ಅಮೆರಿಕನ್ನಡಿಗನಿಗೆ ‘ವೈದಿಕ ರತ್ನ'ಪ್ರದಾನ

ವೃತ್ತಿಯಿಂದ ವೆಟರ್ನರಿ ಮೆಡಿಕಲ್ ಆಫೀಸರ್ ಮತ್ತು ಪ್ರವೃತ್ತಿಯಿಂದ ವೇದಶಾಸ್ತ್ರ ವಿದ್ವಾಂಸನಾಗಿರುವ ಕೃಷ್ಣಮೂರ್ತಿಯವರು ಕಳೆದ 35ವರ್ಷಗಳಿಂದ ಅಮೆರಿಕದಲ್ಲಿ ವಾಸವಾಗಿದ್ದಾರೆ. ಪ್ರಸ್ತುತ ಅಮೆರಿಕ ಸರಕಾರದ ಕೃಷಿ ಇಲಾಖೆ (ಡಿಪಾರ್ಟ್ಮೆಂಟ್ ಆಫ್ ಅಗ್ರಿಕಲ್ಚರ್, ಯು.ಎಸ್ ಫೆಡೆರಲ್ ಗವರ್ನ್ಮೆಂಟ್) ವಾಷಿಂಗ್ಟನ್ ಡಿಸಿ ಕಚೇರಿಯಲ್ಲಿ ಉನ್ನತ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ವಾರಾಂತ್ಯಗಳಲ್ಲಿ ಮತ್ತು ಬಿಡುವಿನ ವೇಳೆಯಲ್ಲಿ ವರ್ಜೀನಿಯಾದಲ್ಲಿರುವ ದುರ್ಗಾ ದೇವಸ್ಥಾನದಲ್ಲಿ ಸಹಾಯಕ ಅರ್ಚಕರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ. ಅಮೆರಿಕದ ವಿವಿಧೆಡೆಗಳಲ್ಲಿ ನಡೆದಿರುವ 'ಅಕ್ಕ" ವಿಶ್ವಕನ್ನಡ ಸಮ್ಮೇಳನಗಳ ಉದ್ಘಾಟನಾ ಸಮಾರಂಭದಲ್ಲಿ ವೇದಘೋಷ ಮೊಳಗಿಸುವ ಶುಭಕಾರ್ಯವನ್ನು ಡಾ.ಕೃಷ್ಣಮೂರ್ತಿ ಆಸ್ಥೆಯಿಂದ ನಡೆಸಿಕೊಂಡು ಬಂದಿದ್ದಾರೆ. 1986ರಲ್ಲಿ ಇವರು ವಾಷಿಂಗ್ಟನ್ ಮೆಟ್ರೊ ಪ್ರದೇಶದ 'ಕಾವೇರಿ"ಕನ್ನಡ ಸಂಘದ ಅಧ್ಯಕ್ಷ ಸ್ಥಾನವನ್ನೂ ಅಲಂಕರಿಸಿದ್ದರು.
ವೈದಿಕ ಕುಟುಂಬದಲ್ಲಿ ಜನಿಸಿದ ಕೃಷ್ಣಮೂರ್ತಿ, ಬಾಲ್ಯದಲ್ಲಿ ಹತ್ತು ವರ್ಷಗಳ ಕಾಲ ವೇದಾಧ್ಯಯನ ನಡೆಸಿದವರು. ವೃತ್ತಿ ಮತ್ತು ವಿದ್ಯಾಭ್ಯಾಸಗಳಿಗೋಸ್ಕರ ದೂರದ ಆಮೆರಿಕದಲ್ಲಿ ನೆಲೆಸಿದ ನಂತರವೂ ವೇದಾಧ್ಯಯನವನ್ನು ಮುಂದುವರಿಸಿಕೊಂಡು ಬಂದವರು. ಭಾರತೀಯ ಸಂಸ್ಕೃತಿ, ಸನಾತನ ಧರ್ಮಗಳ ಬಗ್ಗೆ ಅಪಾರ ಅಭಿಮಾನ, ಅವುಗಳ ಪ್ರಚಾರಕ್ಕಾಗಿ ಎಲೆಮೆರೆಯ ಕಾಯಿಯಂತೆ ಅವಿರತ ಪರಿಶ್ರಮ ಡಾ.ಕೃಷ್ಣಮೂರ್ತಿಯವರ ವ್ಯಕ್ತಿತ್ವದ ಸಾರಾಂಶ. ಇವರು ಅಮೆರಿಕದ ವಿವಿಧ ವಿಶ್ವವಿದ್ಯಾಲಯಗಳಲ್ಲಿನ ಹಿಂದೂ ಮತ್ತು ಇತರ ಧರ್ಮದ ವಿದ್ಯಾರ್ಥಿಗಳಿಗಾಗಿ ಉಪನ್ಯಾಸ, ವಿಚಾರಸಂಕಿರಣ, ತರಬೇತಿ ಶಿಬಿರಗಳನ್ನೂ ನಡೆಸುತ್ತಿದ್ದಾರೆ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications