Get Updates
Get notified of breaking news, exclusive insights, and must-see stories!

ಕೈಕಾಲು ಕಳೆದುಕೊಂಡ ಇಂಜಿನಿಯರ್ ಗೆ 5 ಲಕ್ಷ ರೂ.ಪರಿಹಾರ ನೀಡಿದ HDK

ಯಾದಗಿರಿ, ಜೂನ್ 22: ಕಳೆದ ಒಂದೂವರೆ ವರ್ಷದ ಹಿಂದೆ ಅಪಘಾತವೊಂದರಲ್ಲಿ ಕೈ ಮತ್ತು ಕಾಲುಗಳು ಶಕ್ತಿಹೀನವಾಗಿ ಹಾಸಿಗೆ ಹಿಡಿದಿರುವ ಇಂಜಿನಿಯರಿಂಗ್ ಪದವೀಧರ ಭೀಮರೆಡ್ಡಿ ಶಂಕರಪ್ಪ ಅವರಿಗೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು 5 ಲಕ್ಷ ರೂ.ಗಳ ಪರಿಹಾರದ ಚೆಕ್ ವಿತರಿಸಿದರು.

ಕುಮಾರಸ್ವಾಮಿ ಗ್ರಾಮ ವಾಸ್ತವ್ಯದ ಕತೆ ಹೇಳುವ ಚಿತ್ರಗಳು

ಯಾದಗಿರಿ ತಾಲೂಕಿನ ಮುನಗಲ್ ಗ್ರಾಮದ ಭೀಮರೆಡ್ಡಿ ಅವರ ತಂದೆಗೆ ಕುಮಾರಸ್ವಾಮಿ ಅವರು ಗುರುಮಠಕಲ್ ತಾಲೂಕಿನ ಚಂಡ್ರಕಿಯಲ್ಲಿ ಪರಿಹಾರದ ಚೆಕ್ ಹಸ್ತಾಂತರಿಸಿದರು.

Yadgir: HD Kumaraswamy gives RS 5 lakh cheque to an accident victim

ಜೂನ್ 21 ರಂದು ನಡೆದ ಜನತಾದರ್ಶನದಲ್ಲಿ ಯುವಕನ ತಾಯಿ ಭಾಗವಹಿಸಿ, ಮಗನ ಚಿಕಿತ್ಸೆಗಾಗಿ ಮನೆ, ಹೊಲ, ಎತ್ತುಗಳನ್ನು ಕಳೆದುಕೊಂಡು ಮೂವತ್ತು ಲಕ್ಷಕ್ಕೂ ಅಧಿಕ ಹಣ ಖರ್ಚು ಮಾಡಿದರೂ, ಗುಣಮುಖವಾಗಿಲ್ಲ ಎಂದು ದುಃಖ ತೋಡಿಕೊಂಡಿದ್ದರು. ಅಹವಾಲು ಸ್ವೀಕರಿಸಿದ್ದ ಮುಖ್ಯಮಂತ್ರಿಗಳು ಕೂಡಲೇ ಸ್ಪಂದಿಸಿ ಬೆಳಿಗ್ಗೆ ಬಂದು ಐದು ಲಕ್ಷ ರೂ.ಗಳ ಪರಿಹಾರದ ಚೆಕ್ ಸ್ವೀಕರಿಸಲು ಭೀಮರೆಡ್ಡಿ ಅವರ ಪಾಲಕರಿಗೆ ತಿಳಿಸಿದ್ದರು. ಕೊಟ್ಟ ಭರವಸೆಯಂತೆ ಇಂದು ಜೂನ್ 22 ರಂದು ಬೆಳಿಗ್ಗೆ ಚೆಕ್ ಹಸ್ತಾಂತರಿಸಿದರು.

ಗುರುಮಠಕಲ್ ಶಾಸಕ ನಾಗನಗೌಡ ಕಂದಕೂರ ಮತ್ತಿತರರು ಇದ್ದರು.(ಕೃಪೆ: ಕರ್ನಾಟಕ ವಾರ್ತೆ)

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+