Yelahanka Elections: ಬಿಜೆಪಿಯ ಗೆಲುವಿನ ಓಟಕ್ಕೆ ತಡೆ ಹಾಕಲು ಜೆಡಿಎಸ್ ತಯಾರಿ
ಬೆಂಗಳೂರು ನಗರದ ಉತ್ತರ ಭಾಗದಲ್ಲಿರುವ, ಭೂಮಿಗೆ ಬಂಗಾರದ ಬೆಲೆ ಇರುವ ವಿಧಾನಸಭಾ ಕ್ಷೇತ್ರ ಯಲಹಂಕ. ಕರ್ನಾಟಕದ ರಾಜಧಾನಿ ಬೆಂಗಳೂರಿನ ಉಪ ನಗರವಾದರೂ ಹಲವಾರು ಸಮಸ್ಯೆಗಳನ್ನು ಕ್ಷೇತ್ರ ಎದುರಿಸುತ್ತಿದೆ. ಭಾರತೀಯ ವಾಯುಸೇನೆಯ ನೆಲೆಯನ್ನು ಕ್ಷೇತ್ರ ಒಳಗೊಂಡಿದೆ. ಇಲ್ಲಿ ನಡೆಯುವ ಏರ್ ಶೋ ನೋಡಲು ದೇಶ, ವಿದೇಶದ ಜನರು ಆಗಮಿಸುತ್ತಾರೆ. ಇಲ್ಲಿನ ಸಂಚಾರ ದಟ್ಟಣೆಯ ಕಿರಿಕಿರಿಗೆ ಜನರು ಹೈರಾಣಾಗಿದ್ದಾರೆ.
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಮಹತ್ವಾಕಾಂಕ್ಷಿ ಯೋಜನೆಯಾದ ಡಾ. ಕೆ. ಶಿವರಾಮ ಕಾರಂತ ಬಡಾವಣೆ ಇದೇ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುತ್ತದೆ. ಬಡಾವಣೆ ನಿರ್ಮಾಣಕ್ಕಾಗಿ ರೈತರು ಜಮೀನುಗಳನ್ನು ನೀಡಿ, ಕೊನೆಗೆ ಭೂ ಸ್ವಾಧೀನ ವಿವಾದ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. ಕೋರ್ಟ್ ಸೂಚನೆ ಬಳಿಕ ಈಗ ಬಡಾವಣೆ ನಿರ್ಮಾಣ ಕಾರ್ಯಕ್ಕೆ ಕೋರ್ಟ್ ಉಸ್ತುವಾರಿಯಲ್ಲಿಯೇ ಚಾಲನೆ ಕೊಡಲಾಗಿದೆ.

ಡಾ. ಕೆ. ಶಿವರಾಮ ಕಾರಂತ ಬಡಾವಣೆ ವಿಚಾರ ಈ ಬಾರಿ ಚುನಾವಣೆಯಲ್ಲಿ ಪ್ರಮುಖ ಅಂಶವೂ ಆಗಬಹುದು. ಬೆಂಗಳೂರು ಉತ್ತರ ತಾಲೂಕಿನ 17 ಗ್ರಾಮಗಳ ರೈತರು ಡಾ. ಕೆ. ಶಿವರಾಮ ಕಾರಂತ ಬಡಾವಣೆ ಅಭಿವೃದ್ಧಿ ಮಾಡಲು ಸ್ವಾಧೀನ ಮಾಡಿಕೊಂಡಿರುವ 3546 ಎಕರೆ 12 ಗುಂಟೆ ಜಮೀನಿಗೆ 2013ರ ಪುನರ್ ವಸತಿ, ಪುನರ್ ವ್ಯವಸ್ಥೆಯಲ್ಲಿ ನ್ಯಾಯಯುತ ಪರಿಹಾರ ಮತ್ತು ಪಾರದರ್ಶಕತೆ ಕಾಯ್ದೆ ಅನ್ವಯ ಪರಿಹಾರ ನೀಡಬೇಕು ಎಂದು ಪಟ್ಟು ಹಿಡಿದಿದ್ದಾರೆ.
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ, ಯಲಹಂಕ ಕ್ಷೇತ್ರದ ಹಾಲಿ ಶಾಸಕರು ಬಿಜೆಪಿಯ ಎಸ್. ಆರ್. ವಿಶ್ವನಾಥ್. ಡಾ. ಕೆ. ಶಿವರಾಮ ಕಾರಂತ ಬಡಾವಣೆ ನಿರ್ಮಾಣಕ್ಕೆ ಭೂಮಿ ನೀಡಿರುವ ರೈತರಿಗೆ ಆದ್ಯತೆ ಮೇಲೆ ಅಭಿವೃದ್ಧಿಪಡಿಸಿದ ನಿವೇಶನಗಳನ್ನು ಹಂಚಿಕೆ ಮಾಡಲಾಗುವುದು. ಬಡಾವಣೆ ರಚನೆ ಸಂಬಂಧ ಹಿಂದಿನ ಸರ್ಕಾರಗಳು ಸುಪ್ರೀಂಕೋರ್ಟ್ ನೀಡಿದ್ದ ತೀರ್ಪುಗಳನ್ನು ಅನುಷ್ಠಾನಕ್ಕೆ ತರಲು ನಿರ್ಧರಿಸಿದ್ದವು. ಇದೀಗ ಆ ನಿರ್ಧಾರಗಳಂತೆ ಬಡಾವಣೆ ನಿರ್ಮಾಣವಾಗುತ್ತಿದೆ ಎಂದು ಹೇಳಿದ್ದಾರೆ.
ರಾಜಕೀಯ ಮಾಹಿತಿ; ಯಲಹಂಕ ಕ್ಷೇತ್ರದಲ್ಲಿ 2004ರಲ್ಲಿ ಕಾಂಗ್ರೆಸ್ನ ಪ್ರಸನ್ನ ಕುಮಾರ್ ಬಿ. 144,806 ಮತಗಳನ್ನು ಪಡೆದು ಜಯಗಳಿಸಿದ್ದರು. ಬಿಜೆಪಿಯ ಮುನಿಕೃಷ್ಣ ಸಿ. 130,494 ಮತ ಪಡೆದು ಸೋಲು ಕಂಡಿದ್ದರು. ಆದರೆ 2018ರ ಚುನಾವಣೆಯಲ್ಲಿ ಬಿಜೆಪಿಯ ಎಸ್. ಆರ್. ವಿಶ್ವನಾಥ್ ಕ್ಷೇತ್ರವನ್ನು ಬಿಜೆಪಿಗೆ ತಂದು ಕೊಟ್ಟರು. ಬಳಿಕ ನಡೆದ ಮೂರು ಚುನಾವಣೆಯಲ್ಲಿಯೂ ಗೆದ್ದು ಹ್ಯಾಟ್ರಿಕ್ ಬಾರಿಸಿದ್ದಾರೆ. ಆದರೆ ಅವರು ಎಂದು ಸಚಿವರಾಗಿಲ್ಲ ಎಂಬುದು ಅಭಿಮಾನಿಗಳ ಕೊರಗು.
2008ರಲ್ಲಿ ಬಿಜೆಪಿಯ ಎಸ್. ಆರ್. ವಿಶ್ವನಾಥ್ 60,975 ಮತಗಳನ್ನು ಪಡೆದು ಕಾಂಗ್ರೆಸ್ನ ಬಿ. ಚಂದ್ರಪ್ಪ (44,953) ಸೋಲಿಸಿದರು. 2013ರಲ್ಲಿ ಎಸ್. ಆರ್. ವಿಶ್ವನಾಥ್ 75,507 ಮತಗಳನ್ನು ಪಡೆದು ಜೆಡಿಎಸ್ನ ಬಿ. ಚಂದ್ರಪ್ಪ (57,110) ಸೋಲಿಸಿದರು. ಕಾಂಗ್ರೆಸ್ನ ಎಂ. ಎನ್. ಗೋಪಾಲಕೃಷ್ಣ (52,372) 3ನೇ ಸ್ಥಾನ ಪಡೆದರು. 2018ರ ಚುನಾವಣೆಯಲ್ಲಿ ಎಸ್. ಆರ್. ವಿಶ್ವನಾಥ್ 120,110 ಮತಗಳನ್ನು ಪಡೆದು ಜಯಗಳಿಸುವ ಮೂಲಕ ಹ್ಯಾಟ್ರಿಕ್ ಬಾರಿಸಿದ್ದಾರೆ. ಜೆಡಿಎಸ್ನ ಎ. ಎಂ. ಹನುಮಂತೇಗೌಡ 77,607 ಮತಗಳನ್ನು ಪಡೆದು 2ನೇ ಸ್ಥಾನಗಳಿಸಿದರು. ಕಾಂಗ್ರೆಸ್ನ ಗೋಪಾಲಕೃಷ್ಣ ಎಂ. ಎನ್. (41,449) ಮೂರನೇ ಸ್ಥಾನ ಪಡೆದರು.

ಹ್ಯಾಟ್ರಿಕ್ ಹಿರೋ ಎಸ್. ಆರ್. ವಿಶ್ವನಾಥ್ ಕಟ್ಟಿಹಾಕಲು ಕಾಂಗ್ರೆಸ್ ಮತ್ತು ಜೆಡಿಎಸ್ ತಂತ್ರ ರೂಪಿಸಿವೆ. ಅದರಲ್ಲೂ 2008ರಲ್ಲಿ 37,070, 2013ರಲ್ಲಿ 57,110 ಮತ್ತು 2018ರಲ್ಲಿ 77,607 ಮತಗಳನ್ನು ಪಡೆದಿರುವ ಜೆಡಿಎಸ್ ಯಲಹಂಕದಲ್ಲಿ ಪಕ್ಷದ ಬಾವುಟ ಹಾರಿಸಲು ಚಿಂತನೆ ನಡೆಸುತ್ತಿದೆ. ಬಿಜೆಪಿಯಿಂದ ಎಸ್. ಆರ್. ವಿಶ್ವನಾಥ್ ಕಣಕ್ಕಿಳಿಯುವುದು ಖಚಿತವಾಗಿದೆ. ಆದರೆ ಕಾಂಗ್ರೆಸ್, ಜೆಡಿಎಸ್ ಅಭ್ಯರ್ಥಿಗಳು ಯಾರು? ಎಂಬುದು ಕುತೂಹಲವಾಗಿದೆ. ಕಾಂಗ್ರೆಸ್ ಟಿಕೆಟ್ ಹಂಚಿಕೆ ಹಲವು ಆಕಾಂಕ್ಷಿಗಳ ಕಾರಣ ಕಗ್ಗಂಟಾಗಿದೆ. ಆದ್ದರಿಂದ 124 ಕ್ಷೇತ್ರಗಳ ಪಟ್ಟಿಯಲ್ಲಿ ಯಲಹಂಕ ಇಲ್ಲ.
ಕಾಂಗ್ರೆಸ್ ಟಿಕೆಟ್ಗಾಗಿ ಕೇಶವ ಬಿ. ರಾಜಣ್ಣ, ನಾಗರಾಜ ಗೌಡ, ಗೋಪಾಲಕೃಷ್ಣ ಎಂ. ಎನ್., ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಲಾವಣ್ಯ ನರಸಿಂಹಮೂರ್ತಿ, ಪಿ. ಚಂದ್ರಪ್ಪ, ಗೋಪಿನಾಥ್ ಸೇರಿ 9ಕ್ಕೂ ಅಧಿಕ ಮಂದಿ ಅರ್ಜಿ ಹಾಕಿದ್ದಾರೆ. ಆಂತರಿಕ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಿ, ಟಿಕೆಟ್ ಹಂಚಿಕೆ ಮಾಡುವುದು ಸಹ ಪಕ್ಷದ ಪಾಲಿಗೆ ಸವಾಲಾಗಿದೆ. ಎಸ್. ಆರ್. ವಿಶ್ವನಾಥ್ಗೆ ಪ್ರಬಲ ಪೈಪೋಟಿ ಯಾರು? ನೀಡಬಹುದು ಎಂಬ ಲೆಕ್ಕಾಚಾರದಲ್ಲಿ ಕಾಂಗ್ರೆಸ್ ಇದೆ.
ಯಲಹಂಕ ಕ್ಷೇತ್ರದಲ್ಲಿ ವಿವಿಧ ಸಮುದಾಯದ ಜನರಿದ್ದಾರೆ. ಆದರೆ ಒಕ್ಕಲಿಗರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಆದ್ದರಿಂದ ಜೆಡಿಎಸ್ ಲೆಕ್ಕಾಚಾರವೇ ಬೇರೆಯಾಗಿದೆ. ಕಳೆದ ಬಾರಿ ಜೆಡಿಎಸ್ನ ಎ. ಎಂ. ಹನುಮಂತೇಗೌಡ 77,607 ಮತಗಳನ್ನು ಪಡೆದಿದ್ದರು. ಈ ಬಾರಿ ಪಕ್ಷವನ್ನು ಇನ್ನಷ್ಟು ಸಂಘಟಿಸಿ ಚುನಾವಣೆಗೆ ಹೋಗುವುದು ಜೆಡಿಎಸ್ ತಂತ್ರ. ನಿವೃತ್ತ ಡಿವೈಎಸ್ಪಿ ಎನ್. ಕೃಷ್ಣಪ್ಪ, ಮುನೇಗೌಡ ಅವರು ಸಹ ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ.
Yelahanka karnataka elections
| ವರ್ಷ | ಗೆದ್ದವರು | ಮತಗಳು | ಸೋತವರು | ಮತಗಳು |
| 2018 | ಎಸ್. ಆರ್. ವಿಶ್ವನಾಥ್ (ಬಿಜೆಪಿ) | 120,110 | ಎ. ಎಂ. ಹನುಮಂತೇ ಗೌಡ (ಜೆಡಿಎಸ್) | 77,607 |
| 2013 | ಎಸ್. ಆರ್. ವಿಶ್ವನಾಥ್ (ಬಿಜೆಪಿ) | 75,507 | ಬಿ. ಚಂದ್ರಪ್ಪ (ಜೆಡಿಎಸ್) | 57,110 |
| 2008 | ಎಸ್. ಆರ್. ವಿಶ್ವನಾಥ್ (ಬಿಜೆಪಿ) | 60,975 | ಬಿ. ಚಂದ್ರಪ್ಪ (ಕಾಂಗ್ರೆಸ್) | 44,953 |
ಯಲಹಂಕ ಕ್ಷೇತ್ರದ ಒಟ್ಟು ಮತದಾರರು 4,07,217. ಪುರುಷರು 2,08,075, ಮಹಿಳೆಯರು 1,99,066. ಇತರರು 76.
-
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು











Click it and Unblock the Notifications