ಗಲ್ಫ್ ಕನ್ನಡಿಗರ ಹಿಯಾಳಿಸಿದ ಮುಖ್ಯಮಂತ್ರಿ ಚಂದ್ರು

"ಗಲ್ಫ್ ರಾಷ್ಟ್ರಗಳಲ್ಲಿ ನೆಲೆಸಿರುವ ಅನಿವಾಸಿ ಕನ್ನಡಿಗರು ಕರ್ನಾಟಕಕ್ಕೆ, ಕನ್ನಡಿಗರಿಗೆ ಸಾವಿರಾರು ಕೋಟಿ ರು. ಹಣವನ್ನು ತಲುಪಿಸಿದ್ದಾರೆ. ಆದರೆ, ರಾಜ್ಯ ಸರ್ಕಾರ ಇದಕ್ಕೆ ಸ್ಪಂದಿಸುತ್ತಿಲ್ಲ. ಅನಿವಾಸಿಗಳ ಅಭ್ಯುದಯ ನಮ್ಮ ಅಭ್ಯುದಯ ಅಂದುಕೊಂಡು ರಾಜ್ಯ ಸರ್ಕಾರ 100 ಕೋಟಿ ರು. ಹಣವನ್ನು ಅನಿವಾಸಿ ಕನ್ನಡಿಗರಿಗೆ ನೀಡಿದರೆ, ಅನಿವಾಸಿಗಳ ಕೊಡುಗೆಯೂ ಇನ್ನೂ ಹೆಚ್ಚುತ್ತದೆ" ಎಂದು ಹೇಳಿದ್ದಕ್ಕೆ ಪ್ರತಿಯಾಗಿ ಮುಖ್ಯಮಂತ್ರಿ ಮೇಲಿನಂತೆ ಪ್ರತಿಕ್ರಿಯಿಸಿದ್ದಾರೆ.
ಚಂದ್ರು ಹೇಳಿಕೆಯಿಂದ ಸೇರಿದ್ದ ಪ್ರೇಕ್ಷಕರು ಮತ್ತು ಸಂಘಟಕರು ಬೇಸರ ವ್ಯಕ್ತಪಡಿಸಿದ್ದಾರೆ. ನಂತರ ಸಮಾರೋಪ ಸಮಾರಂಭದಲ್ಲಿ ಚಂದ್ರು ಭಾಷಣ ಮಾಡುತ್ತ, ಅನಿವಾಸಿಗಳ ಅಹವಾಲನ್ನು ಸರ್ಕಾರದೊಂದಿಗೆ ಚರ್ಚಿಸುತ್ತೇನೆ ಎಂದು ಹೇಳಿ ಬೇಸರದ ಭಾವವನ್ನು ಸ್ವಲ್ಪ ಕಡಿಮೆ ಮಾಡಿದರು. ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಬೆಂಗಳೂರು ಈ ಸಮ್ಮೇಳನವನ್ನು ಪ್ರಾಯೋಜಿಸಿತ್ತು.
ಸಮ್ಮೇಳನದ ಅಂಗವಾಗಿ ಎರಡನೇ ದಿನ 'ಅನಿವಾಸಿ ಕನ್ನಡಿಗರು/ವಿದೇಶದಲ್ಲಿ ಕನ್ನಡಿಗರು' ಗೋಷ್ಠಿಯನ್ನು ಏರ್ಪಡಿಸಲಾಗಿತ್ತು. ವಿ.ಟಿ. ಶ್ರೀನಿವಾಸ್, ನಿಕಟಪೂರ್ವ ಅಧ್ಯಕ್ಷರು ಸಿಂಗಾಪುರ ಕನ್ನಡ ಸಂಘ ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಚರ್ಚೆಯಲ್ಲಿ ಅನಿವಾಸಿ ಕನ್ನಡಿಗರಾದ (ಎನ್.ಆರ್.ಕ) ಕುಮಾರ್ ಕುಂಟಿಕಾನ ಮಠ, ಇಂಗ್ಲೆಂಡ್, ವೀರೇಂದ್ರ ಬಾಬು, ದುಬೈ, ರಮೇಶ್ ಮಂಜೇಶ್ವರ, ಬಹ್ರೈನ್, ಐಯರಾಜ್, ಮಸ್ಕತ್, ಪಿ.ಎಸ್. ಪೈ, ಕತಾರ್ ರವರು ಭಾಗವಸಿದ್ದರು.
ಚರ್ಚೆಯಲ್ಲಿ ಭಾಗವಸಿದ್ದ ಕನ್ನಡಿಗರು ತಮ್ಮ ಕುಂದುಕೊರತೆಗಳನ್ನು ಎಲ್ಲರಿಗೂ ಮನಮುಟ್ಟುವ ರೀತಿಯಲ್ಲಿ ಹೇಳಿದರು. ಸುಮಾರು 20 ವರ್ಷಗಳ ಅವಧಿಯಲ್ಲಿ ಕರ್ನಾಟಕಕ್ಕೆ ಸಾವಿರಾರು ಕೋಟಿ ಹಣವನ್ನು ಹಲವಾರು ವಿಧದಲ್ಲಿ ಪ್ರಪಂಚದ ಹಲವಾರು ದೇಶದಲ್ಲಿ ನೆಲೆಸಿರುವ ಅನಿವಾಸಿ ಕನ್ನಡಿಗರು ತಲುಪಿಸಿದ್ದಾರೆ. ಆದರೆ ಕರ್ನಾಟಕ ಸರಕಾರ ಅನಿವಾಸಿ ಕನ್ನಡಿಗರು ತಮ್ಮ ರಾಜ್ಯದ ಆಸ್ತಿ ಅವರ ಅಭ್ಯುದಯ ನಮ್ಮ ಅಭ್ಯುದಯ ಎಂದು ಅರಿತು ಸುಮಾರು 100 ಕೋಟಿ ಹಣವನ್ನು ಅನಿವಾಸಿ ಕನ್ನಡಿಗರ ನೆರವಿಗೆ ನೀಡಿದಲ್ಲಿ ಮತ್ತೆ ಅನಿವಾಸಿ ಕನ್ನಡಿಗರ ಕೊಡುಗೆ ಹೆಚ್ಚಾಗುತ್ತದೆ, ಯಡಿಯೂರಪ್ಪನವರು ಹೇಳಿದಂತೆ ಕರ್ನಾಟಕ ಮುಂದುವರಿಯುತ್ತದೆ ಎಂಬ ಕಿವಿಮಾತು ಇಂಗ್ಲೆಂಡಿನಿಂದ ಆಗಮಿಸಿದ್ದ ಕುಂಟಿಕಾನಮಠ ಕುಮಾರ್ರವರು ಹೇಳಿದರು.
ಆಗ ಖ್ಯಾತ ಸಾಹಿತಿ ವಿಧಾನ ಪರಿಷತ್ ಸದಸ್ಯ, ಡಾ. ಚಂದ್ರಶೇಖರ್ ಕಂಬಾರ್ ಸ್ಪಂದಿಸುತ್ತಾ, ಒಳ್ಳೆಯ ಗಹನವಾದ ವಿಚಾರ. ನೀವು ಬರವಣಿಗೆಯಲ್ಲಿ ಕೊಡಿ ಎಂದರು.
ಗಲ್ಫ್ ಕನ್ನಡಿಗ : ಗಲ್ಫ್ ನಲ್ಲೊಂದು ಕರ್ನಾಟಕದ ಪ್ರತಿಬಿಂಬ
ಪೂರಕ ಓದಿಗೆ
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications