Karnataka-Ration Card: ರೇಷನ್ ಕಾರ್ಡ್ ಬಳಕೆದಾರರಿಗೆ ಬಂಪರ್! ಇನ್ಮೇಲೆ ಮನೆ ಬಾಗಿಲಿಗೆ ಬರಲಿದೆ ಅಕ್ಕಿ
ಬಡವರ ಪಾಲಿಗೆ ಸರ್ಕಾರ ತಂದ ಯೋಜನೆಗಳಲ್ಲಿ ಅನ್ನಭಾಗ್ಯ (Anna B ಕೂಡಾ ಒಂದು. ಕಡಿಮೆ ದರದಲ್ಲಿ ಅಕ್ಕಿ, ಇನ್ನಿತರ ಸೌಲಭ್ಯಗಳನ್ನು ನೀಡುವುದು ಇದರ ಮುಖ್ಯ ಉದ್ದೇಶವಾಗಿದ್ದು, ಅದಕ್ಕಾಗಿ ಬಿಪಿಎಲ್ ಕಾರ್ಡ್ (BPL Card) ಅನ್ನೂ ಜಾರಿಗೆ ತಂದಿದೆ. ಇದೀಗ ಸರ್ಕಾರ ಬಡವರ ಪಾಲಿಗೆ ಅದೃಷ್ಟದಂತೆ, ಹಿರಿಯರ ಪಾಲಿಗೆ ದೇವರಂತೆ ಬಂದು ಮತ್ತೊಂದು ಯೋಜನೆಯನ್ನು ಜಾರಿಗೆ ತಂದಿದೆ. ಅದೇ "ಅನ್ನ ಸುವಿಧಾ ಯೋಜನೆ" (Anna Suvidha Scheme). ರೇಷನ್ ಅಂಗಡಿಯಲ್ಲಿ ಪ್ರಸ್ತುತ ದೊಡ್ಡ ಸಮಸ್ಯೆಯೆಂದರೆ, ಸರತಿ ಸಾಲು, ಮತ್ತೊಂದು ಸರ್ವರ್ ಸಮಸ್ಯೆ. ಇದರಿಂದ ಹೆಚ್ಚು ಸಮಸ್ಯೆಗೀಡಾಗೋದೆ ಹಿರಿಯ ನಾಗರಿಕರು. ಆದ್ರೆ ಇದೀಗ ಹಿರಿಯ ನಾಗರಿಕರ ಸಮಸ್ಯೆಗೆ ಪರಿಹಾರ ನೀಡಲು ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ ನೋಡಿ.

ಹೌದು, 75 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರ ಅನುಕೂಲಕ್ಕೆ ಸರಕಾರ ಮಹತ್ವದ ಕ್ರಮ ಕೈಗೊಂಡಿದೆ. ಆ ಪ್ರಕಾರ ಇನ್ಮೇಲೆ ಉಚಿತವಾಗಿ ಮನೆ ಮನೆಗೆ ಪಡಿತರ ಆಹಾರ ಪದಾರ್ಥಗಳನ್ನು ಪೂರೈಕೆಯಾಗಲಿದೆ. ಈ ಯೋಜನೆಯನ್ನು "ಅನ್ನ ಸುವಿಧಾ" ಯೋಜನೆ ಎಂದು ಹೆಸರಿಸಲಾಗಿದೆ.
ಏನಿದು ಅನ್ನ ಸುವಿಧಾ ಯೋಜನೆ?
ಹಿರಿಯ ನಾಗರಿಕರ ಅನುಕೂಲಕ್ಕಾಗಿ ಸರ್ಕಾರ ಅನ್ನಭಾಗ್ಯ ಯೋಜನೆಯ ಉಪಕ್ರಮವಾಗಿ ಅನ್ನ ಸುವಿಧಾ ಯೋಜನೆಯನ್ನು ಜಾರಿಗೆ ತಂದಿದೆ. ಆದರೆ ಪ್ರಸ್ತುತ ಅದೆಷ್ಟೋ ಹಿರಿಯ ನಾಗರಿಕರು ಒಬ್ಬಂಟಿಯಾಗಿ ಮನೆಯಲ್ಲಿ ವಾಸಿಸುತ್ತಿರುತ್ತಾರೆ. ಆದರೆ ಕೆಲವರಿಗೆ ಆರೋಗ್ಯದ ಸಮಸ್ಯೆಯಿಂದಲೂ, ಇನ್ನಿತರ ಸಮಸ್ಯೆಗಳಿಂದಲೋ ಅನ್ನಭಾಗ್ಯ ಯೋಜನೆಯಡಿ ಸಬ್ಸಿಡಿ ದರದಲ್ಲಿ ಅಕ್ಕಿ, ಇನ್ನಿತರ ಆಹಾರ ಪದಾರ್ಥಗಳನ್ನು ಪಡೆಯಲು ಸಾಧ್ಯವಾಗುವುದಿಲ್ಲ. ಅದೇ ಕಾರಣದಿಂದ ಇದೀಗ ಅನ್ನ ಸುವಿಧಾ ಯೋಜನೆಯಡಿ ಸರ್ಕಾರ, ಅಶಕ್ತರಾದ ಫಲಾನುಭವಿಗಳ ಮನೆ ಬಾಗಿಲಿಗೆ ಈ ಅನ್ನಭಾಗ್ಯ ಸೌಲಭ್ಯವನ್ನು ಒದಗಿಸಲು ಮುಂದಾಗಿದೆ.
75 ವರ್ಷ ಅಥವಾ ಅದಕ್ಕಿಂತ ಮೇಲ್ಪಟ್ಟ ಹಿರಿಯ ನಾಗರಿಕರು ಮಾತ್ರ ಇರುವ ಕುಟುಂಬಗಳಿಗೆ ಸ್ಥಳೀಯ ನ್ಯಾಯಬೆಲೆ ಅಂಗಡಿಯಬರು ಪಡಿತರ ಸೌಲಭ್ಯವನ್ನು ಮನೆ ಬಾಗಿಲಿಗೆ ತಂದು ಕೊಡುತ್ತಾರೆ. ಇದರಿಂದ ಹಿರಿಯ ನಾಗರಿಕರು ಹೋಗಿ ನ್ಯಾಯಬೆಲೆ ಅಂಗಡಿ ಮುಂದೆ ಗಂಟೆಗಟ್ಟಲೆ ನಿಲ್ಲುವುದು ತಪ್ಪಲಿದೆ.
2025ರ ಮೇ ತಿಂಗಳಲ್ಲಿ ಜಾರಿಗೆ ಬಂದ ಈ ಸೇವೆ ಸದ್ಯ ಜಿಲ್ಲೆ ಜಿಲ್ಲೆಗಳಲ್ಲಿ ಅನುಷ್ಠಾನಕ್ಕೆ ಮುಂದಾಗಿದೆ. ಅಲ್ಲದೇ ಮನೆ ಬಾಗಿಲಿಗೆ ಸೇವೆ ನೀಡುವ ನ್ಯಾಯಬೆಲೆ ಅಂಗಡಿ ಮಾಲೀಕರಿಗೆ, ಪ್ರತೀ ಕುಟುಂಬಕ್ಕೆ ಸರ್ಕಾರವು 50 ರೂ. ಪಾವತಿ ಮಾಡುತ್ತದೆ. ಅಲ್ಲದೇ ಈ ಯೋಜನೆಯ ಫಲಾನುಭವಿಗಳು ಆಗಬೇಕೆಂದರೆ, ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕಾಗುತ್ತದೆ.
ಮಂಡ್ಯ ಜಿಲ್ಲೆಯಲ್ಲಿ ಆರಂಭ
ಇದೀಗ ಮಂಡ್ಯ ಜಿಲ್ಲೆಯಲ್ಲಿ ಸರ್ಕಾರದ ಅನ್ನ ಸುವಿಧಾ ಯೋಜನೆಯಡಿ 75 ವರ್ಷಕ್ಕಿಂತ ಮೇಲ್ಪಟ್ಟ ಪಡಿತರ ಚೀಟಿ ಹೊಂದಿರುವ ಒಂಟಿ ಸದಸ್ಯರ ಕುಟುಂಬಗಳಿಗೆ ಶೀಘ್ರದಲ್ಲೇ ಮನೆ ಬಾಗಿಲಿಗೆ ಪಡಿತರ ಆಹಾರ ಪದಾರ್ಥಗಳನ್ನು ನೀಡಲು ಮುಂದಾಗಲಿದೆ ಎಂದು ಮಂಡ್ಯ ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್. ನಂದಿನಿ ತಿಳಿಸಿದ್ದಾರೆ.
Credit: Goodreturns
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications