ಅಮೆರಿಕ ಬಾನುಲಿಯಲ್ಲಿ ಡಾ. ಗುರುಲಿಂಗ ಕಾಪಸೆ
ಖ್ಯಾತ ಸಾಹಿತಿ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಡಾ. ಗುರುಲಿಂಗ ಕಾಪಸೆ ಅವರೊಂದಿಗೆ ಕನ್ನಡದಲ್ಲಿ ನಡೆಸಿದ ಸಂದರ್ಶನ ಸ್ಯಾನ್ಫ್ರಾನ್ಸಿಸ್ಕೊದ ಎಫ್ ಎಂ ರೇಡಿಯೊದಲ್ಲಿ ಆಗಸ್ಟ್ 6ರಂದು ಬೆಳಿಗ್ಗೆ ಬಿತ್ತರವಾಗಲಿದೆ. ಕನ್ನಡದ ಕವಿಗಳು, ಕವಿತೆಗಳು ಮತ್ತು ಭಾವಗೀತೆಗಳ ಬಗ್ಗೆ ವಿಚಾರ ವಿನಿಮಯ ಮಾಡುವುದು ಇದರ ಉದ್ದೇಶ. ಕೇಳಲು ಮರೆಯದಿರಿ.
ಕಾರ್ಯಕ್ರಮದ ವಿವರ ಕೆಳಗಿನಂತಿದೆ:
ಬಾನುಲಿ ಕೇಂದ್ರ: ಸ್ಟಾನ್ಫರ್ಡ್ KZSU 90.1 FM [ಕ್ಯಾಲೀಫೋರ್ನಿಯ ಬೇ ಏರಿಯ]
ಇಂಟರ್ನೆಟ್ ಮೂಲಕ: http://www.itsdiff.com
ದಿನಾಂಕ: ಆಗಸ್ಟ್ 6 2008, ಬುಧವಾರ
ಸಮಯ: ಬೆಳಗ್ಗೆ 7.30ರಿಂದ 8.30ರವರೆಗೆ. (ಕ್ಯಾಲಿಫೋರ್ನಿಯ ಸಮಯ) [7.30 AM to 8.30 AM PST]
ನಿರ್ವಾಹಕರು: ಮಧು ಕೃಷ್ಣಮೂರ್ತಿ
ಈ ಕಾರ್ಯಕ್ರಮವನ್ನು ನೀವು ಅಂತರ್ಜಾಲದ ಮೂಲಕ ಪ್ರಪಂಚದ ಯಾವುದೇ ಮೂಲೆಯಿಂದಲೂ ಕೇಳಬಹುದು. ನೇರ ಪ್ರಸಾರದ ಈ ಕಾರ್ಯಕ್ರಮದಲ್ಲಿ ದೂರವಾಣಿಯ ಮೂಲಕ ಕರೆ ಮಾಡಿ ನೀವೂ ಸಹ ಭಾಗವಹಿಸಿ. ಹಿಂದೆ ಪ್ರಸಾರವಾದ ಕಾರ್ಯಕ್ರಮಗಳನ್ನು ಇಲ್ಲಿ ಕೇಳಬಹುದು : http://www.itsdiff.com/Kannada.html
ಗುರುಲಿಂಗ ಕಾಪಸೆಯವರ ಬಗ್ಗೆ
ಜೀವನ ಪರಿಚಯ, ಮಕ್ಕಳ ಸಾಹಿತ್ಯ, ಅನುವಾದ, ವಿಮರ್ಶೆ, ಸಂಪಾದನೆ ವಿಭಾಗದಲ್ಲಿ ಅಪಾರ ಸಾಹಿತ್ಯ ಕೃಷಿ ಮಾಡಿರುವ ಡಾ. ಗುರುಲಿಂಗ ಕಾಪಸೆಯವರು ಅಕ್ಷರಯೋಗಿ. ಅವರು ಜನಿಸಿದ್ದು ಬಿಜಾಪುರ ಜಿಲ್ಲೆಯ ಇಂಡಿ ತಾಲೂಕಿನ ಹಿರೇಲೋಣಿ ಗ್ರಾಮದಲ್ಲಿ 1928ರ ಏಪ್ರಿಲ್ 2ರಂದು.
ಡಾ. ಗುರುಲಿಂಗ ಕಾಪಸೆಯುವರದು ಸಾಹಿತ್ಯ ದುಡಿಮೆಯ ಜೊತೆಗೆ ಶಿಕ್ಷಣ ಕ್ಷೇತ್ರದಲ್ಲಿ ನಾಲ್ಕು ದಶಕಗಳ ಕಾಲದ ಅವಿರತ ದುಡಿಮೆ. ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಬಿಎ ಮತ್ತು ಬಂಗಾರದ ಪದಕದ ಸಹಿತ ಸ್ನಾತಕೋತ್ತರ ಪದವಿ ಗಳಿಸಿರುವ ಕಾಪಸೆಯವರು ಇದೇ ವಿಶ್ವವಿದ್ಯಾಲಯದಲ್ಲಿ ಕನ್ನಡದಲ್ಲಿ ಪಿ.ಎಚ್ ಡಿ ಕೂಡ ಮಾಡಿದ್ದಾರೆ. ನಾಲ್ಕು ದಶಕಗಳ ಕಾಲ ಬೆಳಗಾವಿಯ ಕರ್ನಾಟಕ ವಿಶ್ವವಿದ್ಯಾಲಯದ ಸ್ನಾತಕೋತ್ತರ ಕೇಂದ್ರದಲ್ಲಿ ಮೇಷ್ಟ್ರು, ಪ್ರೊಫೆಸರಾಗಿ ವಿದ್ಯಾರ್ಥಿಗಳ ಜ್ಞಾನದಾಹವನ್ನು ಇಂಗಿಸಿದ್ದಾರೆ. ಇಲ್ಲಿಯೇ ಅವರು ಆಡಳಿತಾಧಿಕಾರಿಯಾಗಿಯೂ ಸೇವೆ ಸಲ್ಲಿಸಿದ್ದಾರೆ. ಇದರೊಂದಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿಯೂ ಬೆಂಗಳೂರಿನೊಂದಿಗೆ ನಂಟಸ್ತನ ಕಾಪಸೆಯವರು ಹೊಂದಿದ್ದಾರೆ.
ಕಾಪಸೆಯವರು ಒಟ್ಟು 50ಕ್ಕೂ ಹೆಚ್ಚು ಪುಸ್ತಕಗಳನ್ನು ಬರೆದಿದ್ದಾರೆ ಮತ್ತು ಸಂಪಾದಿಸಿದ್ದಾರೆ. ಸಾಹಿತ್ಯಕ್ಕೆ ಸಂಬಂಧಿಸಿದ 300ಕ್ಕೂ ಹೆಚ್ಚಿನ ಲೇಖನಗಳು ಇಲ್ಲಿಯವರೆಗೆ ಪ್ರಕಟವಾಗಿವೆ. ಮಧುರಚೆನ್ನ, ಬೇಂದ್ರೆ-ಮಧುರಚೆನ್ನ ಸಖ್ಯಯೋಗ, ಸಾಹಿತ್ಯ ಪ್ರಬಂಧ, ಅಕ್ಕಮಹಾದೇವಿ, ಬಸವೇಶ್ವರ, ಶ್ರೀ ಅರವಿಂದರು ಮತ್ತು ತಪೋವನದ ತಪಸ್ವಿ ಕಾಪಸೆಯವರ ಪ್ರಮುಖ ಕೃತಿಗಳು. ಪಾರಮಾರ್ಥ ಗೀತಾಪ್ರವಚನ, ಭವ್ಯಮಾನವ ಕಾವ್ಯದರ್ಶನ, ಚಾಮರಸ, ಆತ್ಮಶೋಧ (ಮಧುರಚೆನ್ನರ ಸಮಗ್ರ ಸಾಹಿತ್ಯ ಶೋಧ), ಕನ್ನಡ ಮರಾಠಿ ಸಾಹಿತ್ಯ ಬಾಂಧವ್ಯ ಮತ್ತು ಚೆಂಬೆಳಕು ಅವರ ಪ್ರಮುಖ ಸಂಪಾದಿತ ಕೃತಿಗಳು. ಇದೇ ನಿಜವಾದ ಮೂರ್ತಿಪೂಜೆ ಮತ್ತು ಇದೇ ನಿಜವಾದ ಧರ್ಮ (ಮರಾಠಿಯಿಂದ ಕನ್ನಡಕ್ಕೆ) ಮತ್ತು ಬಸವೇಶ್ವರಾಂಚಿ ವಚನ (ಕನ್ನಡದಿಂದ ಮರಾಠಿಗೆ) ಅನುವಾದಗೊಂಡ ಕೃತಿಗಳು.
ಅನೇಕ ಪ್ರಶಸ್ತಿಗಳು ಕೂಡ ಅವರನ್ನು ಹುಡುಕಿಕೊಂಡು ಬಂದಿವೆ. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ ಮತ್ತು ಫೆಲೋಷಿಪ್, ಮಾಳವಾಡ ಪ್ರಶಸ್ತಿ, ಆನಂದಕಂದ ಪ್ರಶಸ್ತಿ, ವರದರಾಜ ಆದ್ಯ ಪ್ರಶಸ್ತಿಗಳಿಗೆ ಕಾಪಸೆಯವರು ಭಾಜನರಾಗಿದ್ದಾರೆ.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications