಯ ಜೀವಗಳು, ವೃದ್ಧರು ಮನೆಯಿಂದ ಆಚೆ ದೂಡಲ್ಪಡುತ್ತಿದ್ದಾರೆ. ಈ ಕ್ರಿಯೆಯ ಅನಾಗರಿಕ ಫಲಿತಾಂಶವೇ ಇಂದಿನ ವೃದ್ಧಾಶ್ರಮಗಳು.

ವೃದ್ಧಾಶ್ರಮಗಳಲ್ಲಿರುವ ಹಿರಿಯ ಜೀವಗಳು ನೊಂದು-ಬೆಂದು ಮೌನವೇ ಅವರ ಬದುಕಾಗಿರುತ್ತದೆ. ಅವರಿಗೆ ಹಬ್ಬ-ಹರಿದಿನ, ಸಂಭ್ರಮ-ಸಡಗರ ಯಾವತ್ತೋ ಮರೆಯಾಗಿರುತ್ತದೆ. ಅಂಥ ಜೀವಗಳ ನಡುವೆ ಬೆಳಕಿನ ಹಬ್ಬ ದೀಪಾವಳಿಯನ್ನು ಆಚರಿಸುವ ಮೂಲಕ ಯಾದಗಿರಿ ಜಿಲ್ಲಾ ಪೊಲೀಸರು ವೃದ್ಧಾಶ್ರಮದ ಜೀವಗಳಲ್ಲಿ ಸಂತಸ ತಂದಿದ್ದಾರೆ.

ನಗರಸಭೆ ಕಚೇರಿ ಬಳಿಯ ಅಕ್ಷತಾ ಮಹಿಳಾ ಮಂಡಲದ ವೃದ್ಧಾಶ್ರಮದಲ್ಲಿ ಎಸ್ಪಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ನೇತೃತ್ವದಲ್ಲಿ ದೀಪಾವಳಿ ಹಬ್ಬವನ್ನು ಆಚರಿಸಿದರು. ಆಶ್ರಮದಲ್ಲಿರುವ ಹಿರಿಯ ಜೀವಗಳಿಗೆ ಹೊಸ ಬಟ್ಟೆ ವಿತರಿಸಿದರು. ಜೊತೆಗೆ ಪೊಲೀಸ್ ಇಲಾಖೆಯ ಸಿಬ್ಬಂದಿ ಹಿರಿಯ ಜೀವಗಳ ಜೊತೆ ಹಬ್ಬದ ಊಟ ಸವಿದರು. ಅಲ್ಲದೇ ಆರೋಗ್ಯ ತಪಾಸಣೆ ಮಾಡಿಸಲಾಯಿತು. ಬಳಿಕ ಸಾಂಕೇತಿಕವಾಗಿ ಪಟಾಕಿ ಹಚ್ಚುವ ಮೂಲಕ ಬೆಳಕಿನ ಹಬ್ಬವನ್ನು ಸಂಭ್ರಮಿಸಿದರು. ಈ ವೇಳೆ ಸಿಪಿಐ ಮೌನೇಶ್ವರ್ ಪಾಟೀಲ್, ಪಿಎಸ್ಐ ಮಹಾಂತೇಶ್ ಸಜ್ಜನ್ ಸೇರಿದಂತೆ ಹಲವರಿದ್ದರು.
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ? -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ












Click it and Unblock the Notifications