ಗಲ್ಫ್ ಕನ್ನಡಿಗರ ಹಿಯಾಳಿಸಿದ ಮುಖ್ಯಮಂತ್ರಿ ಚಂದ್ರು

"ಗಲ್ಫ್ ರಾಷ್ಟ್ರಗಳಲ್ಲಿ ನೆಲೆಸಿರುವ ಅನಿವಾಸಿ ಕನ್ನಡಿಗರು ಕರ್ನಾಟಕಕ್ಕೆ, ಕನ್ನಡಿಗರಿಗೆ ಸಾವಿರಾರು ಕೋಟಿ ರು. ಹಣವನ್ನು ತಲುಪಿಸಿದ್ದಾರೆ. ಆದರೆ, ರಾಜ್ಯ ಸರ್ಕಾರ ಇದಕ್ಕೆ ಸ್ಪಂದಿಸುತ್ತಿಲ್ಲ. ಅನಿವಾಸಿಗಳ ಅಭ್ಯುದಯ ನಮ್ಮ ಅಭ್ಯುದಯ ಅಂದುಕೊಂಡು ರಾಜ್ಯ ಸರ್ಕಾರ 100 ಕೋಟಿ ರು. ಹಣವನ್ನು ಅನಿವಾಸಿ ಕನ್ನಡಿಗರಿಗೆ ನೀಡಿದರೆ, ಅನಿವಾಸಿಗಳ ಕೊಡುಗೆಯೂ ಇನ್ನೂ ಹೆಚ್ಚುತ್ತದೆ" ಎಂದು ಹೇಳಿದ್ದಕ್ಕೆ ಪ್ರತಿಯಾಗಿ ಮುಖ್ಯಮಂತ್ರಿ ಮೇಲಿನಂತೆ ಪ್ರತಿಕ್ರಿಯಿಸಿದ್ದಾರೆ.
ಚಂದ್ರು ಹೇಳಿಕೆಯಿಂದ ಸೇರಿದ್ದ ಪ್ರೇಕ್ಷಕರು ಮತ್ತು ಸಂಘಟಕರು ಬೇಸರ ವ್ಯಕ್ತಪಡಿಸಿದ್ದಾರೆ. ನಂತರ ಸಮಾರೋಪ ಸಮಾರಂಭದಲ್ಲಿ ಚಂದ್ರು ಭಾಷಣ ಮಾಡುತ್ತ, ಅನಿವಾಸಿಗಳ ಅಹವಾಲನ್ನು ಸರ್ಕಾರದೊಂದಿಗೆ ಚರ್ಚಿಸುತ್ತೇನೆ ಎಂದು ಹೇಳಿ ಬೇಸರದ ಭಾವವನ್ನು ಸ್ವಲ್ಪ ಕಡಿಮೆ ಮಾಡಿದರು. ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಬೆಂಗಳೂರು ಈ ಸಮ್ಮೇಳನವನ್ನು ಪ್ರಾಯೋಜಿಸಿತ್ತು.
ಸಮ್ಮೇಳನದ ಅಂಗವಾಗಿ ಎರಡನೇ ದಿನ 'ಅನಿವಾಸಿ ಕನ್ನಡಿಗರು/ವಿದೇಶದಲ್ಲಿ ಕನ್ನಡಿಗರು' ಗೋಷ್ಠಿಯನ್ನು ಏರ್ಪಡಿಸಲಾಗಿತ್ತು. ವಿ.ಟಿ. ಶ್ರೀನಿವಾಸ್, ನಿಕಟಪೂರ್ವ ಅಧ್ಯಕ್ಷರು ಸಿಂಗಾಪುರ ಕನ್ನಡ ಸಂಘ ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಚರ್ಚೆಯಲ್ಲಿ ಅನಿವಾಸಿ ಕನ್ನಡಿಗರಾದ (ಎನ್.ಆರ್.ಕ) ಕುಮಾರ್ ಕುಂಟಿಕಾನ ಮಠ, ಇಂಗ್ಲೆಂಡ್, ವೀರೇಂದ್ರ ಬಾಬು, ದುಬೈ, ರಮೇಶ್ ಮಂಜೇಶ್ವರ, ಬಹ್ರೈನ್, ಐಯರಾಜ್, ಮಸ್ಕತ್, ಪಿ.ಎಸ್. ಪೈ, ಕತಾರ್ ರವರು ಭಾಗವಸಿದ್ದರು.
ಚರ್ಚೆಯಲ್ಲಿ ಭಾಗವಸಿದ್ದ ಕನ್ನಡಿಗರು ತಮ್ಮ ಕುಂದುಕೊರತೆಗಳನ್ನು ಎಲ್ಲರಿಗೂ ಮನಮುಟ್ಟುವ ರೀತಿಯಲ್ಲಿ ಹೇಳಿದರು. ಸುಮಾರು 20 ವರ್ಷಗಳ ಅವಧಿಯಲ್ಲಿ ಕರ್ನಾಟಕಕ್ಕೆ ಸಾವಿರಾರು ಕೋಟಿ ಹಣವನ್ನು ಹಲವಾರು ವಿಧದಲ್ಲಿ ಪ್ರಪಂಚದ ಹಲವಾರು ದೇಶದಲ್ಲಿ ನೆಲೆಸಿರುವ ಅನಿವಾಸಿ ಕನ್ನಡಿಗರು ತಲುಪಿಸಿದ್ದಾರೆ. ಆದರೆ ಕರ್ನಾಟಕ ಸರಕಾರ ಅನಿವಾಸಿ ಕನ್ನಡಿಗರು ತಮ್ಮ ರಾಜ್ಯದ ಆಸ್ತಿ ಅವರ ಅಭ್ಯುದಯ ನಮ್ಮ ಅಭ್ಯುದಯ ಎಂದು ಅರಿತು ಸುಮಾರು 100 ಕೋಟಿ ಹಣವನ್ನು ಅನಿವಾಸಿ ಕನ್ನಡಿಗರ ನೆರವಿಗೆ ನೀಡಿದಲ್ಲಿ ಮತ್ತೆ ಅನಿವಾಸಿ ಕನ್ನಡಿಗರ ಕೊಡುಗೆ ಹೆಚ್ಚಾಗುತ್ತದೆ, ಯಡಿಯೂರಪ್ಪನವರು ಹೇಳಿದಂತೆ ಕರ್ನಾಟಕ ಮುಂದುವರಿಯುತ್ತದೆ ಎಂಬ ಕಿವಿಮಾತು ಇಂಗ್ಲೆಂಡಿನಿಂದ ಆಗಮಿಸಿದ್ದ ಕುಂಟಿಕಾನಮಠ ಕುಮಾರ್ರವರು ಹೇಳಿದರು.
ಆಗ ಖ್ಯಾತ ಸಾಹಿತಿ ವಿಧಾನ ಪರಿಷತ್ ಸದಸ್ಯ, ಡಾ. ಚಂದ್ರಶೇಖರ್ ಕಂಬಾರ್ ಸ್ಪಂದಿಸುತ್ತಾ, ಒಳ್ಳೆಯ ಗಹನವಾದ ವಿಚಾರ. ನೀವು ಬರವಣಿಗೆಯಲ್ಲಿ ಕೊಡಿ ಎಂದರು.
ಗಲ್ಫ್ ಕನ್ನಡಿಗ : ಗಲ್ಫ್ ನಲ್ಲೊಂದು ಕರ್ನಾಟಕದ ಪ್ರತಿಬಿಂಬ
ಪೂರಕ ಓದಿಗೆ
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications