ಯಾದಗಿರಿ: ಕುಂಬಾರರ ಬದುಕನ್ನು ಬೆಳಗುತ್ತಿಲ್ಲ ಈ ಹಣತೆಗಳು!
ಯಾದಗಿರಿ, ಅಕ್ಟೋಬರ್ 19: ನಾಡಿನಲ್ಲಿಗ ಬೆಳಕಿನ ಹಬ್ಬದ ಸಡಗರ. ಈ ಹಬ್ಬದಲ್ಲಿ ಕತ್ತಲೆಯನ್ನು ಕಳೆದು ಬೆಳಕನ್ನು ಬೆಳಗುವು ಹಣತೆಗಳದ್ದೇ ದರ್ಬಾರ್. ಬೆಳಕಿನ ಹಬ್ಬದ ಸಂಭ್ರಮ ಎಲ್ಲರಲ್ಲೂ ಮನೆ ಮಾಡಿದೆ. ವ್ಯಾಪಾರ-ವಹಿವಾಟು ಜೋರಾಗಿ ನಡೆಯುತ್ತಿದೆ.
ಎರಡು ದಿನಗಳ ದೀಪಾವಳಿ ರಂಗು ರಂಗಾಗಿರುತ್ತದೆ. ಈ ಬಾರಿ ದೀಪಾವಳಿಯೂ ರಂಗೇರುತ್ತಿದೆ. ಬೆಳಕಿನ ಹಬ್ಬ ದೀಪಾವಳಿಯನ್ನು ಸಡಗರದಿಂದ ಜನರು ಆಚರಿಸುತ್ತಿದ್ದಾರೆ. ದೀಪಾವಳಿ ಹಿನ್ನೆಲೆಯಲ್ಲಿ ಮಾರುಕಟ್ಟೆಯಲ್ಲಿ ಹೊಸ ಬಟ್ಟೆ, ಆಕಾಶ ಬುಟ್ಟಿ, ಪಟಾಕಿ, ಹಣತೆ, ಹಣ್ಣುಗಳ ಮಾರಾಟ ಜೋರಾಗಿದೆ. ಜನ ಸಂಭ್ರಮದಿಂದ ಕುಟುಂಬ ಸಮೇತ ಹಬ್ಬ ಆಚರಿಸುವ ಸಿದ್ಧತೆಯಲ್ಲಿದ್ದಾರೆ.

ಇದರ ಮಧ್ಯೆ ಆಧುನಿಕತೆಯೂ ಹಂತ ಹಂತವಾಗಿ ಅಟ್ಟಹಾಸ ಮೆರೆಯುತ್ತಿದೆ. ಇದರಿಂದ ಗುಡಿ ಕೈಗಾರಿಕೆ, ಕುಲ ಕಸಬುಗಳು ಅವಸಾನದತ್ತ ತಲುಪುತ್ತಿವೆ. ಕಳೆದ ಇಪ್ಪತ್ತು ವರ್ಷಗಳಲ್ಲಿ ಗುಡಿ ಕೈಗಾರಿಕೆಯಿಂದ ತಯಾರಿಸಿದ ವಸ್ತುಗಳ ಬೇಡಿಕೆ ಕಡಿಮೆಯಾಗುತ್ತಿದೆ. ಮಣ್ಣಿನಿಂದ ತಯಾರಿಸಿದ ಹಣತೆಗಳ ಅಸ್ತಿತ್ವವನ್ನು ಫ್ಲಾಸ್ಟಿಕ್ ಹಣತೆಗಳು ನುಂಗುತ್ತಿವೆ. ಹೀಗಾಗಿ ಕುಂಬಾರರ ಬದುಕು ಕಷ್ಟದಾಯಕವಾಗುತ್ತಿದೆ.
ಕುಂಬಾರರ ಮನೆಯಲ್ಲಿ ಎಷ್ಟೊಂದು ಹಣತೆಗಳಿವೆ. ಅವುಗಳು ಕತ್ತಲೆಯನ್ನು ಕಳೆದು ಬೆಳಕನ್ನು ತೋರುತ್ತವೆ. ಆದರೆ ಕುಂಬಾರರ ಬದುಕಿಗೆ ಮಾತ್ರ ಹಣತೆಗಳು ಬೆಳಕಾಗುತ್ತಿಲ್ಲ. ಹಬ್ಬಗಳು ಸಾಂಪ್ರದಾಯಿಕತೆ ಮೀರಿ ಆಧುನಿಕವಾಗುತ್ತಿದೆ. ಹೀಗಾಗಿ ಮಣ್ಣಿನ ಹಣತೆಗಳು ನಮ್ಮಿಂದ ದೂರವಾಗುತ್ತಿವೆ. ಹೀಗಾದಾಗ ಸಹಜವಾಗಿಯೇ ಕುಂಬಾರರು ಕುಲ ಕಸಬಿನಿಂದ ವಿಮುಖವಾಗುವ ವಾತಾವರಣ ಸೃಷ್ಟಿಯಾಗುತ್ತಿದೆ. ಇದುವೇ ಆಧುನಿಕ ಭರಾಟೆಯ ಹೊಡೆತ!
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications