‘ಕಾವೇರಿಕನ್ನಡ ಸಂಘ’ದ ಔತಣಕೂಟದಲ್ಲಿ ಎಲ್ಲರೊಳಗೊಂದಾದ ಎಚ್.ಡಿ. ದೇವೇಗೌಡರು
ವಾಷಿಂಗ್ಟನ್ ಡಿಸಿ : ಕನ್ನಡ ಸಂಸ್ಕೃತಿಯನ್ನು ದೂರದ ಅಮೇರಿಕಾದಲ್ಲಿ ಮರು ಸೃಷ್ಟಿಸುತ್ತಿರುವ ಇಲ್ಲಿ ನ ಅನಿವಾಸಿ ಕನ್ನಡಿಗರನ್ನು ಭಾರತದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅಭಿನಂದಿಸಿದ್ದಾರೆ.
ಪ್ರಸ್ತುತ ಅಮೇರಿಕಾ ಪ್ರವಾಸದಲ್ಲಿರುವ ದೇವೇಗೌಡರು ಜುಲೈ 18 ರಂದು ತಮ್ಮ ಗೌರವಾರ್ಥ ‘ಕಾವೇರಿ ಕನ್ನಡ ಸಂಘ’ ಏರ್ಪಡಿಸಿದ್ದ ಔತಣ ಕೂಟದಲ್ಲಿ ಪಾಲ್ಗೊಂಡು ಇಲ್ಲಿನ ಕನ್ನಡ ಚಟುವಟಿಕೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಮುನ್ನ ‘ಶ್ರೀ ಶಿವ ವಿಷ್ಣು ಮಂದಿರ’ಕ್ಕೆ ಭೇಟಿ ನೀಡಿದ್ದ ಮಾಜಿ ಪ್ರಧಾನಿಗಳು, ಮಂದಿರದ ಭವ್ಯತೆ ಹಾಗೂ ಭಾರತೀಯ ಸಂಸ್ಕೃತಿಯನ್ನು ಉಳಿಸಲು ದುಡಿಯುತ್ತಿರುವ ಪ್ರತಿಯಾಬ್ಬರ ಶ್ರಮವನ್ನು ಕೊಂಡಾಡಿದರು.
ಅಚ್ಚುಕಟ್ಟಾಗಿ ಪ್ರಕಟವಾಗಿದ್ದ ‘ಕಾವೇರಿ ಸುದ್ದಿಪತ್ರ’ವನ್ನು ನೋಡಿ ಆಶ್ಚರ್ಯಾನಂದ ವ್ಯಕ್ತಪಡಿಸಿದ ದೇವೇಗೌಡರು, ಇಲ್ಲಿನ ಕನ್ನಡಿಗರೊಂದಿಗೆ ಬೆರೆಯುವ ಅಪರೂಪದ ಅವಕಾಶವನ್ನು ಕಲ್ಪಿಸಿದ್ದಕ್ಕಾಗಿ ಕಾವೇರಿ ಕನ್ನಡ ಸಂಘದ ಅಧ್ಯಕ್ಷರು ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರಿಗೆ ಧನ್ಯವಾದ ಅರ್ಪಿಸಿದರು.
ಪ್ರತಿಯಾಬ್ಬರೊಂದಿಗೂ ಆತ್ಮೀಯವಾಗಿ ಬೆರೆತು ಮಾತನಾಡಿದ ಮಾಜಿ ಪ್ರಧಾನಿಗಳು ನೆರೆದಿದ್ದ ಸಭಿಕರಿಗೆ ಔತಣಕೂಟವನ್ನು ಅವಿಸ್ಮರಣೀಯವಾಗಿಸಿದರು. ಕಾವೇರಿ ಕನ್ನಡ ಸಂಘದ ಅಧ್ಯಕ್ಷ ನಾಗಶಂಕರ್ ಅವರು ದೇವೇಗೌಡ ಹಾಗೂ ಭಾರತೀಯ ರಾಯಭಾರಿ ಕಚೇರಿಯ ಗಣ್ಯರನ್ನು ಔತಣಕೂಟಕ್ಕೆ ಸ್ವಾಗತಿಸಿ ಮಾತನಾಡಿದರೆ, ದೇವೇಗೌಡರನ್ನು ಕುರಿತು ‘ಅಕ್ಕ’ ಬಳಗದ ಅಧ್ಯಕ್ಷ ಅಮರ್ನಾಥ್ ಗೌಡ ಮಾತನಾಡಿದರು. ಶಶಿಕಲಾ ಚಂದ್ರಶೇಖರ್ ವಂದನಾರ್ಪಣೆ ಮಾಡಿದರು.
(ಇನ್ಫೋ ವಾರ್ತೆ)
ಮುಖಪುಟ / ಸಾಹಿತ್ಯ ಸೊಗಡು
-
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Asha Bosle Net Worth: ದೇಶ-ವಿದೇಶಗಳಲ್ಲಿ ರೆಸ್ಟೊರೆಂಟ್ಸ್, ನೂರಾರು ಕೋಟಿ ಒಡತಿ ಆಶಾ ಭೋಸ್ಲೆ ಒಟ್ಟು ಆಸ್ತಿ ವಿವರ ಹೀಗಿದೆ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ












Click it and Unblock the Notifications