ಸತ್ಯ ಮಿಥ್ಯಗಳ ನಡುವೆ ಸಿಲುಕಿಹುದು ಈ ಮುಸ್ಸಂಜೆ !
- ಶೈಲಜಾ ವಲಕಟ್ಟೆ , ನ್ಯೂಜೆರ್ಸಿ
[email protected]
ದಿನದ ವಿವಿಧ ಹಂತ ಗತಿಗಳನ್ನು ಆಳವಾಗಿ ನೋಡಿದರೆ ಜೀವನದ ‘ಬಾಲ್ಯ’ವು ದಿನದ ‘ಮುಂಜಾನೆ’ಯಾದರೆ, ‘ಯೌವನ’ವನ್ನು ‘ಮಧ್ಯಾಹ್ನ’ವೆನ್ನಬಹುದು. ‘ಮುಪ್ಪು, ಮುದಿತನ’ವನ್ನು ಬಾಳಿನ ‘ಸಂಜೆ’ ಎನ್ನಬಹುದು ಅಲ್ವೇ?
ಇಲ್ಲಿ ಒಂದು ವಿಷಯ ಗಮನಿಸಿದಿರಾ ? ಮನುಷ್ಯನ ಬದುಕಿನಲ್ಲಿ ‘ಯೌವನ’ ವು ರಂಗು ರಂಗಿನ ಭಾಗವಾದರೆ, ದಿನದ ‘ಮಧ್ಯಾಹ್ನ’ ಬಿಸಿಲು ಧಗೆಯಿಂದ ಕೂಡಿರುವುದು! ಅದೇ ‘ಸಂಜೆ’ ವಿಧವಿಧದ ಬಣ್ಣ ಚೆಲ್ಲಿ, ತಂಪು ತಂಗಾಳಿಯನ್ನು ಬೀಸಿ ಮನಕ್ಕೆ ಮುದ ನೀಡುವುದು. ಎಂಥಾ ವೈಪರೀತ್ಯವಿದು ?
ಬೆಳಕು - ಕತ್ತಲೆಗಳ ವಾಸ್ತವಿಕತೆಗಳ ನಡುವೆ ಬರುವ ಈ ತಂಪಿನ ಮುಸ್ಸಂಜೆ ಒಂದು ಭ್ರಮಾಲೋಕವಿದ್ದಂತೆ. ಹೀಗೆಯೇ ಅಲ್ಲವೇ ನಮ್ಮ ಜೀವನ ಕೂಡಾ? ಬದುಕಲ್ಲಿ ಹುಟ್ಟು-ಸಾವು, ಆದಿ-ಅಂತ್ಯಗಳು ವಾಸ್ತವ-ನಿಜವಾದರೂ, ಇವೆರಡರ ನಡುವೆ ಮನುಜನದು ಕನಸುಗಳ ನನಸು ಮಾಡುವತ್ತ ನಡೆದಾಟ, ಅಲೆದಾಟ... ಅದಕ್ಕಾಗಿಯೇ ಕೆಲವೊಮ್ಮೆ ಹೊಡೆದಾಟ...
‘ಸತ್ಯ ಮಿಥ್ಯಗಳ ನಡುವೆ ಸಿಲುಕಿಹುದು ದಿನ ಬದುಕು
ಕೈಗೆಟುಕದ ನಕ್ಷತ್ರಕೆ ಬೇಡಿಹುದು ಮನ ಸಹಜ
ನಕ್ಷತ್ರಿಕ ಬಿಡನಿವನು ಆಸೆಗಳ ಬೆಂಬತ್ತಿ
ಮಾಯಾ ಮರೀಚಿಕೆಗೆ ತಹತಹಿಸಿ ತೊಳಲಾಡೆ
ನಿನಗೆಲ್ಲಿ ನೆಮ್ಮದಿಯು ಹೇಳು ಮನುಜ?’
ಕಣ್ಣಿಗೆ ತೋರುವಂಥವು, ಅನುಭವಕ್ಕೆ ಬರುವಂಥವು ಮಾತ್ರ ನಿಜ, ಉಳಿದೆಲ್ಲವೂ ಸುಳ್ಳು ಅಂದರೆ ಅದೂ ಅರ್ಧ ಸತ್ಯ- ನಾಣ್ಯದ ಒಂದು ಮುಖವಿದ್ದಂತೆ. ಇನ್ನೊಂದು ಮುಖದ ಪರಿಚಯವಾಗುವುದು ಕಣ್ಣಿಗೆ ಕಾಣಲಾರದ ‘ಸತ್ಯ’ ವಿರಬಹುದೇ ?
ಸ್ವಾಮಿ ಸಂತರು ಬುಧ್ಧಿಜೀವಿಗಳು ಕಂಡುಕೊಂಡ ಈ ಜ್ಞಾನಸತ್ಯದ ಬಗ್ಗೆ ಮಾತಾಡುವುದು ಖಂಡಿತಾ ಈ ಲೇಖನದ ಉದ್ದೇಶವಲ್ಲ . ಜೀವನದ ಔನ್ನತ್ಯದ ಆಳವನ್ನಿರಿಯಲು ವಾಸ್ತವಿಕತೆ - ಭ್ರಮೆ ಇವೆರಡರ ಅರಿವು ಬೇಕೇ ಬೇಕು ಎಂದು ವಿವರಿಸುವ ಪ್ರಯತ್ನವೇ ಈ ಅಕ್ಷರ ರೂಪ. ‘ಇರುವುದೆಲ್ಲವ ಬಿಟ್ಟು ಇರದುದರೆಡಗೆ ನಡೆವುದೆ ಜೀವನ ’ ಎಂಬ ಚಂಡೆಮದ್ದಳೆಯ ಕವಿ ಗೋಪಾಲಕೃಷ್ಣ ಅಡಿಗರ ‘ಮೋಹನಮುರಳಿ’ ಪದ್ಯದ ಸಾಲುಗಳು ಒಂದರ್ಥದಲ್ಲಿ ಇದೇ ವಿಷಯದ ಮರ್ಮವ ಸಾರುತ್ತವೆಂದು ನನ್ನನಿಸಿಕೆ.
ಸತ್ಯದ ಬೆಲೆಯನ್ನಿರಿಯಲು ಸುಳ್ಳು ಯಾವುದು ಎಂದು ತಿಳಿವುದು ಎಷ್ಟು ಮುಖ್ಯವೋ, ನ್ಯಾಯ - ಅನ್ಯಾಯ, ಬೆಳಕು - ಕತ್ತಲೆ, ವಾಸ್ತವ - ಭ್ರಮೆ ... ಇತ್ಯಾದಿಯೆಲ್ಲವೂ ಸರಿಸಮಾನತೆಯ ಎರಡು ಅವಿಭಾಜ್ಯ ಮುಖಗಳು ಅನ್ನೋದು ದಿಟವಲ್ವೇ ?
ಕಾರು ಮನೆ ಮುಂದೆ ನಿಂತಾಗಲೇ ನನ್ನ ಯೋಚನಾಧಾರೆಗೆ ಕ್ಷಣಿಕ ಕಾಲದ ಕಡಿವಾಣ ಬಿದ್ದದ್ದು ! ಮತ್ತೆ ಭ್ರಮೆಯಿಂದ ವಾಸ್ತವಿಕತೆಯ ಕಡೆ ಪಯಣ... ಮರಳಿ ಕನಸುಗಳ ಗೂಡಿಗೆ..
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications